BREAKING NEWS

ಹಿಮಾಚಲ, ಉತ್ತರಾಖಂಡದಲ್ಲಿ ವರುಣನ ಆರ್ಭಟಕ್ಕೆ 54 ಮಂದಿ ಸಾವು

ನವದೆಹಲಿ : ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಈವರೆಗೂ 54 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹಿಮಾಚಲ ಪ್ರದೇಶ ಒಂದರಲ್ಲಿ 51 ಜನ ಸಾವನ್ನಪ್ಪಿದ್ದು, ಉತ್ತರಾಖಂಡದಲ್ಲಿ 3 ಜನ ಮೃತಪಟ್ಟಿದ್ದಾರೆ.

ಶಿಮ್ಲಾದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಭೂ ಕುಸಿತದಲ್ಲಿ ಈವರೆಗೂ 14 ಶವಗಳನ್ನು ಹೊರತೆಗೆಯಲಾಗಿದೆ. ಸಮ್ಮರ್ ಹಿಲ್ ಪ್ರದೇಶದ ಶಿವ ದೇವಾಲಯದ ಅವಶೇಷಗಳ ಅಡಿಯಲ್ಲಿ ಇನ್ನೂ ಹೆಚ್ಚಿನ ಜನರು ಸಿಲುಕಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಮಂಡಿ ಜಿಲ್ಲೆಯಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ. ಸೋಲನ್ ಜಿಲ್ಲೆಯಲ್ಲಿ ಒಂದು ಕುಟುಂಬದ ಏಳು ಸದಸ್ಯರು ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ. ಕುಲು, ಕಿನ್ನೌರ್, ಲಾಹೌಲ್ ಮತ್ತು ಸ್ಪಿತಿ ಹೊರತುಪಡಿಸಿ ರಾಜ್ಯದ 12 ಜಿಲ್ಲೆಗಳ ಪೈಕಿ ಒಂಬತ್ತು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ಜಿಲ್ಲಾಧಿಕಾರಿ ಅರಿಂದಮ್ ಚೌಧರಿ ತಿಳಿಸಿದ್ದಾರೆ.

ಯುನೆಸ್ಕೋ ವಿಶ್ವ ಪರಂಪರೆಯ ಶಿಮ್ಲಾ-ಕಲ್ಕಾ ರೈಲು ಮಾರ್ಗವು ಶಿಮ್ಲಾದ ಸಮ್ಮರ್ ಹಿಲ್ ಬಳಿ 50 ಮೀಟರ್ ಸೇತುವೆ, ಭೂಕುಸಿತದಿಂದ ಹಾನಿಗೊಳಗಾಗಿದೆ. ಟ್ರ್ಯಾಕ್‍ನ ಒಂದು ಭಾಗ ನೇತಾಡುತ್ತಿದೆ. ಈ ಭಾಗದಲ್ಲಿ ಸೇನೆ, ಎಸ್‍ಡಿಆರ್‍ಎಫ್, ಎನ್‍ಡಿಆರ್‍ಎಫ್, ಐಟಿಬಿಪಿ ಮತ್ತು ರಾಜ್ಯ ಪೊಲೀಸ್ ಸಿಬ್ಬಂದಿ ಪರಿಹಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

lokesh

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

4 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

5 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

7 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

7 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

10 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

11 hours ago