BREAKING NEWS

69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಅತ್ಯುತ್ತಮ ಕನ್ನಡ ಚಿತ್ರವಾಗಿ ‘ಚಾರ್ಲಿ 777’

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿವೆ. ಇವತ್ತು (ಆಗಸ್ಟ್ 24) ಸಂಜೆ 5.30ಕ್ಕೆ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಯಿತು. ಈ ಬಾರಿಯೂ ಅತ್ಯುತ್ತಮ ನಟ ಪ್ರಶಸ್ತಿ ದಕ್ಷಿಣ ಭಾರತಕ್ಕೆ ಲಭಿಸಿದೆ. ‘ಪುಷ್ಪ: ದಿ ರೈಸ್’ ಚಿತ್ರದ ನಟನೆಗಾಗಿ ತೆಲುಗಿನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ‘ಅತ್ಯುತ್ತಮ ನಟ’ ಪ್ರಶಸ್ತಿ ಪಡೆದಿದ್ದಾರೆ. ‘ಅತ್ಯುತ್ತಮ ನಟಿ’ ಪ್ರಶಸ್ತಿ ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ಕೃತಿ ಸನೊನ್ ಪಾಲಾಗಿದೆ.

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪೈಕಿ ಕರ್ನಾಟಕಕ್ಕೆ ಒಟ್ಟು 4 ಪ್ರಶಸ್ತಿಗಳು ಲಭಿಸಿವೆ. ಆ ಕುರಿತ ಸಂಪೂರ್ಣ ವಿವರ ಇಲ್ಲಿದೆ

*ಕ್ರಿಟಿಕ್ (ಸ್ಪೆಷಲ್ ಮೆನ್ಷನ್)
ಸುಬ್ರಹ್ಮಣ್ಯ ಬಡೂರು

*ನಾನ್ ಫೀಚರ್‌ (ಸ್ಪೆಷಲ್ ಮೆನ್ಷನ್)
ಚಿತ್ರ – ಬಾಳೇ ಬಂಗಾರ : ಅನಿರುದ್ಧ ಜತ್ಕರ್‌

*ನಾನ್ ಫೀಚರ್ ಫಿಲ್ಸ್ (ಬೆಸ್ಟ್ ಎಕ್ಸ್‌ಪ್ಲೋರೇಷನ್/ಅಡ್ವೆಂಚರ್‌ ಫಿಲ್ಮ್)
ಚಿತ್ರ – ಆಯುಷ್ಮಾನ್ (ಇಂಗ್ಲೀಷ್, ಕನ್ನಡ)
ನಿರ್ಮಾಣ – ಮ್ಯಾಥ್ಯೂ ವರ್ಗೀಸ್, ದಿನೇಶ್ ರಾಜ್‌ಕುಮಾರ್ ಎನ್‌, ನವೀನ್ ಫ್ರಾನ್ಸಿಸ್
ನಿರ್ದೇಶನ – ಜೇಕಬ್ ವರ್ಗೀಸ್

*ಫೀಚರ್ ಫಿಲ್ಮ್ಸ್
ಅತ್ಯುತ್ತಮ ಕನ್ನಡ ಸಿನಿಮಾ – 777 ಚಾರ್ಲಿ
ನಿರ್ಮಾಣ – ಪರಂವಃ ಸ್ಟುಡಿಯೋಸ್

ಭಾರತಿ ವಿಷ್ಣುವರ್ಧನ್ ಕುರಿತಾದ ಸಾಕ್ಷ್ಯಚಿತ್ರ ‘ಬಾಳೇ ಬಂಗಾರ’

ತಮ್ಮ ಅತ್ತೆ ಪದ್ಮಶ್ರೀ ಪುರಸ್ಕೃತೆ ಭಾರತಿ ವಿಷ್ಣುವರ್ಧನ್ ಕುರಿತಾಗಿ ಅನಿರುದ್ಧ್ ಜತ್ಕರ್‌ ತಯಾರಿಸಿದ ಸಾಕ್ಷ್ಯಚಿತ್ರವೇ ‘ಬಾಳೇ ಬಂಗಾರ’. ಈಗಾಗಲೇ ‘ಬಾಳೇ ಬಂಗಾರ’ ಸಾಕ್ಷ್ಯಚಿತ್ರ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ಏಷ್ಯಾ ಬುಕ್ ಆಫ್ ರೆಕಾರ್ಡ್ಸ್, ಕಲಾಂ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದಿದೆ. ಮೇರು ನಟಿಯೊಬ್ಬರ ಕುರಿತಾದ ಅತ್ಯಂತ ದೀರ್ಘ ಕಾಲಾವಧಿಯ (141 ನಿಮಿಷಗಳು) ಸಾಕ್ಷ್ಯಚಿತ್ರ ಇದಾಗಿದೆ. ಈ ಸಾಕ್ಷ್ಯಚಿತ್ರದ ಪರಿಕಲ್ಪನೆ, ಸಂಶೋಧನೆ, ಲೇಖನ, ನಿರೂಪಣೆ ಹಾಗೂ ನಿರ್ದೇಶನವನ್ನ ಮಾಡಿದವರು ಅನಿರುದ್ಧ್ ಜತ್ಕರ್.

