The Union Minister for Finance and Corporate Affairs, Smt. Nirmala Sitharaman addressing a Press Conference, in New Delhi on June 28, 2021.
ನವದೆಹಲಿ: ಬಜೆಟ್ನಲ್ಲಿ ಘೋಷಿಸಲಾದ ವಿಶೇಷ ನೆರವು ಯೋಜನೆಯಡಿ ಪ್ರಸಕ್ತ ಹಣಕಾಸು ವರ್ಷದಲ್ಲಿ 16 ರಾಜ್ಯಗಳಿಗೆ 56,415 ಕೋಟಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಕೇಂದ್ರ ಹಣಕಾಸು ಸಚಿವಾಲಯ ಅನುಮೋದನೆ ನೀಡಿದೆ.
ರಾಜ್ಯಗಳಿಂದ ಬಂಡವಾಳ ವೆಚ್ಚವನ್ನು ಹೆಚ್ಚಿಸಲು 2023-24 ರ ಕೇಂದ್ರ ಬಜೆಟ್ನಲ್ಲಿ ‘ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು 2023-24’ ಯೋಜನೆಯನ್ನು ಘೋಷಿಸಲಾಗಿತ್ತು. ಈ ಯೋಜನೆಯಡಿ ಕರ್ನಾಟಕಕ್ಕೆ 3647 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.
ಆರೋಗ್ಯ, ಶಿಕ್ಷಣ, ನೀರಾವರಿ, ನೀರು ಸರಬರಾಜು, ವಿದ್ಯುತ್, ರಸ್ತೆಗಳು, ಸೇತುವೆಗಳು ಮತ್ತು ರೈಲ್ವೆ ಸೇರಿದಂತೆ ವಿವಿಧ ವಲಯಗಳಲ್ಲಿ ಬಂಡವಾಳ ಹೂಡಿಕೆ ಯೋಜನೆಗಳಿಗೆ ಕೇಂದ್ರ ಅನುಮೋದನೆ ನೀಡಿದೆ.
ಪಶ್ಚಿಮ ಬಂಗಾಳ, ಮಧ್ಯ ಪ್ರದೇಶ ಹಾಗೂ ಬಿಹಾರಕ್ಕೆ ಹೆಚ್ಚಿನ ನೆರವು ಘೋಷಿಸಲಾಗಿದೆ. ಈ ರಾಜ್ಯಗಳಿಗೆ ಕ್ರಮವಾಗಿ 7,523 ಕೋಟಿ ರೂ., 7,850 ರೂ, ಹಾಗೂ 9,640 ಕೋಟಿ ರೂ. ಘೋಷಣೆ ಮಾಡಲಾಗಿದೆ.
ಬಂಡವಾಳ ಹೂಡಿಕೆ ಯೋಜನೆಯಡಿಯಲ್ಲಿ, ರಾಜ್ಯ ಸರ್ಕಾರಗಳಿಗೆ ವಿಶೇಷ ಸಹಾಯವನ್ನು 50 ವರ್ಷಗಳ ಬಡ್ಡಿ ರಹಿತ ಸಾಲದ ರೂಪದಲ್ಲಿ ನೀಡಲಾಗುತ್ತದೆ. 2023-24ರ ಹಣಕಾಸು ವರ್ಷದಲ್ಲಿ 1.3 ಲಕ್ಷ ಕೋಟಿ ರೂ. ನೀಡಲು ಘೋಷಣೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…