BREAKING NEWS

1ನೇ ತರಗತಿ ಪ್ರವೇಶಕ್ಕೆ ಮಗುವಿಗೆ 6 ವರ್ಷ ಕಡ್ಡಾಯ: ಹೈಕೋರ್ಟ್

ಬೆಂಗಳೂರು :  ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ 1ನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ 6 ವರ್ಷ ತುಂಬಿರಲೇಬೇಕು, ಇಲ್ಲವಾದರೆ ಮಗುವಿಗೆ ಪ್ರವೇಶವಿಲ್ಲ.

ಈ ಕುರಿತಂತೆ ಕರ್ನಾಟಕ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಇದರಿಂದಾಗಿ ಪೋಷಕರು ಇನ್ನು ಮುಂದೆ ಮಕ್ಕಳನ್ನು ಶಾಲೆಗೆ ಸೇರಿಸಬೇಕಾದರೆ ಈ ನಿಯಮವನ್ನು ಪಾಲನೆ ಮಾಡಲೇಬೇಕಾಗುತ್ತದೆ.

2022ರ ಜುಲೈ 26ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರು ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕೆಂದು 4 ವರ್ಷದ ಪುತ್ರಿಯ ತಂದೆ ಬೆಂಗಳೂರಿನ ಅನಿಕೇತ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ನೇತೃತ್ವದ ಏಕಸದಸ್ಯ ಪೀಠವು ವಜಾ ಮಾಡಿದೆ.

ಅಲ್ಲದೆ, ಮಾರ್ಗಸೂಚಿಯ ಹಿಂದೆ ಮೇಲ್ನೋಟಕ್ಕೆ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ ಕೇಂದ್ರಿತ ಉದ್ದೇಶವಿದೆ ಎಂದು ನ್ಯಾಯಾಲಯಕ್ಕೆ ಅರ್ಥವಾಗಿದೆ. ಹೀಗಾಗಿ, ಒಬ್ಬ ವಿದ್ಯಾರ್ಥಿ/ ವಿದ್ಯಾರ್ಥಿನಿ ಅದೇ ತರಗತಿಯಲ್ಲಿ ಉಳಿಯಬೇಕಾಗುತ್ತದೆ ಎಂಬ ಕಾರಣಕ್ಕೆ ಮಾರ್ಗಸೂಚಿಯಲ್ಲಿ ಹಸ್ತಕ್ಷೇಪ ಮಾಡಲಾಗದು ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ಎನ್ ಇಪಿ ಅಳವಡಿಕೆ: ಜಾಗತಿಕ ಶೈಕ್ಷಣಿಕ ಮಾರ್ಗಸೂಚಿಗಳನ್ನು ಆಧರಿಸಿ ಪ್ರವೇಶಾತಿ ವಯಸ್ಸನ್ನು ಎನ್ಇಪಿ ಮಾನದಂಡಗಳಲ್ಲಿ ಸೇರಿಸಲಾಗಿದೆ. ಮಕ್ಕಳಿಗೆ ಸರಿಯಾದ ಆರೈಕೆ ಮತ್ತು ಶಿಕ್ಷಣ ನೀಡಬೇಕು. ಆಟ ಕೇಂದ್ರಿತ, ಚಟುವಟಿಕೆ ಕೇಂದ್ರಿತ, ಹೊಂದಿಕೊಳ್ಳುವ ಕಲಿಕೆಯ ಭರವಸೆಯ ಹಿನ್ನೆಲೆಯಲ್ಲಿ ತಜ್ಞರು ಹೊಸ ಮಾರ್ಗಸೂಚಿಗಳನ್ನು ರೂಪಿಸಿದ್ದಾರೆ. ಸಕ್ಷಮ ಪ್ರಾಧಿಕಾರ ರೂಪಿಸಿರುವ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಲಾಗದು ಎಂದು ನ್ಯಾಯಾಲಯವು ಆದೇಶದಲ್ಲಿ ತಿಳಿಸಿದೆ.

ರಾಷ್ಟ್ರೋತ್ಥಾನ ವಿದ್ಯಾಕೇಂದ್ರವು ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) 2020 ಅಳವಡಿಸಿಕೊಂಡಿದ್ದು, 1ನೇ ತರಗತಿ ಪ್ರವೇಶಕ್ಕೆ ಕನಿಷ್ಠ ಮತ್ತು ಗರಿಷ್ಠ ಅರ್ಹತಾ ಮಾನದಂಡವನ್ನು ಸರಿಯಾಗಿ ಮಾರ್ಪಾಡು ಮಾಡಿದೆ. ವಿದ್ಯಾಕೇಂದ್ರ ಮತ್ತು ರಾಜ್ಯ ಸರ್ಕಾರವು ಹೊರಡಿಸಿರುವ ಪ್ರವೇಶಾತಿ ಮಾರ್ಗಸೂಚಿಗಳು ಸಿಂಧುವಾಗಿದ್ದು, ಎನ್ಇಪಿಗೆ ಅನುಗುಣವಾಗಿವೆ ಎಂದು ಕೋರ್ಟ್ ಆದೇಶಿಸಿದೆ.

