BREAKING NEWS

1ನೇ ತರಗತಿ ಪ್ರವೇಶಕ್ಕೆ ಮಗುವಿಗೆ 6 ವರ್ಷ ಕಡ್ಡಾಯ: ಹೈಕೋರ್ಟ್

ಬೆಂಗಳೂರು :  ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ 1ನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ 6 ವರ್ಷ ತುಂಬಿರಲೇಬೇಕು, ಇಲ್ಲವಾದರೆ ಮಗುವಿಗೆ ಪ್ರವೇಶವಿಲ್ಲ.

ಈ ಕುರಿತಂತೆ ಕರ್ನಾಟಕ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಇದರಿಂದಾಗಿ ಪೋಷಕರು ಇನ್ನು ಮುಂದೆ ಮಕ್ಕಳನ್ನು ಶಾಲೆಗೆ ಸೇರಿಸಬೇಕಾದರೆ ಈ ನಿಯಮವನ್ನು ಪಾಲನೆ ಮಾಡಲೇಬೇಕಾಗುತ್ತದೆ.

2022ರ ಜುಲೈ 26ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರು ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕೆಂದು 4 ವರ್ಷದ ಪುತ್ರಿಯ ತಂದೆ ಬೆಂಗಳೂರಿನ ಅನಿಕೇತ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ನೇತೃತ್ವದ ಏಕಸದಸ್ಯ ಪೀಠವು ವಜಾ ಮಾಡಿದೆ.

ಅಲ್ಲದೆ, ಮಾರ್ಗಸೂಚಿಯ ಹಿಂದೆ ಮೇಲ್ನೋಟಕ್ಕೆ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ ಕೇಂದ್ರಿತ ಉದ್ದೇಶವಿದೆ ಎಂದು ನ್ಯಾಯಾಲಯಕ್ಕೆ ಅರ್ಥವಾಗಿದೆ. ಹೀಗಾಗಿ, ಒಬ್ಬ ವಿದ್ಯಾರ್ಥಿ/ ವಿದ್ಯಾರ್ಥಿನಿ ಅದೇ ತರಗತಿಯಲ್ಲಿ ಉಳಿಯಬೇಕಾಗುತ್ತದೆ ಎಂಬ ಕಾರಣಕ್ಕೆ ಮಾರ್ಗಸೂಚಿಯಲ್ಲಿ ಹಸ್ತಕ್ಷೇಪ ಮಾಡಲಾಗದು ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ಎನ್ ಇಪಿ ಅಳವಡಿಕೆ: ಜಾಗತಿಕ ಶೈಕ್ಷಣಿಕ ಮಾರ್ಗಸೂಚಿಗಳನ್ನು ಆಧರಿಸಿ ಪ್ರವೇಶಾತಿ ವಯಸ್ಸನ್ನು ಎನ್ಇಪಿ ಮಾನದಂಡಗಳಲ್ಲಿ ಸೇರಿಸಲಾಗಿದೆ. ಮಕ್ಕಳಿಗೆ ಸರಿಯಾದ ಆರೈಕೆ ಮತ್ತು ಶಿಕ್ಷಣ ನೀಡಬೇಕು. ಆಟ ಕೇಂದ್ರಿತ, ಚಟುವಟಿಕೆ ಕೇಂದ್ರಿತ, ಹೊಂದಿಕೊಳ್ಳುವ ಕಲಿಕೆಯ ಭರವಸೆಯ ಹಿನ್ನೆಲೆಯಲ್ಲಿ ತಜ್ಞರು ಹೊಸ ಮಾರ್ಗಸೂಚಿಗಳನ್ನು ರೂಪಿಸಿದ್ದಾರೆ. ಸಕ್ಷಮ ಪ್ರಾಧಿಕಾರ ರೂಪಿಸಿರುವ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಲಾಗದು ಎಂದು ನ್ಯಾಯಾಲಯವು ಆದೇಶದಲ್ಲಿ ತಿಳಿಸಿದೆ.

ರಾಷ್ಟ್ರೋತ್ಥಾನ ವಿದ್ಯಾಕೇಂದ್ರವು ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) 2020 ಅಳವಡಿಸಿಕೊಂಡಿದ್ದು, 1ನೇ ತರಗತಿ ಪ್ರವೇಶಕ್ಕೆ ಕನಿಷ್ಠ ಮತ್ತು ಗರಿಷ್ಠ ಅರ್ಹತಾ ಮಾನದಂಡವನ್ನು ಸರಿಯಾಗಿ ಮಾರ್ಪಾಡು ಮಾಡಿದೆ. ವಿದ್ಯಾಕೇಂದ್ರ ಮತ್ತು ರಾಜ್ಯ ಸರ್ಕಾರವು ಹೊರಡಿಸಿರುವ ಪ್ರವೇಶಾತಿ ಮಾರ್ಗಸೂಚಿಗಳು ಸಿಂಧುವಾಗಿದ್ದು, ಎನ್ಇಪಿಗೆ ಅನುಗುಣವಾಗಿವೆ ಎಂದು ಕೋರ್ಟ್ ಆದೇಶಿಸಿದೆ.

