BREAKING NEWS

69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಅತ್ಯುತ್ತಮ ಕನ್ನಡ ಚಿತ್ರವಾಗಿ ‘ಚಾರ್ಲಿ 777’

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿವೆ. ಇವತ್ತು (ಆಗಸ್ಟ್ 24) ಸಂಜೆ 5.30ಕ್ಕೆ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಯಿತು. ಈ ಬಾರಿಯೂ ಅತ್ಯುತ್ತಮ ನಟ ಪ್ರಶಸ್ತಿ ದಕ್ಷಿಣ ಭಾರತಕ್ಕೆ ಲಭಿಸಿದೆ. ‘ಪುಷ್ಪ: ದಿ ರೈಸ್’ ಚಿತ್ರದ ನಟನೆಗಾಗಿ ತೆಲುಗಿನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ‘ಅತ್ಯುತ್ತಮ ನಟ’ ಪ್ರಶಸ್ತಿ ಪಡೆದಿದ್ದಾರೆ. ‘ಅತ್ಯುತ್ತಮ ನಟಿ’ ಪ್ರಶಸ್ತಿ ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ಕೃತಿ ಸನೊನ್ ಪಾಲಾಗಿದೆ.

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪೈಕಿ ಕರ್ನಾಟಕಕ್ಕೆ ಒಟ್ಟು 4 ಪ್ರಶಸ್ತಿಗಳು ಲಭಿಸಿವೆ. ಆ ಕುರಿತ ಸಂಪೂರ್ಣ ವಿವರ ಇಲ್ಲಿದೆ

*ಕ್ರಿಟಿಕ್ (ಸ್ಪೆಷಲ್ ಮೆನ್ಷನ್)
ಸುಬ್ರಹ್ಮಣ್ಯ ಬಡೂರು

*ನಾನ್ ಫೀಚರ್‌ (ಸ್ಪೆಷಲ್ ಮೆನ್ಷನ್)
ಚಿತ್ರ – ಬಾಳೇ ಬಂಗಾರ : ಅನಿರುದ್ಧ ಜತ್ಕರ್‌

*ನಾನ್ ಫೀಚರ್ ಫಿಲ್ಸ್ (ಬೆಸ್ಟ್ ಎಕ್ಸ್‌ಪ್ಲೋರೇಷನ್/ಅಡ್ವೆಂಚರ್‌ ಫಿಲ್ಮ್)
ಚಿತ್ರ – ಆಯುಷ್ಮಾನ್ (ಇಂಗ್ಲೀಷ್, ಕನ್ನಡ)
ನಿರ್ಮಾಣ – ಮ್ಯಾಥ್ಯೂ ವರ್ಗೀಸ್, ದಿನೇಶ್ ರಾಜ್‌ಕುಮಾರ್ ಎನ್‌, ನವೀನ್ ಫ್ರಾನ್ಸಿಸ್
ನಿರ್ದೇಶನ – ಜೇಕಬ್ ವರ್ಗೀಸ್

*ಫೀಚರ್ ಫಿಲ್ಮ್ಸ್
ಅತ್ಯುತ್ತಮ ಕನ್ನಡ ಸಿನಿಮಾ – 777 ಚಾರ್ಲಿ
ನಿರ್ಮಾಣ – ಪರಂವಃ ಸ್ಟುಡಿಯೋಸ್

ಭಾರತಿ ವಿಷ್ಣುವರ್ಧನ್ ಕುರಿತಾದ ಸಾಕ್ಷ್ಯಚಿತ್ರ ‘ಬಾಳೇ ಬಂಗಾರ’

ತಮ್ಮ ಅತ್ತೆ ಪದ್ಮಶ್ರೀ ಪುರಸ್ಕೃತೆ ಭಾರತಿ ವಿಷ್ಣುವರ್ಧನ್ ಕುರಿತಾಗಿ ಅನಿರುದ್ಧ್ ಜತ್ಕರ್‌ ತಯಾರಿಸಿದ ಸಾಕ್ಷ್ಯಚಿತ್ರವೇ ‘ಬಾಳೇ ಬಂಗಾರ’. ಈಗಾಗಲೇ ‘ಬಾಳೇ ಬಂಗಾರ’ ಸಾಕ್ಷ್ಯಚಿತ್ರ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ಏಷ್ಯಾ ಬುಕ್ ಆಫ್ ರೆಕಾರ್ಡ್ಸ್, ಕಲಾಂ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದಿದೆ. ಮೇರು ನಟಿಯೊಬ್ಬರ ಕುರಿತಾದ ಅತ್ಯಂತ ದೀರ್ಘ ಕಾಲಾವಧಿಯ (141 ನಿಮಿಷಗಳು) ಸಾಕ್ಷ್ಯಚಿತ್ರ ಇದಾಗಿದೆ. ಈ ಸಾಕ್ಷ್ಯಚಿತ್ರದ ಪರಿಕಲ್ಪನೆ, ಸಂಶೋಧನೆ, ಲೇಖನ, ನಿರೂಪಣೆ ಹಾಗೂ ನಿರ್ದೇಶನವನ್ನ ಮಾಡಿದವರು ಅನಿರುದ್ಧ್ ಜತ್ಕರ್.

