ಬೆಂಗಳೂರು : ಮಾರಕ ವೈರಸ್ಗೆ 7 ಚಿರತೆ ಮರಿಗಳು ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ವರದಿಯಾಗಿದೆ.
ಪೆಲಿನ್ ಪ್ಯಾನ್ಲೂಕೋಪೇನಿಯಾ ಎಂಬ ಮಾರಕ ವೈರಸ್ಗೆ ಚಿರತೆ ಮರಿಗಳು ಬಲಿಯಾಗಿವೆ ಎಂದು ಹೇಳಲಾಗುತ್ತಿದೆ.
ಬೆಕ್ಕಿನಿಂದ ಹರಡುವ ಮಾರಕ ರೋಗ ಇದಾಗಿದ್ದು, ಆಗಸ್ಟ್ 22ರಂದು ಉದ್ಯಾನದ ಚಿರತೆ ಮರಿಗಳಲ್ಲಿ ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಿತ್ತು. ಸೆಪ್ಟೆಂಬರ್ 5ರ ವೇಳೆಗೆ ಏಳೂ ಮರಿಗಳು ಸಾವಿಗೀಡಾಗಿವೆ ಎಂದು ತಿಳಿದು ಬಂದಿದೆ.
ಬನ್ನೇರುಘಟ್ಟ ಉದ್ಯಾನದಲ್ಲಿ ಇತ್ತೀಚಿಗಷ್ಟೇ ಚಿರತೆ ಸಫಾರಿ ಆರಂಭಿಸಿ ಒಂಬತ್ತು ಚಿರತೆ ಮರಿಗಳನ್ನು ಸಫಾರಿಯಲ್ಲಿ ಬಿಡಲಾಗಿತ್ತು. ಆ ಪೈಕಿ ಸೋಂಕಿನಿಂದ ಮೂರು ಚಿರತೆ ಮರಿಗಳು ಮೃತಪಟ್ಟಿವೆ .ಬಿಳಿಗಿರಿರಂಗನ ಬೆಟ್ಟ, ಮೈಸೂರು ಮೃಗಾಲಯ ಮತ್ತು ಮದ್ದೂರು ಬಳಿ ಗಾಯಗೊಂಡಿದ್ದ ಚಿರತೆ ಮರಿಗಳನ್ನು ರಕ್ಷಿಸಿ, ಬನ್ನೇರುಘಟ್ಟ ಜೈವಿಕ ಉದ್ಯಾನದ ಪುನರ್ವಸತಿ ಕೇಂದ್ರಕ್ಕೆ ತರಲಾಗಿತ್ತು. ಅಲ್ಲಿ ಆರೈಕೆ ಮಾಡಿದ ನಂತರ ಸಫಾರಿಗೆ ಬಿಡಲಾಗಿತ್ತು. ಇನ್ನೂ ಪುನರ್ವಸತಿ ಕೇಂದ್ರದ ಆರೈಕೆಯಲ್ಲಿದ್ದ ನಾಲ್ಕು ಚಿರತೆ ಮರಿಗಳು ಮೃತಪಟ್ಟಿವೆ ಎಂದು ವರದಿಗಳು ತಿಳಿಸಿವೆ.
ಬೆಕ್ಕುಗಳಿಂದ ಹರಡುವ ವೈರಸ್ ಇದಾಗಿದ್ದು, ಕಾಡು ಬೆಕ್ಕು ಮತ್ತು ಸಾಕು ಬೆಕ್ಕುಗಳಿಂದ ಸೋಂಕು ಹರಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಸೋಂಕು ತಗುಲಿದ ಪ್ರಾಣಿಗಳು ಆಹಾರ ಜೀರ್ಣವಾಗದೆ ರಕ್ತ ಭೇದಿಯಾಗುತ್ತದೆ. ಬಿಳಿ ರಕ್ತಕಣಗಳು ಕಡಿಮೆಯಾಗಿ ನಿಶ್ಯಕ್ತಿಯಿಂದ ಮೃತಪಡುತ್ತವೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…