ರಾಷ್ಟ್ರೋತ್ಥಾನ ವಿದ್ಯಾಕೇಂದ್ರವನ್ನು ಶಿಕ್ಷಣ ಇಲಾಖೆಯ ಮೂಲಕ ಕೇಂದ್ರ ಸರ್ಕಾರ ನಡೆಸುತ್ತಿದೆ. ಹೀಗಾಗಿ, ವಿದ್ಯಾಕೇಂದ್ರವು ಎನ್ಇಪಿ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ಅರ್ಜಿದಾರರ ಪರ ವಕೀಲರು, 2020ರ ಮೇ 11ರ ಅಧಿಸೂಚನೆಯ ಪ್ರಕಾರ ಒಂದನೇ ತರಗತಿಗೆ ಪ್ರವೇಶ ಪಡೆಯಲು ಕನಿಷ್ಠ 5.5 ವರ್ಷ ಆಗಿರಬೇಕು. ಎಲ್‌ಕೆಜಿಗೆ ಮಗು ಸೇರಿಸಲು 3.5 ವರ್ಷ ಆಗಿರಬೇಕು ಎಂದು ಹೇಳಲಾಗಿದೆ. ಇದರಿಂದ ತೊಂದರೆ ಆಗಲಿದೆ ಎಂದು ವಾದಿಸಿದ್ದರು.

ರಾಜ್ಯ ಸರ್ಕಾರ ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊಕೇಟ್ ಅವರು “ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯಿದೆ 2009ರ ನಿಬಂಧನೆಗಳು ಮತ್ತು ಎನ್ಇಪಿಯನ್ನು ಗಮನದಲ್ಲಿಟ್ಟುಕೊಂಡು ಒಂದನೇ ತರಗತಿ ಪ್ರವೇಶಕ್ಕೆ ಕನಿಷ್ಠ ವಯಸ್ಸು ಮಿತಿ ನಿಗದಿಪಡಿಸಲಾಗಿದೆ” ಎಂದು ಸಮರ್ಥಿಸಿದ್ದರು.

ಏನಿದು ಪ್ರಕರಣ?; ಬೆಂಗಳೂರಿನ ಥಣಿಸಂದ್ರದಲ್ಲಿರುವ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ತ್ರಿಷಿಕಾಳನ್ನು ಪ್ರಸಕ್ತ ವರ್ಷ ಎಲ್‌ಕೆಜಿಗೆ ಸೇರ್ಪಡೆ ಮಾಡಿಕೊಳ್ಳುವಂತೆ ಆಕೆಯ ಪೋಷಕರು ಕೋರಿದ್ದರು. ಇದನ್ನು ಮನ್ನಿಸಿ, ಈ ಸಂಬಂಧ ಶಾಲೆಯು ಶುಲ್ಕವನ್ನೂ ವಸೂಲಿ ಮಾಡಿತ್ತು.

2023ರ ಜೂನ್ 1ಕ್ಕೆ ಸರಿಯಾಗಿ ನಾಲ್ಕು ವರ್ಷ ಪೂರ್ಣಗೊಳಿಸದಿರುವುದರಿಂದ ಆಕೆ ಎಲ್‌ಕೆಜಿ ಪ್ರವೇಶಕ್ಕೆ ಅರ್ಹಳಲ್ಲ ಎಂದು ಶಾಲೆಯು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರ 2018ರ ಮೇ 23ರ ಆದೇಶ ಉಲ್ಲೇಖಿಸಿ (ಒಂದನೇ ತರಗತಿ ಪ್ರವೇಶಕ್ಕೆ ವಯೋಮಿತಿ ನಿಗದಿ ಮಾಡಿರುವ ಆದೇಶ) 2023ರ ಮೇ 27ರಂದು ಪೋಷಕರಿಗೆ ಶಾಲೆಯು ಈಮೇಲ್ ಕಳುಹಿಸಿತ್ತು.

ಹಾಗಾಗಿ ಪೋಷಕರು ರಾಜ್ಯ ಸರ್ಕಾರವು ಒಂದನೇ ತರಗತಿ ಪ್ರವೇಶಕ್ಕೆ 2025-26ನೇ ಸಾಲಿನಲ್ಲಿ ಆರು ವರ್ಷ ತುಂಬಿರಬೇಕು ಎಂದು ಆದೇಶಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

11 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

11 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

11 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

11 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

11 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

11 hours ago