BREAKING NEWS

68ನೇ ಕರ್ನಾಟಕ ರಾಜ್ಯೋತ್ಸವ : ರಾಜ್ಯೋತ್ಸವ ಪ್ರಶಸ್ತಿಗೆ 68 ಆಯ್ಕೆ

ಬೆಂಗಳೂರು : ನಾಳೆ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ವಿವಿಧ ಸಾಧಕರನ್ನು ಗುರುತಿಸಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠ ಬೆಳೆದು ಬಂದಿದೆ.

ಇದೀಗ 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಹೊರಬಿದ್ದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ವಿವಿಧ ಸಾಧಕರ ಹೆಸರನ್ನು ಫೈನಲ್ ಮಾಡಲಾಗಿದೆ. ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಗಂಡಗಿ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರಶಸ್ತಿ ಪುರಸ್ಕೃತರು ಮತ್ತು ಪ್ರಶಸ್ತಿ ಸಂಘ ಸಂಸ್ಥೆಗಳ ಹೆಸರನ್ನು ಬಿಡುಗಡೆ ಮಾಡಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 68 ಸಾಧಕರು ಹಾಗೂ 10 ಸಂಸ್ಥೆಗಳಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ.

ಇಂದು ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರವು ರಂಗಭೂಮಿಯಲ್ಲಿ ಚಿದಂಬರರಾವ್ ಜಂಬೆ, ಯಕ್ಷಗಾನದಲ್ಲಿ ಕೆ.ಲೀಲಾವತಿ ಬೈಪಾಡಿತ್ತಾಯ, ಸಿನಿಮಾ ಕ್ಷೇತ್ರದಲ್ಲಿ ಡಿಂಗ್ರಿ ನಾಗರಾಜ್ ಹಾಗೂ ಬ್ಯಾಂಕ್ ಜನಾರ್ಧನ, ಸಾಹಿತ್ಯ ಕ್ಷೇತ್ರದಲ್ಲಿ ಪ್ರೊ. ಸಿ.ನಾಗಣ್ಣ, ಸುಬ್ಬು ಹೊಲೆಯಾರ್, ಪತ್ರಿಕೋದ್ಯಮದಲ್ಲಿ ದಿನೇಶ್ ಅಮೀನ್‌ಮಟ್ಟು, ಮಾಯಾ ಶರ್ಮ ಸೇರಿದಂತೆ 68 ಸಾಧಕರಿಗೆ ಪ್ರಶಸ್ತಿ ಪ್ರಕಟಿಸಲಾಗಿದೆ.

ಸರ್ಕಾರಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಎರಡು ಎಕರೆ ಭೂಮಿ ದಾನ ನೀಡಿದ್ದ ತಾಲ್ಲೂಕಿನ ಕುಣಿಕೇರಿ ಗ್ರಾಮದ ಹುಚ್ಚಮ್ಮ ಬಸಪ್ಪ ಚೌದ್ರಿ ಅವರಿಗೆ ಅರ್ಜಿ ಹಾಕದಿದ್ದರೂ ಸರ್ಕಾರ ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಇದು ಅಜ್ಜಿಯ ಬೆಟ್ಟದಷ್ಟು ಖುಷಿಗೆ ಕಾರಣವಾಗಿದ್ದು ಮಾಧ್ಯಮದವರು ಹೇಳಿದ ಮೇಲೆ ಪ್ರಶಸ್ತಿ ಬಂದ ವಿಚಾರ ನಂಗೆ ತಿಳಿಯಿತು. ಸರ್ಕಾರವೇ ಗುರುತಿಸಿ ಪ್ರಶಸ್ತಿ ಕೊಡುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಬಹಳಷ್ಟು ಸಂತೋಷವಾಗಿದೆ. ಈ ಪ್ರಶಸ್ತಿ ಗವಿಸಿದ್ದೇಶ್ವರ ಸ್ವಾಮೀಜಿಗೆ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.

ಶಿವಮೊಗ್ಗದ ಕರ್ನಾಟಕ ಸಂಘ, ಬೆಂಗಳೂರಿನ ಮಿಥಿಕ್ ಸೊಸೈಟಿ, ದಾವಣಗೆರೆಯ ಮೌಲಾನಾ ಆಜಾದ್ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಾಂಸ್ಕೃತಿಕ ಸಂಘ ಸೇರಿದಂತೆ ಹತ್ತು ಸಂಸ್ಥೆಗಳಿಗೆ ಪ್ರಶಸ್ತಿ ಘೋಷಣೆಯಾಗಿದೆ.

ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ಸುವರ್ಣ ವರ್ಷದ ನೆನಪಿಗಾಗಿ ಕನ್ನಡ, ಕರ್ನಾಟಕದ ಏಳಿಗೆಗಾಗಿ ಶ್ರಮಿಸಿದ 10 ಸಂಘ-ಸಂಸ್ಥೆಗಳಿಗೆ ಈ ವರ್ಷ ಹೆಚ್ಚುವರಿಯಾಗಿ ಪ್ರಶಸ್ತಿ ನೀಡಲು ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ತೀರ್ಮಾನಿಸಿದೆ ಎಂದು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇನ್ನು ಇಸ್ರೋ ಸಂಸ್ಥೆ ಚೇರ್ಮನ್ ಎಸ್ ಸೋಮನಾಥ್ ಅವರಿಗೂ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ನಿರ್ಧರಿಸಿದೆ. ಈ ಬಾರಿ 12 ಮಹಿಳೆಯರು, ಒಬ್ಬರು ಮಂಗಳಮುಖಿಗೆ ಪ್ರಶಸ್ತಿ ನೀಡಲಾಗುತ್ತದೆ. ಇನ್ನುಳಿದಂತೆ ಸಿನಿಮಾ ಕ್ಷೇತ್ರದಿಂದ ಹಿರಿಯ ಪೋಷಕ ನಟರಾದ ಡಿಂಗ್ರಿ ನಾಗರಾಜ್ ಹಾಗೂ ಬ್ಯಾಂಕ್ ಜನಾರ್ಧನ್ ಅವರಿಗೆ ಹಾಗೂ ನ್ಯಾಯಾಂಗ ಕ್ಷೇತ್ರದಿಂದ ಜಸ್ಟೀಸ್ ವಿ. ಗೋಪಾಲಗೌಡ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.

lokesh

Recent Posts

ಪುಲ್ವಾಮಾ ದಾಳಿ 7 ವರ್ಷ : ಹುತಾತ್ಮರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ನಮನ

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ…

39 mins ago

ಎಮರ್ಜೆನ್ಸಿ ಲ್ಯಾಂಡಿಂಗ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…

1 hour ago

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

2 hours ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

3 hours ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

3 hours ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

3 hours ago