BREAKING NEWS

69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಅತ್ಯುತ್ತಮ ಕನ್ನಡ ಚಿತ್ರವಾಗಿ ‘ಚಾರ್ಲಿ 777’

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿವೆ. ಇವತ್ತು (ಆಗಸ್ಟ್ 24) ಸಂಜೆ 5.30ಕ್ಕೆ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಯಿತು. ಈ ಬಾರಿಯೂ ಅತ್ಯುತ್ತಮ ನಟ ಪ್ರಶಸ್ತಿ ದಕ್ಷಿಣ ಭಾರತಕ್ಕೆ ಲಭಿಸಿದೆ. ‘ಪುಷ್ಪ: ದಿ ರೈಸ್’ ಚಿತ್ರದ ನಟನೆಗಾಗಿ ತೆಲುಗಿನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ‘ಅತ್ಯುತ್ತಮ ನಟ’ ಪ್ರಶಸ್ತಿ ಪಡೆದಿದ್ದಾರೆ. ‘ಅತ್ಯುತ್ತಮ ನಟಿ’ ಪ್ರಶಸ್ತಿ ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ಕೃತಿ ಸನೊನ್ ಪಾಲಾಗಿದೆ.

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪೈಕಿ ಕರ್ನಾಟಕಕ್ಕೆ ಒಟ್ಟು 4 ಪ್ರಶಸ್ತಿಗಳು ಲಭಿಸಿವೆ. ಆ ಕುರಿತ ಸಂಪೂರ್ಣ ವಿವರ ಇಲ್ಲಿದೆ

*ಕ್ರಿಟಿಕ್ (ಸ್ಪೆಷಲ್ ಮೆನ್ಷನ್)
ಸುಬ್ರಹ್ಮಣ್ಯ ಬಡೂರು

*ನಾನ್ ಫೀಚರ್‌ (ಸ್ಪೆಷಲ್ ಮೆನ್ಷನ್)
ಚಿತ್ರ – ಬಾಳೇ ಬಂಗಾರ : ಅನಿರುದ್ಧ ಜತ್ಕರ್‌

*ನಾನ್ ಫೀಚರ್ ಫಿಲ್ಸ್ (ಬೆಸ್ಟ್ ಎಕ್ಸ್‌ಪ್ಲೋರೇಷನ್/ಅಡ್ವೆಂಚರ್‌ ಫಿಲ್ಮ್)
ಚಿತ್ರ – ಆಯುಷ್ಮಾನ್ (ಇಂಗ್ಲೀಷ್, ಕನ್ನಡ)
ನಿರ್ಮಾಣ – ಮ್ಯಾಥ್ಯೂ ವರ್ಗೀಸ್, ದಿನೇಶ್ ರಾಜ್‌ಕುಮಾರ್ ಎನ್‌, ನವೀನ್ ಫ್ರಾನ್ಸಿಸ್
ನಿರ್ದೇಶನ – ಜೇಕಬ್ ವರ್ಗೀಸ್

*ಫೀಚರ್ ಫಿಲ್ಮ್ಸ್
ಅತ್ಯುತ್ತಮ ಕನ್ನಡ ಸಿನಿಮಾ – 777 ಚಾರ್ಲಿ
ನಿರ್ಮಾಣ – ಪರಂವಃ ಸ್ಟುಡಿಯೋಸ್

ಭಾರತಿ ವಿಷ್ಣುವರ್ಧನ್ ಕುರಿತಾದ ಸಾಕ್ಷ್ಯಚಿತ್ರ ‘ಬಾಳೇ ಬಂಗಾರ’

ತಮ್ಮ ಅತ್ತೆ ಪದ್ಮಶ್ರೀ ಪುರಸ್ಕೃತೆ ಭಾರತಿ ವಿಷ್ಣುವರ್ಧನ್ ಕುರಿತಾಗಿ ಅನಿರುದ್ಧ್ ಜತ್ಕರ್‌ ತಯಾರಿಸಿದ ಸಾಕ್ಷ್ಯಚಿತ್ರವೇ ‘ಬಾಳೇ ಬಂಗಾರ’. ಈಗಾಗಲೇ ‘ಬಾಳೇ ಬಂಗಾರ’ ಸಾಕ್ಷ್ಯಚಿತ್ರ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ಏಷ್ಯಾ ಬುಕ್ ಆಫ್ ರೆಕಾರ್ಡ್ಸ್, ಕಲಾಂ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದಿದೆ. ಮೇರು ನಟಿಯೊಬ್ಬರ ಕುರಿತಾದ ಅತ್ಯಂತ ದೀರ್ಘ ಕಾಲಾವಧಿಯ (141 ನಿಮಿಷಗಳು) ಸಾಕ್ಷ್ಯಚಿತ್ರ ಇದಾಗಿದೆ. ಈ ಸಾಕ್ಷ್ಯಚಿತ್ರದ ಪರಿಕಲ್ಪನೆ, ಸಂಶೋಧನೆ, ಲೇಖನ, ನಿರೂಪಣೆ ಹಾಗೂ ನಿರ್ದೇಶನವನ್ನ ಮಾಡಿದವರು ಅನಿರುದ್ಧ್ ಜತ್ಕರ್.

777 ಚಾರ್ಲಿ

ಶ್ವಾನ ಹಾಗೂ ಮನುಷ್ಯನ ನಡುವಿನ ಅನ್ಯೋನ್ಯ ಬಂಧವನ್ನ ಸಾರುವ ಮನಮಿಡಿಯುವ ಸಿನಿಮಾ ‘777 ಚಾರ್ಲಿ’. ಕಿರಣ್ ರಾಜ್ ಕೆ ನಿರ್ದೇಶನದ ‘777 ಚಾರ್ಲಿ’ ಸಿನಿಮಾದಲ್ಲಿ ಧರ್ಮ ಆಗಿ ರಕ್ಷಿತ್ ಶೆಟ್ಟಿ ಅಭಿನಯಿಸಿದ್ದರೆ, ಚಾರ್ಲಿ ಆಗಿ ಲ್ಯಾಬ್ರಡಾರ್‌ ತಳಿಯ ಶ್ವಾನ ಕಾಣಿಸಿಕೊಂಡಿತ್ತು. ತಾರಾಬಳಗದಲ್ಲಿ ಸಂಗೀತಾ ಶೃಂಗೇರಿ, ರಾಜ್ ಬಿ ಶೆಟ್ಟಿ, ಭಾರ್ಗವಿ ನಾರಾಯಣ್ ಮುಂತಾದವರಿದ್ದರು. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದ್ದ ‘777 ಚಾರ್ಲಿ’ ಸಿನಿಮಾಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಫ್ಯಾಮಿಲಿ ಆಡಿಯೆನ್ಸ್ ಹಾಗೂ ಮಕ್ಕಳಿಂದ ‘777 ಚಾರ್ಲಿ’ ಚಿತ್ರಕ್ಕೆ ವ್ಯಾಪಕ ಮೆಚ್ಚುಗೆ ಲಭಿಸಿತು. 20 ಕೋಟಿ ರೂಪಾಯಿ ಬಜೆಟ್‌ನಲ್ಲಿ ತಯಾರಾಗಿದ್ದ ‘777 ಚಾರ್ಲಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 105 ಕೋಟಿ ರೂಪಾಯಿ ಗಳಿಸುವಲ್ಲಿ ಯಶಸ್ವಿಯಾಯಿತು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

12 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

14 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

14 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago