BREAKING NEWS

ಕರ್ನಾಟಕ ರಾಜ್ಯೋತ್ಸವಕ್ಕೆ 68 ಸಾಧಕರಿಗೆ ಪ್ರಶಸ್ತಿ ಪ್ರದಾನ

ಬೆಂಗಳೂರು : ಈ ಬಾರಿಯ 68 ನೇ ಕನ್ನಡ ರಾಜ್ಯೋತ್ಸವಕ್ಕೆ 68 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದ್ದು ನವೆಂಬರ್‌ ಒಂದರಂದು ಸಿಎಂ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

68 ಸಾಧಕರು, 10 ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದ್ದು, ಎರಡು ದಿನಗಳಲ್ಲಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. ಅಂದಹಾಗೆ ಈ ಬಾರಿಯ ಎಲ್ಲ ಜಾತಿ, ಧರ್ಮ ಮತ್ತು ಲಿಂಗಗಳಿಗೆ ಪ್ರಾತಿನಿಧ್ಯ ಸಿಗಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು.

ಕನ್ನಡ ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ ಮಾತನಾಡಿ, ಇದೇ ಮೊದಲ ಬಾರಿಗೆ ಕನ್ನಡಕ್ಕಾಗಿ ದುಡಿದ ಹತ್ತು ಸಂಸ್ಥೆಗಳಿಗೆ ಪ್ರಶಸ್ತಿ ನೀಡಲಾಗುತ್ತದೆ. ನಮಗೆ ಈಗಾಗಲೇ 3523 ಅರ್ಜಿಗಳು ಬಂದಿದ್ದು, 26,655 ಶಿಫಾರಸುಗಳು ಬಂದಿವೆ.

28 ಸಮಿತಿಯ ಸದಸ್ಯರು ಗಣ್ಯರ ಹೆಸರನ್ನು ಆಯ್ಕೆ ಮಾಡುತ್ತಾರೆ. ಸಮಿತಿ ನೀಡಿರುವ ಹೆಸರುಗಳನ್ನು ಅನುಮೋದಿಸುತ್ತೇವೆ ಎಂದರು. ರಾಜ್ಯೋತ್ಸವ ಪ್ರಶಸ್ತಿಗಾಗಿ ಭೌತಿಕವಾಗಿ 2,500, ಸೇವಾ ಸಿಂಧು ಪೋರ್ಟಲ್ ಮೂಲಕ 4,500ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಸುಮಾರು 23 ಸಾವಿರಕ್ಕೂ ಅಧಿಕ ಜನ 2000 ಮಂದಿ ಸಾಧಕರನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ನಾಮನಿರ್ದೇಶನ ಮಾಡಿದ್ದಾರೆ.

lokesh

Recent Posts

ಹನೂರು| ಕಾವೇರಿ ನದಿ ದಾಟಿ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಆರಂಭಿಸಿದ ಭಕ್ತರು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ…

31 mins ago

ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ ಬಾಲಕನ ಮೇಲೆ ಚಿರತೆ ದಾಳಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ…

1 hour ago

ನಾನು, ಸಿಎಂ ಸಿದ್ದರಾಮಯ್ಯ ಕದ್ದುಮುಚ್ಚಿ ಮಾತನಾಡಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.…

2 hours ago

ಫೆಬ್ರವರಿ.12ರಂದು ರಾಜ್ಯಾದ್ಯಂತ ಬಿಸಿಯೂಟ ನೌಕರರ ಮುಷ್ಕರ

ಬೆಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆ ಮೇರೆಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಇದೇ ಫೆಬ್ರವರಿ.12ರಂದು ರಾಜ್ಯಾದ್ಯಂತ…

2 hours ago

ಅನುಮಾನಾಸ್ಪದವಾಗಿ ವ್ಯಕ್ತಿ ಸಾವು: ಮನೆ ಜಗುಲಿಯಲ್ಲೇ ಶವ ಪತ್ತೆ

ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು…

2 hours ago

ಮೈಸೂರಿನಲ್ಲಿ ಫೆಬ್ರವರಿ.14ರಂದು ಹನುಮಾನ್ ಚಾಲೀಸಾ ಪಾರಾಯಣ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫೆಬ್ರವರಿ.14ರಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಕಾರ್ಯಕ್ರಮ ನಡೆಯಲಿದೆ.…

3 hours ago