BREAKING NEWS

ತ್ರಿಪುರಾದಲ್ಲಿ ರಥಯಾತ್ರೆ ವೇಳೆ ವಿದ್ಯುತ್‌ ಪ್ರವಹಿಸಿ 7 ಮಂದಿ ದುರ್ಮರಣ

ತ್ರಿಪುರಾ : ಜಗನ್ನಾಥ ರಥಯಾತ್ರೆ ವೇಳೆ ವಿದ್ಯುತ್‌ ಪ್ರವಹಿಸಿ ಇಬ್ಬರು ಮಕ್ಕಳು ಸೇರಿ ಏಳು ಜನ ಮೃತಪಟ್ಟಿರುವ ಘಟನೆ ತ್ರಿಪುರಾದ ಉನಕೋಟಿ ಜಿಲ್ಲೆಯ ಕುಮಾರಘಾಟ್‌ನಲ್ಲಿ ನಡೆದಿದೆ. ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಮಾರಘಾಟ್‌ನಲ್ಲಿ ಜಗನ್ನಾಥ ದೇವರ ವಾರ್ಷಿಕ ರಥಯಾತ್ರೆ ನಡೆಯುತ್ತಿತ್ತು. ಇಸ್ಕಾನ್ ಈ ಆಚರಣೆ ಆಯೋಜಿಸಿತ್ತು. ಉತ್ಸಾಹದಿಂದ ರಥ ಎಳೆದ ಜನ ರಥವನ್ನು ಮರಳಿ ಮೂಲಸ್ಥಾನಕ್ಕೆ ಎಳೆದು ತರುವಾಗ ಆಕಸ್ಮಿಕವಾಗಿ ರಥದ ಮೇಲ್ಬಾಗಕ್ಕೆ ತಾಗಿದ ಹೈವೋಲ್ಟೇಜ್‌ ವಿದ್ಯುತ್‌ ತಂತಿಯಿಂದ ಅವಘಡ ಸಂಭವಿಸಿದೆ. ರಥದ ಕಬ್ಬಿಣದ ಭಾಗ ಹಿಡಿದುಕೊಂಡಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಉತ್ಸವದ ವೇಳೆ ಸಹೋದರ ದೇವತೆಗಳಾದ ಬಲಭದ್ರ, ದೇವಿ ಸುಭದ್ರ ಮತ್ತು ಜಗನ್ನಾಥ ದೇವರ ವಿಗ್ರಹಗಳನ್ನು ರಥ ಯಾತ್ರೆ ಆರಂಭವಾದ ಒಂದು ವಾರದ ಬಳಿಕ ರಥದಲ್ಲಿ ಮೂಲಸ್ಥಾನಕ್ಕೆ ಸಾಗಿಸಲಾಗುತ್ತಿತ್ತು. ಸಾವಿರಾರು ಭಕ್ತರು ರಥ ಎಳೆಯುತ್ತಿದ್ದರು. ಕಬ್ಬಿಣದಿಂದ ಮಾಡಿದ ರಥಕ್ಕೆ ಭಾರಿ ಅಲಂಕಾರಗಳನ್ನು ಮಾಡಲಾಗಿತ್ತು. ಮೇಲ್ಭಾಗದಲ್ಲಿ ಹೋಗಿದ್ದ 133 ಕಿಲೋ ವ್ಯಾಟ್ ವಿದ್ಯುತ್ ಕೇಬಲ್‌ಗೆ ಕಬ್ಬಿಣದ ಭಾಗ ತಾಗಿದೆ. ಏನಾಗುತ್ತಿದೆ ಎನ್ನುವುದು ಅರಿವಾಗುವುದರ ಒಳಗೆ ರಥಕ್ಕೆ ಕೂಡಲೇ ಬೆಂಕಿ ಹತ್ತಿಕೊಂಡಿದೆ. ರಥದ ಮೇಲಿದ್ದ ಜನರು ರಸ್ತೆ ಮೇಲೆ ಉರುಳಿ ಬಿದ್ದಿದ್ದಾರೆ. ಅವರ ದೇಹದಲ್ಲಿ ಬೆಂಕಿ ಧಗಧಗಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೂಡಲೇ ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ಸಿಬ್ಬಂದಿ ಪರಿಸ್ಥಿತಿಯನ್ನು ತಹಬದಿಗೆ ತರುವಲ್ಲಿ ಯಶಸ್ವಿಯಾದರು. ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 16 ಜನರಿಗೆ ಸುಟ್ಟ ಗಾಯಗಳಾಗಿವೆ ಎಂದು ಸಹಾಯಕ ಇನ್‌ಸ್ಪೆಕ್ಟರ್ ಜನರಲ್ (ಕಾನೂನು ಮತ್ತು ಸುವ್ಯವಸ್ಥೆ) ಜ್ಯೋತಿಷ್ಮಾನ್ ದಾಸ್ ಚೌಧರಿ ತಿಳಿಸಿದ್ದಾರೆ.

