BREAKING NEWS

ಕೇಂದ್ರದಿಂದ ರಾಜ್ಯಗಳಿಗೆ 73 ಸಾವಿರ ಕೋಟಿ ಬಿಡುಗಡೆ: ಕರ್ನಾಟಕಕ್ಕೆ 2,660 ಕೋಟಿ

ನವದೆಹಲಿ : ಕೇಂದ್ರ ಸರಕಾರವು ರಾಜ್ಯಗಳಿಗೆ ತೆರಿಗೆ ಪಾಲನ್ನು ಮಂಗಳವಾರ ಬಿಡುಗಡೆ ಮಾಡಿದೆ. ಹೆಚ್ಚು ಮತ್ತು ತ್ವರಿತವಾಗಿ ತೆರಿಗೆ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದ ಕರ್ನಾಟಕಕ್ಕೆ 2,660 ಕೋಟಿ ರೂ. ವಿತರಿಸಲಾಗಿದೆ.

ಒಟ್ಟಾರೆ 72,961 ಕೋಟಿ ರೂ.ಗಳ ತೆರಿಗೆಯನ್ನು ರಾಜ್ಯಗಳಿಗೆ ಕೇಂದ್ರ ಸರಕಾರವು ಹಂಚಿಕೆ ಮಾಡಿದೆ. ಅತಿ ಹೆಚ್ಚು ತೆರಿಗೆ ಪಾಲು ಪಡೆದ ರಾಜ್ಯಗಳಲ್ಲಿ ಉತ್ತರ ಪ್ರದೇಶ, ಬಿಹಾರ ಮತ್ತು ಮಧ್ಯ ಪ್ರದೇಶ ಮೊದಲ ಮೂರು ಸ್ಥಾನಗಳನ್ನು ಗಳಿಸಿವೆ. ಅತಿ ಕಡಿಮೆ ಪಾಲು ಪಡೆದ ರಾಜ್ಯಗಳಲ್ಲಿ ಗೋವಾ ಮೊದಲ ಸ್ಥಾನದಲ್ಲಿದೆ. ಸಿಕ್ಕಿಂ, ಮಿಜೋರಾಂ ನಂತರ ಸ್ಥಾನದಲ್ಲಿವೆ.

ಸಾಮಾನ್ಯವಾಗಿ ನವೆಂಬರ್‌ 10ರಂದು ತೆರಿಗೆ ಪಾಲಿನ ಹಣವನ್ನು ರಾಜ್ಯಗಳಿಗೆ ವರ್ಗಾಯಿಸುವ ರೂಢಿ ಇತ್ತು. ದೀಪಾವಳಿ ಹಬ್ಬದ ಹಂಗಾಮಿನ ಹಿನ್ನೆಲೆಯಲ್ಲಿ ಅವಧಿಗಿಂತ ಮೂರು ದಿನಗಳಿಗೆ ಮುಂಚಿತವಾಗಿಯೇ ತೆರಿಗೆಯ ಪಾಲನ್ನು ಕೇಂದ್ರ ಸರಕಾರ ರಾಜ್ಯ ಸರಕಾರಗಳಿಗೆ ನೀಡಿದೆ.

ಕೇಂದ್ರ ಸರಕಾರದಿಂದ ಅತಿ ಹೆಚ್ಚು ತೆರಿಗೆ ಪಾಲು ಪಡೆದ ರಾಜ್ಯಗಳು

ಕ್ರ. ಸಂ. ರಾಜ್ಯ ಕೇಂದ್ರ ಸರಕಾರ ಬಿಡುಗಡೆ ಮಾಡಿದ ತೆರಿಗೆ ಮೊತ್ತ
1 ಉತ್ತರ ಪ್ರದೇಶ 13,088.51 ಕೋಟಿ ರೂ.
2 ಬಿಹಾರ 7,338.44 ಕೋಟಿ ರೂ.
3 ಮಧ್ಯ ಪ್ರದೇಶ 5,727.4 ಕೋಟಿ ರೂ.
4 ಪಶ್ಚಿಮ ಬಂಗಾಳ 5,488.88 ಕೋಟಿ ರೂ.
5 ಮಹಾರಾಷ್ಟ್ರ 4,608.96 ಕೋಟಿ ರೂ.

ಕೇಂದ್ರ ಸರಕಾರದಿಂದ ಅತಿ ಕಡಿಮೆ ತೆರಿಗೆ ಪಡೆದ ರಾಜ್ಯಗಳು

ಕ್ರ. ಸಂ. ರಾಜ್ಯ ಕೇಂದ್ರ ಸರಕಾರ ಬಿಡುಗಡೆ ಮಾಡಿದ ತೆರಿಗೆ ಮೊತ್ತ
1 ಗೋವಾ 281.63 ಕೋಟಿ ರೂ.
2 ಸಿಕ್ಕಿಂ 283.1 ಕೋಟಿ ರೂ.
3 ಮಿಜೋರಾಂ 364.8 ಕೋಟಿ ರೂ.
4 ನಾಗಾಲ್ಯಾಂಡ್‌ 415.15 ಕೋಟಿ ರೂ.
5 ಮಣಿಪುರ 522,41 ಕೋಟಿ ರೂ.

ಅಕ್ಟೋಬರ್‌ನಲ್ಲಿ ದಾಖಲೆಯ 1.72 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ : ಹಬ್ಬದ ಸೀಸನ್‌ನಲ್ಲಿ ಖರೀದಿ ಭರಾಟೆ ಜೋರಿದ್ದ ಹಿನ್ನೆಲೆಯಲ್ಲಿ ಅಕ್ಟೋಬರ್‌ ತಿಂಗಳಲ್ಲಿ ದಾಖಲೆಯ 1.72 ಲಕ್ಷ ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿತ್ತು. ಅಕ್ಟೋಬರ್ ತಿಂಗಳ ಸರಕು ಮತ್ತು ಸೇವಾ ತೆರಿಗೆ ಸಂಗ್ರಹವು ಏಪ್ರಿಲ್ 2023ರ ನಂತರ ಸಂಗ್ರಹವಾದ ಎರಡನೇ ಅತಿ ಹೆಚ್ಚಿನ ತೆರಿಗೆ ಸಂಗ್ರಹವಾಗಿದ್ದು, ಇದಾದ ಬೆನ್ನಿಗೆ ಇದೀಗ ಕೇಂದ್ರ ಸರಕಾರ ರಾಜ್ಯಗಳಿಗೆ ತೆರಿಗೆ ಪಾಲನ್ನು ಬಿಡುಗಡೆ ಮಾಡಿದೆ.

andolanait

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

1 hour ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

1 hour ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

1 hour ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

1 hour ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

2 hours ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

2 hours ago