777 ಚಾರ್ಲಿ

ಶ್ವಾನ ಹಾಗೂ ಮನುಷ್ಯನ ನಡುವಿನ ಅನ್ಯೋನ್ಯ ಬಂಧವನ್ನ ಸಾರುವ ಮನಮಿಡಿಯುವ ಸಿನಿಮಾ ‘777 ಚಾರ್ಲಿ’. ಕಿರಣ್ ರಾಜ್ ಕೆ ನಿರ್ದೇಶನದ ‘777 ಚಾರ್ಲಿ’ ಸಿನಿಮಾದಲ್ಲಿ ಧರ್ಮ ಆಗಿ ರಕ್ಷಿತ್ ಶೆಟ್ಟಿ ಅಭಿನಯಿಸಿದ್ದರೆ, ಚಾರ್ಲಿ ಆಗಿ ಲ್ಯಾಬ್ರಡಾರ್‌ ತಳಿಯ ಶ್ವಾನ ಕಾಣಿಸಿಕೊಂಡಿತ್ತು. ತಾರಾಬಳಗದಲ್ಲಿ ಸಂಗೀತಾ ಶೃಂಗೇರಿ, ರಾಜ್ ಬಿ ಶೆಟ್ಟಿ, ಭಾರ್ಗವಿ ನಾರಾಯಣ್ ಮುಂತಾದವರಿದ್ದರು. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದ್ದ ‘777 ಚಾರ್ಲಿ’ ಸಿನಿಮಾಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಫ್ಯಾಮಿಲಿ ಆಡಿಯೆನ್ಸ್ ಹಾಗೂ ಮಕ್ಕಳಿಂದ ‘777 ಚಾರ್ಲಿ’ ಚಿತ್ರಕ್ಕೆ ವ್ಯಾಪಕ ಮೆಚ್ಚುಗೆ ಲಭಿಸಿತು. 20 ಕೋಟಿ ರೂಪಾಯಿ ಬಜೆಟ್‌ನಲ್ಲಿ ತಯಾರಾಗಿದ್ದ ‘777 ಚಾರ್ಲಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 105 ಕೋಟಿ ರೂಪಾಯಿ ಗಳಿಸುವಲ್ಲಿ ಯಶಸ್ವಿಯಾಯಿತು.

andolanait

Recent Posts

ಶ್ರೀಹರಿಕೋಟ: ಇಸ್ರೋದಿಂದ ಮತ್ತೊಂದು ಮೈಲಿಗಲ್ಲು

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದು, ಬ್ಲೂಬರ್ಡ್‌ ಬ್ಲಾಕ್‌-2 ವಿದೇಶಿ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ…

8 mins ago

ರಾಜ್ಯದಲ್ಲಿ ಆಘಾತಕಾರಿ ಘಟನೆ: ಗಂಡು ಮಗುವಿಗೆ ಜನ್ಮ ನೀಡಿದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

ಹಾಸನ: ರಾಜ್ಯದಲಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಶಾಲಾ ವ್ಯಾನ್‌ ಚಾಲಕನಿಂದಲೇ ಲೈಂಗಿಕ ದೌರ್ಜನ್ಯಕ್ಕೊಳಗಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವ…

18 mins ago

ಉಳುಮೆ ಮಾಡುತ್ತಿದ್ದ ಟ್ರ್ಯಾಕ್ಟರ್‌ ಮೇಲೆ ಎಗರಿದ ಹುಲಿಗಳು; ಚಾಲಕ ಪಾರು

ಹುಣಸೂರು: ಟ್ರಾಕ್ಟರ್‌ನಲ್ಲಿ ಜಮೀನು ಉಳುಮೆ ಮಾಡುತ್ತಿದ್ದ ಚಾಲಕನ ಹುಲಿಗಳ ದಾಳಿಯಿಂದ ಬಚಾವಾಗಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ನೇಗತ್ತೂರು ಗ್ರಾಮದಲ್ಲಿ…

48 mins ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಪಕ್ಕದ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯ ಪಕ್ಕದಲ್ಲಿರುವ ಮೋರಿಯೊಳಗೆ ಕಸದ…

1 hour ago

ಓದುಗರ ಪತ್ರ: ಬಸ್ ನಿರ್ವಾಹಕರು ಸೌಜನ್ಯದಿಂದ ವರ್ತಿಸಬೇಕು

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಇತ್ತೀಚೆಗೆ ನಿಗದಿತ ಸಂಖ್ಯೆಗಿಂತ ಹೆಚ್ಚು ಜನ ಪ್ರಯಾಣಿಸುತ್ತಿರುವುದು ಸರ್ವೇಸಾಮಾನ್ಯ ಆಗಿಬಿಟ್ಟಿದೆ. ಈ ಕಾರಣದಿಂದ…

2 hours ago

ಓದುಗರ ಪತ್ರ:  ಆಸ್ಪತ್ರೆ: ಭರವಸೆಗಿಂತಲೂ ಭಯವೇ ಜಾಸ್ತಿ

ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜನರಿಗೆ ಆಸ್ಪತ್ರೆಗೆ ಹೋಗುವುದೆಂದರೆ ಜೀವ ಉಳಿಸಿಕೊಳ್ಳುವ ಭರವಸೆಗಿಂತ, ‘ಜೇಬಿಗೆಕತ್ತರಿ’ ಬೀಳುವ ಭೀತಿಯೇಹೆಚ್ಚಾಗಿದೆ. ದೇಶದಲ್ಲಿ ನಡೆಯುವ ಶಸ್ತ್ರಚಿಕಿತ್ಸೆಗಳಲ್ಲಿ…

2 hours ago