BREAKING NEWS

Telangana Election Results 2023: ತೆಲಂಗಾಣದಲ್ಲಿ ಕಾಂಗ್ರೆಸ್‌ ಯಶಸ್ಸಿಗೆ ಕಾರಣವಾದ 5 ಅಂಶಗಳು

1. ಗ್ಯಾರಂಟಿ ಯೋಜನೆಗಳು: ಕಾಂಗ್ರೆಸ್‌ ಕರ್ನಾಟಕದ ಮಾದರಿಯಲ್ಲಿಯೇ ತೆಲಂಗಾಣದಲ್ಲಿಯೂ ಸಹ ಗ್ಯಾರಂಟಿ ಯೋಜನೆಗಳನ್ನು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಕಟಿಸಿತ್ತು. ಈ ಯೋಜನೆಗಳೂ ಸಹ ಕಾಂಗ್ರೆಸ್‌ ಯಶಸ್ಸಿಗೆ ಕಾರಣವಾಗಿದೆ. ಮಹಾಲಕ್ಷ್ಮಿ ಯೋಜನೆ, ರೈತು ಭರೋಸಾ, ಇಂದಿರಮ್ಮ ಯೋಜನೆ, ಗೃಹಜ್ಯೋತಿ, ಯುವ ವಿಕಾಸಂ ಹಾಗು ಚೆಯುತ ಯೋಜನೆಗಳನ್ನು ಕಾಂಗ್ರೆಸ್‌ ಘೋಷಿಸಿತ್ತು.

* ಮಹಾಲಕ್ಷ್ಮಿ ಯೋಜನೆ: ಪ್ರತಿ ತಿಂಗಳು ಮಹಿಳೆಯರಿಗೆ 2500, ಮಹಿಳೆಯರಿಗೆ 500 ಸಬ್ಸಿಡಿ ದರದಲ್ಲಿ ಸಿಲಿಂಡರ್‌, ಆರ್‌ಟಿಸಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ
* ರೈರು ಭರೋಸಾ ಯೋಜನೆ: ರಾಜ್ಯದ ರೈತರಿಗೆ ವಾರ್ಷಿಕ 15000, ಕೃಷಿ ಕೂಲಿಕಾರರಿಗೆ ವರ್ಷಕ್ಕೆ 12000, ಭತ್ತ ಬೆಳೆಯುವ ರೈತರಿಗೆ 500 ಬೋನಸ್.‌
* ಗೃಹಜ್ಯೋತಿ: ಎಲ್ಲಾ ಮನೆಗಳಿಗೆ 200 ಯೂನಿಟ್‌ ವಿದ್ಯುತ್‌ ಉಚಿತ, ಬಾಡಿಗೆ ಮನೆಗಳೂ ಸಹ ಈ ಯೋಜನೆಗೆ ಒಳಪಟ್ಟಿವೆ.
* ಇಂದಿರಮ್ಮ ಇಂಡ್ಲು: ಮನೆಯಿಲ್ಲದ ಅರ್ಹ ವ್ಯಕ್ತಿಗಳಿಗೆ ನಿವೇಶನ ಹಾಗೂ 5 ಲಕ್ಷ ರೂಪಾಯಿ ಹಣ, ತೆಲಂಗಾಣ ಚಳುವಳಿ ಹೋರಾಟಗಾರರಿಗೆ 250 ಚದರ ಗಜ ಜಾಗ ಉಚಿತ.
* ಯುವ ವಿಕಾಸಂ: ವಿದ್ಯಾರ್ಥಿಗಳಿಗೆ 5 ಲಕ್ಷ‍ ಮೌಲ್ಯದ ವಿದ್ಯಾ ಭರೋಸಾ ಕಾರ್ಡ್‌, ಪ್ರತಿ ಮಂಡಲದಲ್ಲಿ ತೆಲಂಗಾಣ ಇಂಟರ್‌ನ್ಯಾಷನಲ್‌ ಸ್ಕೂಲ್‌, 2 ಲಕ್ಷ ಉದ್ಯೋಗಾವಕಾಶ.
* ಚೇಯುತಾ: ಎಲ್ಲಾ ಅರ್ಹ ಪಿಂಚಣಿದಾರರಿಗೆ ಮಾಸಿಕ 4000 ರೂಪಾಯಿ ಪಿಂಚಣಿ, ಈ ಪಿಂಚಣಿದಾರರಿಗೆ ರಾಜೀವ್‌ ಆರೋಗ್ಯಶ್ರೀ ಯೋಜನೆಯಡಿಯಲ್ಲಿ 10 ಲಕ್ಷ ರೂಪಾಯಿಗಳ ವಿಮೆಯೊಂದಿಗಿನ ಪ್ರಯೋಜನ.

