BREAKING NEWS

ಹಿಮಾಚಲ, ಉತ್ತರಾಖಂಡದಲ್ಲಿ ವರುಣನ ಆರ್ಭಟಕ್ಕೆ 54 ಮಂದಿ ಸಾವು

ನವದೆಹಲಿ : ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಈವರೆಗೂ 54 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹಿಮಾಚಲ ಪ್ರದೇಶ ಒಂದರಲ್ಲಿ 51 ಜನ ಸಾವನ್ನಪ್ಪಿದ್ದು, ಉತ್ತರಾಖಂಡದಲ್ಲಿ 3 ಜನ ಮೃತಪಟ್ಟಿದ್ದಾರೆ.

ಶಿಮ್ಲಾದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಭೂ ಕುಸಿತದಲ್ಲಿ ಈವರೆಗೂ 14 ಶವಗಳನ್ನು ಹೊರತೆಗೆಯಲಾಗಿದೆ. ಸಮ್ಮರ್ ಹಿಲ್ ಪ್ರದೇಶದ ಶಿವ ದೇವಾಲಯದ ಅವಶೇಷಗಳ ಅಡಿಯಲ್ಲಿ ಇನ್ನೂ ಹೆಚ್ಚಿನ ಜನರು ಸಿಲುಕಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಮಂಡಿ ಜಿಲ್ಲೆಯಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ. ಸೋಲನ್ ಜಿಲ್ಲೆಯಲ್ಲಿ ಒಂದು ಕುಟುಂಬದ ಏಳು ಸದಸ್ಯರು ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ. ಕುಲು, ಕಿನ್ನೌರ್, ಲಾಹೌಲ್ ಮತ್ತು ಸ್ಪಿತಿ ಹೊರತುಪಡಿಸಿ ರಾಜ್ಯದ 12 ಜಿಲ್ಲೆಗಳ ಪೈಕಿ ಒಂಬತ್ತು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ಜಿಲ್ಲಾಧಿಕಾರಿ ಅರಿಂದಮ್ ಚೌಧರಿ ತಿಳಿಸಿದ್ದಾರೆ.

ಯುನೆಸ್ಕೋ ವಿಶ್ವ ಪರಂಪರೆಯ ಶಿಮ್ಲಾ-ಕಲ್ಕಾ ರೈಲು ಮಾರ್ಗವು ಶಿಮ್ಲಾದ ಸಮ್ಮರ್ ಹಿಲ್ ಬಳಿ 50 ಮೀಟರ್ ಸೇತುವೆ, ಭೂಕುಸಿತದಿಂದ ಹಾನಿಗೊಳಗಾಗಿದೆ. ಟ್ರ್ಯಾಕ್‍ನ ಒಂದು ಭಾಗ ನೇತಾಡುತ್ತಿದೆ. ಈ ಭಾಗದಲ್ಲಿ ಸೇನೆ, ಎಸ್‍ಡಿಆರ್‍ಎಫ್, ಎನ್‍ಡಿಆರ್‍ಎಫ್, ಐಟಿಬಿಪಿ ಮತ್ತು ರಾಜ್ಯ ಪೊಲೀಸ್ ಸಿಬ್ಬಂದಿ ಪರಿಹಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

lokesh

Recent Posts

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

19 mins ago

ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷ: ಇನ್ನೂ ಚೇತರಿಸಿಕೊಳ್ಳದ ಪಾಕ್‌

ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷವಾಗಿದೆ.…

56 mins ago

ಡಿಕೆಶಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರೋದು ನಿಜ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…

2 hours ago

ಮೈಸೂರಿನಲ್ಲಿ ಮುಂದುವರಿದ ಕಾಡುಪ್ರಾಣಿಗಳ ಉಪಟಳ

ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…

2 hours ago

ಓದುಗರ ಪತ್ರ: ಚಿನ್ನದ ಹೆಸರಿನಲ್ಲಾಗುವ ವಂಚನೆಯನ್ನು ತಡೆಗಟ್ಟಿ

ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…

3 hours ago

ಓದುಗರ ಪತ್ರ: ವಿಜಯ್ ಉತ್ತಮ ಆಡಳಿತ ನೀಡಲಿ

ತಮಿಳುನಾಡಿನ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ ಜೋಸೆಫ್ ವಿಜಯ್ ಅವರು ಕೇವಲ ಎರಡು ವರ್ಷಗಳ ಹಿಂದೆ ರಾಜಕೀಯ ಪಕ್ಷ…

3 hours ago