ಮೃತರಲ್ಲಿ ಎರಡು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ. ಗಾಯಾಳುಗಳನ್ನು ಜಿಲ್ಲೆಯ ಕೈಲಾಶನಗರ ಮತ್ತು ಕುಮಾರಘಾಟ್ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಇನ್ನು ಏಳು ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಅಗರ್ತಲಾದ ಜಿಪಿ ಪಂತ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೃತರ ಕುಟುಂಬಗಳಿಗೆ ಪರಿಹಾರ : ವಿಷಯ ತಿಳಿಯುತ್ತಲೇ ಮುಖ್ಯಮಂತ್ರಿ ಮಾಣಿಕ್‌ ಷಾ ಅವರು ಅಗರ್ತಲಾದಿಂದ ಕುಮಾರಘಾಟ್‌ಗೆ ದೌಡಾಯಿಸಿದರು. ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ”ಮೃತರ ಕುಟುಂಬಗಳಿಗೆ, ಗಾಯಾಳುಗಳಿಗೆ ಸರಕಾರ ಎಲ್ಲಾ ರೀತಿಯ ಸಹಾಯ ನೀಡಲಿದೆ,” ಎಂದು ಹೇಳಿದರು. ‘ಉಲ್ಟೋ ರಥ್’ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿದ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿಎಂ ಆದೇಶ ನೀಡಿದ್ದಾರೆ.

ಮೃತರ ಕುಟುಂಬಗಳಿಗೆ 4 ಲಕ್ಷ ರೂ ಪರಿಹಾರವನ್ನು ಸಿಎಂ ಮಾಣಿಕ್ ಷಾ ಘೋಷಿಸಿದ್ದಾರೆ. ಶೇ 60ಕ್ಕಿಂತ ಹೆಚ್ಚು ಸುಟ್ಟ ಗಾಯಗಳಿಗೆ ಒಳಗಾದವರಿಗೆ 2.5 ಲಕ್ಷ ರೂ ಹಾಗೂ ಶೇ 40-60ರಷ್ಟು ಸುಟ್ಟ ಗಾಯಗಳಿಗೆ ಒಳಗಾದವರಿಗೆ 75 ಸಾವಿರ ರೂ ನೀಡುವುದಾಗಿ ಪ್ರಕಟಿಸಿದ್ದಾರೆ. ಪ್ರಧಾನಿ ಪರಿಹಾರ ನಿಧಿಯಿಂದ ಕೂಡ ನರೇಂದ್ರ ಮೋದಿ ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ ಘೋಷಿಸಿದ್ದಾರೆ.

lokesh

Recent Posts

ಓದುಗರ ಪತ್ರ: ನಿಲ್ದಾಣದಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…

40 mins ago

ಓದುಗರ ಪತ್ರ: ರೈಲ್ವೆ ಇಲಾಖೆಯಲ್ಲಿ ಕನ್ನಡಿಗರ ನಿರ್ಲಕ್ಷ್ಯ

ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ…

43 mins ago

ಓದುಗರ ಪತ್ರ: ಗರಳಪುರಿ ಉತ್ಸವ ಸ್ವಾಗತಾರ್ಹ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ…

46 mins ago

ರಣರಂಗದಿಂದ ಪಲಾಯನಕ್ಕೆ ಟ್ರಂಪ್ ಸಿದ್ಧತೆ..!

ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ವಿರೋಧಿ ಸಿದ್ಧಾಂತದ ರಾಜ್ಯಗಳ ಜತೆ ಬಿಜೆಪಿ ಸೆಣಸಾಟ

೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…

4 hours ago

ಗಂಡಸಿನ ಕೋಪ ಹೊಳೆ ಸಾಗರ… ಹೆಂಗಸಿನ ಕೋಪ ಗುಂಡಿ ನೀರು

ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ…

4 hours ago