2. ಮುಸ್ಲಿಂ ಮತ: ಕಾಂಗ್ರೆಸ್‌ಗೆ ಮುಸ್ಲಿಂ ವೋಟ್‌ ಬ್ಯಾಂಕ್ ಲಭಿಸಿರುವುದು ಗೆಲುವಿಗೆ ಪ್ರಮಖ ಕಾರಣವಾಗಿದೆ. ಎಐಎಂಐಎಂ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದ ಮುಸ್ಲಿಂ ಮತದಾರರು ಮತ್ತೆ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ.

3. ಕೆಸಿಆರ್‌ ಆಡಳಿತದ ವಿರುದ್ಧದ ಹೇಳಿಕೆಗಳು: ಅಧಿಕಾರದಲ್ಲಿದ್ದ ಬಿಎಸ್‌ಆರ್‌ ಪಕ್ಷದ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ಸರ್ಕಾರ ವಿರುದ್ಧದ ಹೇಳಿಕೆಗಳು ಕಾಂಗ್ರೆಸ್‌ಗೆ ಅಭಿವೃದ್ಧಿ ಕಾಣದ ಗ್ರಾಮೀಣ ಹಾಗೂ ಅರೆ ನಗರ ಪ್ರದೇಶಗಳಲ್ಲಿನ ಮತಗಳು ಲಭಿಸುವಂತೆ ಮಾಡಿದವು.

4. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ: ಈ ವರ್ಷದ ಜುಲೈ ತಿಂಗಳಿನಲ್ಲಿ ತೆಲಂಗಾಣ ಬಿಜೆಪಿ ‍ಅಧ್ಯಕ್ಷರ ಬದಲಾವಣೆಯಾದದ್ದು ಕಾಂಗ್ರೆಸ್‌ಗೆ ವರದಾನವಾಯಿತು ಎಂದೇ ಹೇಳಬಹುದು. ಇದರಿಂದ ಬಿಜೆಪಿ ಪರ ಇದ್ದ ಮತಗಳು ಒಡೆಯಿತು ಹಾಗೂ ಬಿಜೆಪಿ ಹಿಡಿತ ಕಳೆದುಕೊಂಡದ್ದು ಸುಳ್ಳಲ್ಲ. ಜುಲೈ ತಿಂಗಳಿನಲ್ಲಿ ಬಂಡಿ ಸಂಜಯ್‌ ಕುಮಾರ್‌ ಬದಲಾಗಿ ಕಿಶನ್‌ ರೆಡ್ಡಿ ಅವರನ್ನು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

5. ಬಿಆರ್‌ಎಸ್‌ ವಿರುದ್ಧ ಭ್ರಷ್ಟಚಾರದ ಆರೋಪ: ಜುಲೈನಿಂದ ನವೆಂಬರ್‌ ತಿಂಗಳವರೆಗೆ ಕಾಂಗ್ರೆಸ್‌ ಬಿಆರ್‌ಎಸ್‌ ಪಕ್ಷದ ವಿರುದ್ಧ ಮಾಡಿದ ನೂರಾರು ಭ್ರಷ್ಟಾಚಾರದ ಆರೋಪಗಳು ಕಾಂಗ್ರೆಸ್‌ಗೆ ಅನುಕೂಲ ತಂದೊಡ್ಡಿದೆ.

6. ಅನುಮೂಲ ರೇವಂತ್‌ ರೆಡ್ಡಿ ಸಾಲು ಸಾಲು ಪ್ರಚಾರ, ಯಾತ್ರೆ: ಕಾಂಗ್ರೆಸ್‌ ಪಕ್ಷದ ರಾಜ್ಯಾಧ್ಯಕ್ಷ ಅನುಮೂಲ ರೇವಂತ್‌ ರೆಡ್ಡಿ ಮಾಡಿದ ಅಬ್ಬರದ ಪ್ರಚಾರ ಹಾಗೂ ಕಾಲ್ನಡಿಗೆ ಯಾತ್ರೆಗಳು ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಯಿತು.

andolana

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

4 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

5 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

5 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

5 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

5 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

5 hours ago