The Union Minister for Finance and Corporate Affairs, Smt. Nirmala Sitharaman addressing a Press Conference, in New Delhi on June 28, 2021.
ನವದೆಹಲಿ: ಬಜೆಟ್ನಲ್ಲಿ ಘೋಷಿಸಲಾದ ವಿಶೇಷ ನೆರವು ಯೋಜನೆಯಡಿ ಪ್ರಸಕ್ತ ಹಣಕಾಸು ವರ್ಷದಲ್ಲಿ 16 ರಾಜ್ಯಗಳಿಗೆ 56,415 ಕೋಟಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಕೇಂದ್ರ ಹಣಕಾಸು ಸಚಿವಾಲಯ ಅನುಮೋದನೆ ನೀಡಿದೆ.
ರಾಜ್ಯಗಳಿಂದ ಬಂಡವಾಳ ವೆಚ್ಚವನ್ನು ಹೆಚ್ಚಿಸಲು 2023-24 ರ ಕೇಂದ್ರ ಬಜೆಟ್ನಲ್ಲಿ ‘ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು 2023-24’ ಯೋಜನೆಯನ್ನು ಘೋಷಿಸಲಾಗಿತ್ತು. ಈ ಯೋಜನೆಯಡಿ ಕರ್ನಾಟಕಕ್ಕೆ 3647 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.
ಆರೋಗ್ಯ, ಶಿಕ್ಷಣ, ನೀರಾವರಿ, ನೀರು ಸರಬರಾಜು, ವಿದ್ಯುತ್, ರಸ್ತೆಗಳು, ಸೇತುವೆಗಳು ಮತ್ತು ರೈಲ್ವೆ ಸೇರಿದಂತೆ ವಿವಿಧ ವಲಯಗಳಲ್ಲಿ ಬಂಡವಾಳ ಹೂಡಿಕೆ ಯೋಜನೆಗಳಿಗೆ ಕೇಂದ್ರ ಅನುಮೋದನೆ ನೀಡಿದೆ.
ಪಶ್ಚಿಮ ಬಂಗಾಳ, ಮಧ್ಯ ಪ್ರದೇಶ ಹಾಗೂ ಬಿಹಾರಕ್ಕೆ ಹೆಚ್ಚಿನ ನೆರವು ಘೋಷಿಸಲಾಗಿದೆ. ಈ ರಾಜ್ಯಗಳಿಗೆ ಕ್ರಮವಾಗಿ 7,523 ಕೋಟಿ ರೂ., 7,850 ರೂ, ಹಾಗೂ 9,640 ಕೋಟಿ ರೂ. ಘೋಷಣೆ ಮಾಡಲಾಗಿದೆ.
ಬಂಡವಾಳ ಹೂಡಿಕೆ ಯೋಜನೆಯಡಿಯಲ್ಲಿ, ರಾಜ್ಯ ಸರ್ಕಾರಗಳಿಗೆ ವಿಶೇಷ ಸಹಾಯವನ್ನು 50 ವರ್ಷಗಳ ಬಡ್ಡಿ ರಹಿತ ಸಾಲದ ರೂಪದಲ್ಲಿ ನೀಡಲಾಗುತ್ತದೆ. 2023-24ರ ಹಣಕಾಸು ವರ್ಷದಲ್ಲಿ 1.3 ಲಕ್ಷ ಕೋಟಿ ರೂ. ನೀಡಲು ಘೋಷಣೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…