ಶಿಮ್ಲಾ : ಕಳೆದ 3 ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಆಗುತ್ತಿರುವ ಮಳೆಯ ಅವಾಂತರಕ್ಕೆ 71 ಜನರು ಬಲಿಯಾಗಿದ್ದಾರೆ. ರಾಜ್ಯಾದ್ಯಂತ ಮಳೆಯಿಂದಾದ ದುರ್ಘಟನೆಯಿಂದಾಗಿ ಸುಮಾರು 7,500 ಕೋಟಿ ರೂ. ನಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜುಲೈಗಿಂತ ಆಗಸ್ಟ್ 13, 14 ಹಾಗೂ 15ರ ಅವಧಿಯಲ್ಲಿ ಮಳೆಯ ಅವಾಂತರದಿಂದಾಗಿ ಹೆಚ್ಚಿನ ಹಾನಿ ಸಂಭವಿಸಿದೆ. ಸಾವಿನ ಸಂಖ್ಯೆ 71 ತಲುಪಿದ್ದು, ಸುಮಾರು 7,500 ಕೋಟಿ ರೂ. ನಷ್ಟವಾಗಿದೆ. ಜನರು ರಕ್ಷಣಾ ಹಾಗೂ ಪರಿಹಾರ ಕಾರ್ಯಗಳಲ್ಲಿ ತೊಡಗಿರುವುದರಿಂದ ಈ ಅಂದಾಜು ಹೆಚ್ಚುವ ಸಾಧ್ಯತೆಯಿದೆ ಎಂದು ವಿಪತ್ತು ನಿರ್ವಹಣಾ ಪ್ರಧಾನ ಕಾರ್ಯದರ್ಶಿ ಓಂಕಾರ್ ಚಂದ್ ಶರ್ಮಾ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು, ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ನಿಧಿ ಹಾಗೂ ಸ್ಥಳೀಯ ಜನರು ಸೇರಿದಂತೆ ಸ್ಥಳಾಂತರ ಕಾರ್ಯವನ್ನು ಬೃಹತ್ ಪ್ರಮಾಣದಲ್ಲಿ ನಡೆಸಲಾಗುತ್ತಿದೆ. ಸುಮಾರು 2,500 ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಿದ್ದೇವೆ ಎಂದು ಹೇಳಿದ್ದಾರೆ.
ರಾಜ್ಯ ವಿಪತ್ತು ನಿರ್ವಹಣೆಯ ಅಂಕಿ ಅಂಶದ ಪ್ರಕಾರ 1,762 ಮನೆಗಳು ಸಂಪೂರ್ಣ ಹಾನಿಯಾಗಿವೆ. 8,952 ಮನೆಗಳು ಭಾಗಶಃ ಹಾನಿಯಾಗಿವೆ. ಈ ವರ್ಷದ ಮುಂಗಾರು ಋತುವಿನಲ್ಲಿ 113 ಭೂಕುಸಿತಗಳು ಸಂಭವಿಸಿವೆ ಎಂದು ಮಾಹಿತಿ ನೀಡಿದೆ.
ಹಿಮಾಚಲದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಕಂಗ್ರಾ ಜಿಲ್ಲೆಯಲ್ಲಿ ವೈಮಾನಿಕ ಹಾಗೂ ನೆಲದ ಸಮೀಕ್ಷೆಗಳನ್ನು ನಡೆಸಿದ್ದಾರೆ. ಮಳೆಯ ಅವಾಂತರದಿಂದ ರಾಜ್ಯದಲ್ಲಾಗಿರುವ ಅವ್ಯವಸ್ಥೆಯನ್ನು ಸರಿಪಡಿಸಲು ವರ್ಷವೇ ಬೇಕಾಗಬಹುದು ಎಂದಿದ್ದಾರೆ.
ಬೆಂಗಳೂರು : ‘ಇಂಡಿಯಾ ಎಐ ಸಮ್ಮಿಟ್’ ಸಂದರ್ಭ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ…
ಮಂಡ್ಯ: ಫೆ.28 ರಿಂದ ಮಾ.17ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬೆಳ್ಳಿಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ…
ಮೈಸೂರು : ಐತಿಹಾಸಿಕ ಪರಂಪರೆ, ಸಾಂಸ್ಕ ತಿಕ ವೈಭವದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೈಸೂರು ನಗರದ ಸ್ವಚ್ಛತೆಯನ್ನು ಇನ್ನಷ್ಟು ಉತ್ತಮಪಡಿಸುವ…
ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್ ಅವರ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…
ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು…