BREAKING NEWS

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 7 ಚಿರತೆ ಮರಿಗಳ ಸಾವು

ಬೆಂಗಳೂರು : ಮಾರಕ ವೈರಸ್‌ಗೆ 7 ಚಿರತೆ ಮರಿಗಳು ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ವರದಿಯಾಗಿದೆ.

ಪೆಲಿನ್ ಪ್ಯಾನ್ಲೂಕೋಪೇನಿಯಾ ಎಂಬ ಮಾರಕ ವೈರಸ್‌ಗೆ ಚಿರತೆ ಮರಿಗಳು ಬಲಿಯಾಗಿವೆ ಎಂದು ಹೇಳಲಾಗುತ್ತಿದೆ.

ಬೆಕ್ಕಿನಿಂದ ಹರಡುವ‌ ಮಾರಕ ರೋಗ ಇದಾಗಿದ್ದು, ಆಗಸ್ಟ್‌ 22ರಂದು ಉದ್ಯಾನದ ಚಿರತೆ ಮರಿಗಳಲ್ಲಿ ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಿತ್ತು. ಸೆಪ್ಟೆಂಬರ್ 5ರ ವೇಳೆಗೆ ಏಳೂ ಮರಿಗಳು ಸಾವಿಗೀಡಾಗಿವೆ ಎಂದು ತಿಳಿದು ಬಂದಿದೆ.

ಬನ್ನೇರುಘಟ್ಟ ಉದ್ಯಾನದಲ್ಲಿ ಇತ್ತೀಚಿಗಷ್ಟೇ ಚಿರತೆ ಸಫಾರಿ ಆರಂಭಿಸಿ ಒಂಬತ್ತು ಚಿರತೆ ಮರಿಗಳನ್ನು ಸಫಾರಿಯಲ್ಲಿ ಬಿಡಲಾಗಿತ್ತು. ಆ ಪೈಕಿ ಸೋಂಕಿನಿಂದ ಮೂರು ಚಿರತೆ ಮರಿಗಳು ಮೃತಪಟ್ಟಿವೆ .ಬಿಳಿಗಿರಿರಂಗನ ಬೆಟ್ಟ, ಮೈಸೂರು ಮೃಗಾಲಯ ಮತ್ತು ಮದ್ದೂರು ಬಳಿ ಗಾಯಗೊಂಡಿದ್ದ ಚಿರತೆ ಮರಿಗಳನ್ನು ರಕ್ಷಿಸಿ, ಬನ್ನೇರುಘಟ್ಟ ಜೈವಿಕ ಉದ್ಯಾನದ ಪುನರ್ವಸತಿ ಕೇಂದ್ರಕ್ಕೆ ತರಲಾಗಿತ್ತು. ಅಲ್ಲಿ ಆರೈಕೆ ಮಾಡಿದ ನಂತರ ಸಫಾರಿಗೆ ಬಿಡಲಾಗಿತ್ತು. ಇನ್ನೂ ಪುನರ್ವಸತಿ ಕೇಂದ್ರದ ಆರೈಕೆಯಲ್ಲಿದ್ದ ನಾಲ್ಕು ಚಿರತೆ ಮರಿಗಳು ಮೃತಪಟ್ಟಿವೆ ಎಂದು ವರದಿಗಳು ತಿಳಿಸಿವೆ.

ಬೆಕ್ಕುಗಳಿಂದ ಹರಡುವ ವೈರಸ್‌ ಇದಾಗಿದ್ದು, ಕಾಡು ಬೆಕ್ಕು ಮತ್ತು ಸಾಕು ಬೆಕ್ಕುಗಳಿಂದ ಸೋಂಕು ಹರಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಸೋಂಕು ತಗುಲಿದ ಪ್ರಾಣಿಗಳು ಆಹಾರ ಜೀರ್ಣವಾಗದೆ ರಕ್ತ ಭೇದಿಯಾಗುತ್ತದೆ. ಬಿಳಿ ರಕ್ತಕಣಗಳು ಕಡಿಮೆಯಾಗಿ ನಿಶ್ಯಕ್ತಿಯಿಂದ ಮೃತಪಡುತ್ತವೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

lokesh

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

9 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

12 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

12 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

12 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

13 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

15 hours ago