ಬೆಂಗಳೂರು : ಮಾರಕ ವೈರಸ್ಗೆ 7 ಚಿರತೆ ಮರಿಗಳು ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ವರದಿಯಾಗಿದೆ.
ಪೆಲಿನ್ ಪ್ಯಾನ್ಲೂಕೋಪೇನಿಯಾ ಎಂಬ ಮಾರಕ ವೈರಸ್ಗೆ ಚಿರತೆ ಮರಿಗಳು ಬಲಿಯಾಗಿವೆ ಎಂದು ಹೇಳಲಾಗುತ್ತಿದೆ.
ಬೆಕ್ಕಿನಿಂದ ಹರಡುವ ಮಾರಕ ರೋಗ ಇದಾಗಿದ್ದು, ಆಗಸ್ಟ್ 22ರಂದು ಉದ್ಯಾನದ ಚಿರತೆ ಮರಿಗಳಲ್ಲಿ ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಿತ್ತು. ಸೆಪ್ಟೆಂಬರ್ 5ರ ವೇಳೆಗೆ ಏಳೂ ಮರಿಗಳು ಸಾವಿಗೀಡಾಗಿವೆ ಎಂದು ತಿಳಿದು ಬಂದಿದೆ.
ಬನ್ನೇರುಘಟ್ಟ ಉದ್ಯಾನದಲ್ಲಿ ಇತ್ತೀಚಿಗಷ್ಟೇ ಚಿರತೆ ಸಫಾರಿ ಆರಂಭಿಸಿ ಒಂಬತ್ತು ಚಿರತೆ ಮರಿಗಳನ್ನು ಸಫಾರಿಯಲ್ಲಿ ಬಿಡಲಾಗಿತ್ತು. ಆ ಪೈಕಿ ಸೋಂಕಿನಿಂದ ಮೂರು ಚಿರತೆ ಮರಿಗಳು ಮೃತಪಟ್ಟಿವೆ .ಬಿಳಿಗಿರಿರಂಗನ ಬೆಟ್ಟ, ಮೈಸೂರು ಮೃಗಾಲಯ ಮತ್ತು ಮದ್ದೂರು ಬಳಿ ಗಾಯಗೊಂಡಿದ್ದ ಚಿರತೆ ಮರಿಗಳನ್ನು ರಕ್ಷಿಸಿ, ಬನ್ನೇರುಘಟ್ಟ ಜೈವಿಕ ಉದ್ಯಾನದ ಪುನರ್ವಸತಿ ಕೇಂದ್ರಕ್ಕೆ ತರಲಾಗಿತ್ತು. ಅಲ್ಲಿ ಆರೈಕೆ ಮಾಡಿದ ನಂತರ ಸಫಾರಿಗೆ ಬಿಡಲಾಗಿತ್ತು. ಇನ್ನೂ ಪುನರ್ವಸತಿ ಕೇಂದ್ರದ ಆರೈಕೆಯಲ್ಲಿದ್ದ ನಾಲ್ಕು ಚಿರತೆ ಮರಿಗಳು ಮೃತಪಟ್ಟಿವೆ ಎಂದು ವರದಿಗಳು ತಿಳಿಸಿವೆ.
ಬೆಕ್ಕುಗಳಿಂದ ಹರಡುವ ವೈರಸ್ ಇದಾಗಿದ್ದು, ಕಾಡು ಬೆಕ್ಕು ಮತ್ತು ಸಾಕು ಬೆಕ್ಕುಗಳಿಂದ ಸೋಂಕು ಹರಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಸೋಂಕು ತಗುಲಿದ ಪ್ರಾಣಿಗಳು ಆಹಾರ ಜೀರ್ಣವಾಗದೆ ರಕ್ತ ಭೇದಿಯಾಗುತ್ತದೆ. ಬಿಳಿ ರಕ್ತಕಣಗಳು ಕಡಿಮೆಯಾಗಿ ನಿಶ್ಯಕ್ತಿಯಿಂದ ಮೃತಪಡುತ್ತವೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…