ಬೆಂಗಳೂರು : ಮಾರಕ ವೈರಸ್ಗೆ 7 ಚಿರತೆ ಮರಿಗಳು ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ವರದಿಯಾಗಿದೆ.
ಪೆಲಿನ್ ಪ್ಯಾನ್ಲೂಕೋಪೇನಿಯಾ ಎಂಬ ಮಾರಕ ವೈರಸ್ಗೆ ಚಿರತೆ ಮರಿಗಳು ಬಲಿಯಾಗಿವೆ ಎಂದು ಹೇಳಲಾಗುತ್ತಿದೆ.
ಬೆಕ್ಕಿನಿಂದ ಹರಡುವ ಮಾರಕ ರೋಗ ಇದಾಗಿದ್ದು, ಆಗಸ್ಟ್ 22ರಂದು ಉದ್ಯಾನದ ಚಿರತೆ ಮರಿಗಳಲ್ಲಿ ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಿತ್ತು. ಸೆಪ್ಟೆಂಬರ್ 5ರ ವೇಳೆಗೆ ಏಳೂ ಮರಿಗಳು ಸಾವಿಗೀಡಾಗಿವೆ ಎಂದು ತಿಳಿದು ಬಂದಿದೆ.
ಬನ್ನೇರುಘಟ್ಟ ಉದ್ಯಾನದಲ್ಲಿ ಇತ್ತೀಚಿಗಷ್ಟೇ ಚಿರತೆ ಸಫಾರಿ ಆರಂಭಿಸಿ ಒಂಬತ್ತು ಚಿರತೆ ಮರಿಗಳನ್ನು ಸಫಾರಿಯಲ್ಲಿ ಬಿಡಲಾಗಿತ್ತು. ಆ ಪೈಕಿ ಸೋಂಕಿನಿಂದ ಮೂರು ಚಿರತೆ ಮರಿಗಳು ಮೃತಪಟ್ಟಿವೆ .ಬಿಳಿಗಿರಿರಂಗನ ಬೆಟ್ಟ, ಮೈಸೂರು ಮೃಗಾಲಯ ಮತ್ತು ಮದ್ದೂರು ಬಳಿ ಗಾಯಗೊಂಡಿದ್ದ ಚಿರತೆ ಮರಿಗಳನ್ನು ರಕ್ಷಿಸಿ, ಬನ್ನೇರುಘಟ್ಟ ಜೈವಿಕ ಉದ್ಯಾನದ ಪುನರ್ವಸತಿ ಕೇಂದ್ರಕ್ಕೆ ತರಲಾಗಿತ್ತು. ಅಲ್ಲಿ ಆರೈಕೆ ಮಾಡಿದ ನಂತರ ಸಫಾರಿಗೆ ಬಿಡಲಾಗಿತ್ತು. ಇನ್ನೂ ಪುನರ್ವಸತಿ ಕೇಂದ್ರದ ಆರೈಕೆಯಲ್ಲಿದ್ದ ನಾಲ್ಕು ಚಿರತೆ ಮರಿಗಳು ಮೃತಪಟ್ಟಿವೆ ಎಂದು ವರದಿಗಳು ತಿಳಿಸಿವೆ.
ಬೆಕ್ಕುಗಳಿಂದ ಹರಡುವ ವೈರಸ್ ಇದಾಗಿದ್ದು, ಕಾಡು ಬೆಕ್ಕು ಮತ್ತು ಸಾಕು ಬೆಕ್ಕುಗಳಿಂದ ಸೋಂಕು ಹರಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಸೋಂಕು ತಗುಲಿದ ಪ್ರಾಣಿಗಳು ಆಹಾರ ಜೀರ್ಣವಾಗದೆ ರಕ್ತ ಭೇದಿಯಾಗುತ್ತದೆ. ಬಿಳಿ ರಕ್ತಕಣಗಳು ಕಡಿಮೆಯಾಗಿ ನಿಶ್ಯಕ್ತಿಯಿಂದ ಮೃತಪಡುತ್ತವೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…
ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…
ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…