BREAKING NEWS

Telangana Election Results 2023: ತೆಲಂಗಾಣದಲ್ಲಿ ಕಾಂಗ್ರೆಸ್‌ ಯಶಸ್ಸಿಗೆ ಕಾರಣವಾದ 5 ಅಂಶಗಳು

1. ಗ್ಯಾರಂಟಿ ಯೋಜನೆಗಳು: ಕಾಂಗ್ರೆಸ್‌ ಕರ್ನಾಟಕದ ಮಾದರಿಯಲ್ಲಿಯೇ ತೆಲಂಗಾಣದಲ್ಲಿಯೂ ಸಹ ಗ್ಯಾರಂಟಿ ಯೋಜನೆಗಳನ್ನು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಕಟಿಸಿತ್ತು. ಈ ಯೋಜನೆಗಳೂ ಸಹ ಕಾಂಗ್ರೆಸ್‌ ಯಶಸ್ಸಿಗೆ ಕಾರಣವಾಗಿದೆ. ಮಹಾಲಕ್ಷ್ಮಿ ಯೋಜನೆ, ರೈತು ಭರೋಸಾ, ಇಂದಿರಮ್ಮ ಯೋಜನೆ, ಗೃಹಜ್ಯೋತಿ, ಯುವ ವಿಕಾಸಂ ಹಾಗು ಚೆಯುತ ಯೋಜನೆಗಳನ್ನು ಕಾಂಗ್ರೆಸ್‌ ಘೋಷಿಸಿತ್ತು.

* ಮಹಾಲಕ್ಷ್ಮಿ ಯೋಜನೆ: ಪ್ರತಿ ತಿಂಗಳು ಮಹಿಳೆಯರಿಗೆ 2500, ಮಹಿಳೆಯರಿಗೆ 500 ಸಬ್ಸಿಡಿ ದರದಲ್ಲಿ ಸಿಲಿಂಡರ್‌, ಆರ್‌ಟಿಸಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ
* ರೈರು ಭರೋಸಾ ಯೋಜನೆ: ರಾಜ್ಯದ ರೈತರಿಗೆ ವಾರ್ಷಿಕ 15000, ಕೃಷಿ ಕೂಲಿಕಾರರಿಗೆ ವರ್ಷಕ್ಕೆ 12000, ಭತ್ತ ಬೆಳೆಯುವ ರೈತರಿಗೆ 500 ಬೋನಸ್.‌
* ಗೃಹಜ್ಯೋತಿ: ಎಲ್ಲಾ ಮನೆಗಳಿಗೆ 200 ಯೂನಿಟ್‌ ವಿದ್ಯುತ್‌ ಉಚಿತ, ಬಾಡಿಗೆ ಮನೆಗಳೂ ಸಹ ಈ ಯೋಜನೆಗೆ ಒಳಪಟ್ಟಿವೆ.
* ಇಂದಿರಮ್ಮ ಇಂಡ್ಲು: ಮನೆಯಿಲ್ಲದ ಅರ್ಹ ವ್ಯಕ್ತಿಗಳಿಗೆ ನಿವೇಶನ ಹಾಗೂ 5 ಲಕ್ಷ ರೂಪಾಯಿ ಹಣ, ತೆಲಂಗಾಣ ಚಳುವಳಿ ಹೋರಾಟಗಾರರಿಗೆ 250 ಚದರ ಗಜ ಜಾಗ ಉಚಿತ.
* ಯುವ ವಿಕಾಸಂ: ವಿದ್ಯಾರ್ಥಿಗಳಿಗೆ 5 ಲಕ್ಷ‍ ಮೌಲ್ಯದ ವಿದ್ಯಾ ಭರೋಸಾ ಕಾರ್ಡ್‌, ಪ್ರತಿ ಮಂಡಲದಲ್ಲಿ ತೆಲಂಗಾಣ ಇಂಟರ್‌ನ್ಯಾಷನಲ್‌ ಸ್ಕೂಲ್‌, 2 ಲಕ್ಷ ಉದ್ಯೋಗಾವಕಾಶ.
* ಚೇಯುತಾ: ಎಲ್ಲಾ ಅರ್ಹ ಪಿಂಚಣಿದಾರರಿಗೆ ಮಾಸಿಕ 4000 ರೂಪಾಯಿ ಪಿಂಚಣಿ, ಈ ಪಿಂಚಣಿದಾರರಿಗೆ ರಾಜೀವ್‌ ಆರೋಗ್ಯಶ್ರೀ ಯೋಜನೆಯಡಿಯಲ್ಲಿ 10 ಲಕ್ಷ ರೂಪಾಯಿಗಳ ವಿಮೆಯೊಂದಿಗಿನ ಪ್ರಯೋಜನ.

