ಬೆಂಗಳೂರು : ನಾಳೆ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ವಿವಿಧ ಸಾಧಕರನ್ನು ಗುರುತಿಸಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠ ಬೆಳೆದು ಬಂದಿದೆ.
ಇದೀಗ 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಹೊರಬಿದ್ದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ವಿವಿಧ ಸಾಧಕರ ಹೆಸರನ್ನು ಫೈನಲ್ ಮಾಡಲಾಗಿದೆ. ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಗಂಡಗಿ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರಶಸ್ತಿ ಪುರಸ್ಕೃತರು ಮತ್ತು ಪ್ರಶಸ್ತಿ ಸಂಘ ಸಂಸ್ಥೆಗಳ ಹೆಸರನ್ನು ಬಿಡುಗಡೆ ಮಾಡಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 68 ಸಾಧಕರು ಹಾಗೂ 10 ಸಂಸ್ಥೆಗಳಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ.
ಇಂದು ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರವು ರಂಗಭೂಮಿಯಲ್ಲಿ ಚಿದಂಬರರಾವ್ ಜಂಬೆ, ಯಕ್ಷಗಾನದಲ್ಲಿ ಕೆ.ಲೀಲಾವತಿ ಬೈಪಾಡಿತ್ತಾಯ, ಸಿನಿಮಾ ಕ್ಷೇತ್ರದಲ್ಲಿ ಡಿಂಗ್ರಿ ನಾಗರಾಜ್ ಹಾಗೂ ಬ್ಯಾಂಕ್ ಜನಾರ್ಧನ, ಸಾಹಿತ್ಯ ಕ್ಷೇತ್ರದಲ್ಲಿ ಪ್ರೊ. ಸಿ.ನಾಗಣ್ಣ, ಸುಬ್ಬು ಹೊಲೆಯಾರ್, ಪತ್ರಿಕೋದ್ಯಮದಲ್ಲಿ ದಿನೇಶ್ ಅಮೀನ್ಮಟ್ಟು, ಮಾಯಾ ಶರ್ಮ ಸೇರಿದಂತೆ 68 ಸಾಧಕರಿಗೆ ಪ್ರಶಸ್ತಿ ಪ್ರಕಟಿಸಲಾಗಿದೆ.
ಸರ್ಕಾರಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಎರಡು ಎಕರೆ ಭೂಮಿ ದಾನ ನೀಡಿದ್ದ ತಾಲ್ಲೂಕಿನ ಕುಣಿಕೇರಿ ಗ್ರಾಮದ ಹುಚ್ಚಮ್ಮ ಬಸಪ್ಪ ಚೌದ್ರಿ ಅವರಿಗೆ ಅರ್ಜಿ ಹಾಕದಿದ್ದರೂ ಸರ್ಕಾರ ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಇದು ಅಜ್ಜಿಯ ಬೆಟ್ಟದಷ್ಟು ಖುಷಿಗೆ ಕಾರಣವಾಗಿದ್ದು ಮಾಧ್ಯಮದವರು ಹೇಳಿದ ಮೇಲೆ ಪ್ರಶಸ್ತಿ ಬಂದ ವಿಚಾರ ನಂಗೆ ತಿಳಿಯಿತು. ಸರ್ಕಾರವೇ ಗುರುತಿಸಿ ಪ್ರಶಸ್ತಿ ಕೊಡುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಬಹಳಷ್ಟು ಸಂತೋಷವಾಗಿದೆ. ಈ ಪ್ರಶಸ್ತಿ ಗವಿಸಿದ್ದೇಶ್ವರ ಸ್ವಾಮೀಜಿಗೆ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.
ಶಿವಮೊಗ್ಗದ ಕರ್ನಾಟಕ ಸಂಘ, ಬೆಂಗಳೂರಿನ ಮಿಥಿಕ್ ಸೊಸೈಟಿ, ದಾವಣಗೆರೆಯ ಮೌಲಾನಾ ಆಜಾದ್ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಾಂಸ್ಕೃತಿಕ ಸಂಘ ಸೇರಿದಂತೆ ಹತ್ತು ಸಂಸ್ಥೆಗಳಿಗೆ ಪ್ರಶಸ್ತಿ ಘೋಷಣೆಯಾಗಿದೆ.
ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ಸುವರ್ಣ ವರ್ಷದ ನೆನಪಿಗಾಗಿ ಕನ್ನಡ, ಕರ್ನಾಟಕದ ಏಳಿಗೆಗಾಗಿ ಶ್ರಮಿಸಿದ 10 ಸಂಘ-ಸಂಸ್ಥೆಗಳಿಗೆ ಈ ವರ್ಷ ಹೆಚ್ಚುವರಿಯಾಗಿ ಪ್ರಶಸ್ತಿ ನೀಡಲು ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ತೀರ್ಮಾನಿಸಿದೆ ಎಂದು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇನ್ನು ಇಸ್ರೋ ಸಂಸ್ಥೆ ಚೇರ್ಮನ್ ಎಸ್ ಸೋಮನಾಥ್ ಅವರಿಗೂ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ನಿರ್ಧರಿಸಿದೆ. ಈ ಬಾರಿ 12 ಮಹಿಳೆಯರು, ಒಬ್ಬರು ಮಂಗಳಮುಖಿಗೆ ಪ್ರಶಸ್ತಿ ನೀಡಲಾಗುತ್ತದೆ. ಇನ್ನುಳಿದಂತೆ ಸಿನಿಮಾ ಕ್ಷೇತ್ರದಿಂದ ಹಿರಿಯ ಪೋಷಕ ನಟರಾದ ಡಿಂಗ್ರಿ ನಾಗರಾಜ್ ಹಾಗೂ ಬ್ಯಾಂಕ್ ಜನಾರ್ಧನ್ ಅವರಿಗೆ ಹಾಗೂ ನ್ಯಾಯಾಂಗ ಕ್ಷೇತ್ರದಿಂದ ಜಸ್ಟೀಸ್ ವಿ. ಗೋಪಾಲಗೌಡ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…