777 ಚಾರ್ಲಿ

ಶ್ವಾನ ಹಾಗೂ ಮನುಷ್ಯನ ನಡುವಿನ ಅನ್ಯೋನ್ಯ ಬಂಧವನ್ನ ಸಾರುವ ಮನಮಿಡಿಯುವ ಸಿನಿಮಾ ‘777 ಚಾರ್ಲಿ’. ಕಿರಣ್ ರಾಜ್ ಕೆ ನಿರ್ದೇಶನದ ‘777 ಚಾರ್ಲಿ’ ಸಿನಿಮಾದಲ್ಲಿ ಧರ್ಮ ಆಗಿ ರಕ್ಷಿತ್ ಶೆಟ್ಟಿ ಅಭಿನಯಿಸಿದ್ದರೆ, ಚಾರ್ಲಿ ಆಗಿ ಲ್ಯಾಬ್ರಡಾರ್‌ ತಳಿಯ ಶ್ವಾನ ಕಾಣಿಸಿಕೊಂಡಿತ್ತು. ತಾರಾಬಳಗದಲ್ಲಿ ಸಂಗೀತಾ ಶೃಂಗೇರಿ, ರಾಜ್ ಬಿ ಶೆಟ್ಟಿ, ಭಾರ್ಗವಿ ನಾರಾಯಣ್ ಮುಂತಾದವರಿದ್ದರು. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದ್ದ ‘777 ಚಾರ್ಲಿ’ ಸಿನಿಮಾಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಫ್ಯಾಮಿಲಿ ಆಡಿಯೆನ್ಸ್ ಹಾಗೂ ಮಕ್ಕಳಿಂದ ‘777 ಚಾರ್ಲಿ’ ಚಿತ್ರಕ್ಕೆ ವ್ಯಾಪಕ ಮೆಚ್ಚುಗೆ ಲಭಿಸಿತು. 20 ಕೋಟಿ ರೂಪಾಯಿ ಬಜೆಟ್‌ನಲ್ಲಿ ತಯಾರಾಗಿದ್ದ ‘777 ಚಾರ್ಲಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 105 ಕೋಟಿ ರೂಪಾಯಿ ಗಳಿಸುವಲ್ಲಿ ಯಶಸ್ವಿಯಾಯಿತು.

andolanait

Recent Posts

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

1 min ago

ನರೇಗಾಗೆ ಯಾವ ಹೆಸರನ್ನು ಬೇಕಾದರು ಇಡಲಿ ; ಅಭ್ಯಂತರ ಇಲ್ಲ : ಸಚಿವ ಪ್ರಿಯಾಂಕ ಖರ್ಗೆ

ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ…

19 mins ago

ದುರಂದರ್ ದರ್ಬಾರ್….. ಮರಳಿ ಟ್ರ್ಯಾಕ್ ಗೆ ಬಂತು ಬಾಲಿವುಡ್.?

ಮುಂಬೈ : ಸಾಲು ಸಾಲು ಸೋಲುಗಳಿಂದ ನೆಲಕಚ್ಚಿದ್ದ ಬಾಲಿವುಡ್ ಇಂಡಸ್ಟ್ರಿಯ ಭವಿಷ್ಯವನ್ನೇ ದುರಂದರ ಸಿನಿಮಾ ಬದಲಿಸಿದೆ. ರಣವೀರ್ ಸಿಂಗ್ ನಟನೆಯ…

40 mins ago

ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಬಲಿ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ…

1 hour ago

ಕಾರವಾರದ ಕದಂಬ ನೌಕನೆಲೆಗೆ ರಾಷ್ಟ್ರಪತಿ ಭೇಟಿ ನಾಳೆ

ಬೆಂಗಳೂರು‌ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಏಷ್ಯಾದ ಅತಿದೊಡ್ಡ ನೌಕಾನೆಲೆ ಐಎನ್…

2 hours ago

ಲೋಕ್ ಅದಾಲತ್‌ನಲ್ಲಿ 14,850 ಪ್ರಕರಣ ಇತ್ಯರ್ಥ : ಒಂದಾದ ಕೌಟುಂಬಿಕ ಕಲಹದಿಂದ ಬೇರ್ಪಟ್ಟಿದ್ದ 6 ದಂಪತಿಗಳು

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ನಡೆದ ಲೋಕ್ ಅದಾಲತ್‌ನಲ್ಲಿ ಒಟ್ಟು 14,850 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ,…

2 hours ago