BREAKING NEWS

ಮಳೆ ಅವಾಂತರಕ್ಕೆ ಹಿಮಾಚಲಪ್ರದೇಶದಲ್ಲಿ 71 ಬಲಿ

ಶಿಮ್ಲಾ : ಕಳೆದ 3 ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಆಗುತ್ತಿರುವ ಮಳೆಯ ಅವಾಂತರಕ್ಕೆ 71 ಜನರು ಬಲಿಯಾಗಿದ್ದಾರೆ. ರಾಜ್ಯಾದ್ಯಂತ ಮಳೆಯಿಂದಾದ ದುರ್ಘಟನೆಯಿಂದಾಗಿ ಸುಮಾರು 7,500 ಕೋಟಿ ರೂ. ನಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜುಲೈಗಿಂತ ಆಗಸ್ಟ್ 13, 14 ಹಾಗೂ 15ರ ಅವಧಿಯಲ್ಲಿ ಮಳೆಯ ಅವಾಂತರದಿಂದಾಗಿ ಹೆಚ್ಚಿನ ಹಾನಿ ಸಂಭವಿಸಿದೆ. ಸಾವಿನ ಸಂಖ್ಯೆ 71 ತಲುಪಿದ್ದು, ಸುಮಾರು 7,500 ಕೋಟಿ ರೂ. ನಷ್ಟವಾಗಿದೆ. ಜನರು ರಕ್ಷಣಾ ಹಾಗೂ ಪರಿಹಾರ ಕಾರ್ಯಗಳಲ್ಲಿ ತೊಡಗಿರುವುದರಿಂದ ಈ ಅಂದಾಜು ಹೆಚ್ಚುವ ಸಾಧ್ಯತೆಯಿದೆ ಎಂದು ವಿಪತ್ತು ನಿರ್ವಹಣಾ ಪ್ರಧಾನ ಕಾರ್ಯದರ್ಶಿ ಓಂಕಾರ್ ಚಂದ್ ಶರ್ಮಾ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು, ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ನಿಧಿ ಹಾಗೂ ಸ್ಥಳೀಯ ಜನರು ಸೇರಿದಂತೆ ಸ್ಥಳಾಂತರ ಕಾರ್ಯವನ್ನು ಬೃಹತ್ ಪ್ರಮಾಣದಲ್ಲಿ ನಡೆಸಲಾಗುತ್ತಿದೆ. ಸುಮಾರು 2,500 ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣೆಯ ಅಂಕಿ ಅಂಶದ ಪ್ರಕಾರ 1,762 ಮನೆಗಳು ಸಂಪೂರ್ಣ ಹಾನಿಯಾಗಿವೆ. 8,952 ಮನೆಗಳು ಭಾಗಶಃ ಹಾನಿಯಾಗಿವೆ. ಈ ವರ್ಷದ ಮುಂಗಾರು ಋತುವಿನಲ್ಲಿ 113 ಭೂಕುಸಿತಗಳು ಸಂಭವಿಸಿವೆ ಎಂದು ಮಾಹಿತಿ ನೀಡಿದೆ.

ಹಿಮಾಚಲದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಕಂಗ್ರಾ ಜಿಲ್ಲೆಯಲ್ಲಿ ವೈಮಾನಿಕ ಹಾಗೂ ನೆಲದ ಸಮೀಕ್ಷೆಗಳನ್ನು ನಡೆಸಿದ್ದಾರೆ. ಮಳೆಯ ಅವಾಂತರದಿಂದ ರಾಜ್ಯದಲ್ಲಾಗಿರುವ ಅವ್ಯವಸ್ಥೆಯನ್ನು ಸರಿಪಡಿಸಲು ವರ್ಷವೇ ಬೇಕಾಗಬಹುದು ಎಂದಿದ್ದಾರೆ.

lokesh

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

3 mins ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

11 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

17 mins ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

15 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

16 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

16 hours ago