2. ಮುಸ್ಲಿಂ ಮತ: ಕಾಂಗ್ರೆಸ್‌ಗೆ ಮುಸ್ಲಿಂ ವೋಟ್‌ ಬ್ಯಾಂಕ್ ಲಭಿಸಿರುವುದು ಗೆಲುವಿಗೆ ಪ್ರಮಖ ಕಾರಣವಾಗಿದೆ. ಎಐಎಂಐಎಂ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದ ಮುಸ್ಲಿಂ ಮತದಾರರು ಮತ್ತೆ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ.

3. ಕೆಸಿಆರ್‌ ಆಡಳಿತದ ವಿರುದ್ಧದ ಹೇಳಿಕೆಗಳು: ಅಧಿಕಾರದಲ್ಲಿದ್ದ ಬಿಎಸ್‌ಆರ್‌ ಪಕ್ಷದ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ಸರ್ಕಾರ ವಿರುದ್ಧದ ಹೇಳಿಕೆಗಳು ಕಾಂಗ್ರೆಸ್‌ಗೆ ಅಭಿವೃದ್ಧಿ ಕಾಣದ ಗ್ರಾಮೀಣ ಹಾಗೂ ಅರೆ ನಗರ ಪ್ರದೇಶಗಳಲ್ಲಿನ ಮತಗಳು ಲಭಿಸುವಂತೆ ಮಾಡಿದವು.

4. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ: ಈ ವರ್ಷದ ಜುಲೈ ತಿಂಗಳಿನಲ್ಲಿ ತೆಲಂಗಾಣ ಬಿಜೆಪಿ ‍ಅಧ್ಯಕ್ಷರ ಬದಲಾವಣೆಯಾದದ್ದು ಕಾಂಗ್ರೆಸ್‌ಗೆ ವರದಾನವಾಯಿತು ಎಂದೇ ಹೇಳಬಹುದು. ಇದರಿಂದ ಬಿಜೆಪಿ ಪರ ಇದ್ದ ಮತಗಳು ಒಡೆಯಿತು ಹಾಗೂ ಬಿಜೆಪಿ ಹಿಡಿತ ಕಳೆದುಕೊಂಡದ್ದು ಸುಳ್ಳಲ್ಲ. ಜುಲೈ ತಿಂಗಳಿನಲ್ಲಿ ಬಂಡಿ ಸಂಜಯ್‌ ಕುಮಾರ್‌ ಬದಲಾಗಿ ಕಿಶನ್‌ ರೆಡ್ಡಿ ಅವರನ್ನು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

5. ಬಿಆರ್‌ಎಸ್‌ ವಿರುದ್ಧ ಭ್ರಷ್ಟಚಾರದ ಆರೋಪ: ಜುಲೈನಿಂದ ನವೆಂಬರ್‌ ತಿಂಗಳವರೆಗೆ ಕಾಂಗ್ರೆಸ್‌ ಬಿಆರ್‌ಎಸ್‌ ಪಕ್ಷದ ವಿರುದ್ಧ ಮಾಡಿದ ನೂರಾರು ಭ್ರಷ್ಟಾಚಾರದ ಆರೋಪಗಳು ಕಾಂಗ್ರೆಸ್‌ಗೆ ಅನುಕೂಲ ತಂದೊಡ್ಡಿದೆ.

6. ಅನುಮೂಲ ರೇವಂತ್‌ ರೆಡ್ಡಿ ಸಾಲು ಸಾಲು ಪ್ರಚಾರ, ಯಾತ್ರೆ: ಕಾಂಗ್ರೆಸ್‌ ಪಕ್ಷದ ರಾಜ್ಯಾಧ್ಯಕ್ಷ ಅನುಮೂಲ ರೇವಂತ್‌ ರೆಡ್ಡಿ ಮಾಡಿದ ಅಬ್ಬರದ ಪ್ರಚಾರ ಹಾಗೂ ಕಾಲ್ನಡಿಗೆ ಯಾತ್ರೆಗಳು ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಯಿತು.

andolana

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

57 mins ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

3 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

6 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

6 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

6 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

9 hours ago