ರಾಷ್ಟ್ರೋತ್ಥಾನ ವಿದ್ಯಾಕೇಂದ್ರವನ್ನು ಶಿಕ್ಷಣ ಇಲಾಖೆಯ ಮೂಲಕ ಕೇಂದ್ರ ಸರ್ಕಾರ ನಡೆಸುತ್ತಿದೆ. ಹೀಗಾಗಿ, ವಿದ್ಯಾಕೇಂದ್ರವು ಎನ್ಇಪಿ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ಅರ್ಜಿದಾರರ ಪರ ವಕೀಲರು, 2020ರ ಮೇ 11ರ ಅಧಿಸೂಚನೆಯ ಪ್ರಕಾರ ಒಂದನೇ ತರಗತಿಗೆ ಪ್ರವೇಶ ಪಡೆಯಲು ಕನಿಷ್ಠ 5.5 ವರ್ಷ ಆಗಿರಬೇಕು. ಎಲ್‌ಕೆಜಿಗೆ ಮಗು ಸೇರಿಸಲು 3.5 ವರ್ಷ ಆಗಿರಬೇಕು ಎಂದು ಹೇಳಲಾಗಿದೆ. ಇದರಿಂದ ತೊಂದರೆ ಆಗಲಿದೆ ಎಂದು ವಾದಿಸಿದ್ದರು.

ರಾಜ್ಯ ಸರ್ಕಾರ ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊಕೇಟ್ ಅವರು “ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯಿದೆ 2009ರ ನಿಬಂಧನೆಗಳು ಮತ್ತು ಎನ್ಇಪಿಯನ್ನು ಗಮನದಲ್ಲಿಟ್ಟುಕೊಂಡು ಒಂದನೇ ತರಗತಿ ಪ್ರವೇಶಕ್ಕೆ ಕನಿಷ್ಠ ವಯಸ್ಸು ಮಿತಿ ನಿಗದಿಪಡಿಸಲಾಗಿದೆ” ಎಂದು ಸಮರ್ಥಿಸಿದ್ದರು.

ಏನಿದು ಪ್ರಕರಣ?; ಬೆಂಗಳೂರಿನ ಥಣಿಸಂದ್ರದಲ್ಲಿರುವ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ತ್ರಿಷಿಕಾಳನ್ನು ಪ್ರಸಕ್ತ ವರ್ಷ ಎಲ್‌ಕೆಜಿಗೆ ಸೇರ್ಪಡೆ ಮಾಡಿಕೊಳ್ಳುವಂತೆ ಆಕೆಯ ಪೋಷಕರು ಕೋರಿದ್ದರು. ಇದನ್ನು ಮನ್ನಿಸಿ, ಈ ಸಂಬಂಧ ಶಾಲೆಯು ಶುಲ್ಕವನ್ನೂ ವಸೂಲಿ ಮಾಡಿತ್ತು.

2023ರ ಜೂನ್ 1ಕ್ಕೆ ಸರಿಯಾಗಿ ನಾಲ್ಕು ವರ್ಷ ಪೂರ್ಣಗೊಳಿಸದಿರುವುದರಿಂದ ಆಕೆ ಎಲ್‌ಕೆಜಿ ಪ್ರವೇಶಕ್ಕೆ ಅರ್ಹಳಲ್ಲ ಎಂದು ಶಾಲೆಯು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರ 2018ರ ಮೇ 23ರ ಆದೇಶ ಉಲ್ಲೇಖಿಸಿ (ಒಂದನೇ ತರಗತಿ ಪ್ರವೇಶಕ್ಕೆ ವಯೋಮಿತಿ ನಿಗದಿ ಮಾಡಿರುವ ಆದೇಶ) 2023ರ ಮೇ 27ರಂದು ಪೋಷಕರಿಗೆ ಶಾಲೆಯು ಈಮೇಲ್ ಕಳುಹಿಸಿತ್ತು.

ಹಾಗಾಗಿ ಪೋಷಕರು ರಾಜ್ಯ ಸರ್ಕಾರವು ಒಂದನೇ ತರಗತಿ ಪ್ರವೇಶಕ್ಕೆ 2025-26ನೇ ಸಾಲಿನಲ್ಲಿ ಆರು ವರ್ಷ ತುಂಬಿರಬೇಕು ಎಂದು ಆದೇಶಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago