ನವದೆಹಲಿ : ಕೇಂದ್ರ ಸರಕಾರವು ರಾಜ್ಯಗಳಿಗೆ ತೆರಿಗೆ ಪಾಲನ್ನು ಮಂಗಳವಾರ ಬಿಡುಗಡೆ ಮಾಡಿದೆ. ಹೆಚ್ಚು ಮತ್ತು ತ್ವರಿತವಾಗಿ ತೆರಿಗೆ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದ ಕರ್ನಾಟಕಕ್ಕೆ 2,660 ಕೋಟಿ ರೂ. ವಿತರಿಸಲಾಗಿದೆ.
ಒಟ್ಟಾರೆ 72,961 ಕೋಟಿ ರೂ.ಗಳ ತೆರಿಗೆಯನ್ನು ರಾಜ್ಯಗಳಿಗೆ ಕೇಂದ್ರ ಸರಕಾರವು ಹಂಚಿಕೆ ಮಾಡಿದೆ. ಅತಿ ಹೆಚ್ಚು ತೆರಿಗೆ ಪಾಲು ಪಡೆದ ರಾಜ್ಯಗಳಲ್ಲಿ ಉತ್ತರ ಪ್ರದೇಶ, ಬಿಹಾರ ಮತ್ತು ಮಧ್ಯ ಪ್ರದೇಶ ಮೊದಲ ಮೂರು ಸ್ಥಾನಗಳನ್ನು ಗಳಿಸಿವೆ. ಅತಿ ಕಡಿಮೆ ಪಾಲು ಪಡೆದ ರಾಜ್ಯಗಳಲ್ಲಿ ಗೋವಾ ಮೊದಲ ಸ್ಥಾನದಲ್ಲಿದೆ. ಸಿಕ್ಕಿಂ, ಮಿಜೋರಾಂ ನಂತರ ಸ್ಥಾನದಲ್ಲಿವೆ.
ಸಾಮಾನ್ಯವಾಗಿ ನವೆಂಬರ್ 10ರಂದು ತೆರಿಗೆ ಪಾಲಿನ ಹಣವನ್ನು ರಾಜ್ಯಗಳಿಗೆ ವರ್ಗಾಯಿಸುವ ರೂಢಿ ಇತ್ತು. ದೀಪಾವಳಿ ಹಬ್ಬದ ಹಂಗಾಮಿನ ಹಿನ್ನೆಲೆಯಲ್ಲಿ ಅವಧಿಗಿಂತ ಮೂರು ದಿನಗಳಿಗೆ ಮುಂಚಿತವಾಗಿಯೇ ತೆರಿಗೆಯ ಪಾಲನ್ನು ಕೇಂದ್ರ ಸರಕಾರ ರಾಜ್ಯ ಸರಕಾರಗಳಿಗೆ ನೀಡಿದೆ.
ಕೇಂದ್ರ ಸರಕಾರದಿಂದ ಅತಿ ಹೆಚ್ಚು ತೆರಿಗೆ ಪಾಲು ಪಡೆದ ರಾಜ್ಯಗಳು
| ಕ್ರ. ಸಂ. | ರಾಜ್ಯ | ಕೇಂದ್ರ ಸರಕಾರ ಬಿಡುಗಡೆ ಮಾಡಿದ ತೆರಿಗೆ ಮೊತ್ತ |
| 1 | ಉತ್ತರ ಪ್ರದೇಶ | 13,088.51 ಕೋಟಿ ರೂ. |
| 2 | ಬಿಹಾರ | 7,338.44 ಕೋಟಿ ರೂ. |
| 3 | ಮಧ್ಯ ಪ್ರದೇಶ | 5,727.4 ಕೋಟಿ ರೂ. |
| 4 | ಪಶ್ಚಿಮ ಬಂಗಾಳ | 5,488.88 ಕೋಟಿ ರೂ. |
| 5 | ಮಹಾರಾಷ್ಟ್ರ | 4,608.96 ಕೋಟಿ ರೂ. |
ಕೇಂದ್ರ ಸರಕಾರದಿಂದ ಅತಿ ಕಡಿಮೆ ತೆರಿಗೆ ಪಡೆದ ರಾಜ್ಯಗಳು
| ಕ್ರ. ಸಂ. | ರಾಜ್ಯ | ಕೇಂದ್ರ ಸರಕಾರ ಬಿಡುಗಡೆ ಮಾಡಿದ ತೆರಿಗೆ ಮೊತ್ತ |
| 1 | ಗೋವಾ | 281.63 ಕೋಟಿ ರೂ. |
| 2 | ಸಿಕ್ಕಿಂ | 283.1 ಕೋಟಿ ರೂ. |
| 3 | ಮಿಜೋರಾಂ | 364.8 ಕೋಟಿ ರೂ. |
| 4 | ನಾಗಾಲ್ಯಾಂಡ್ | 415.15 ಕೋಟಿ ರೂ. |
| 5 | ಮಣಿಪುರ | 522,41 ಕೋಟಿ ರೂ. |
ಅಕ್ಟೋಬರ್ನಲ್ಲಿ ದಾಖಲೆಯ 1.72 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹ : ಹಬ್ಬದ ಸೀಸನ್ನಲ್ಲಿ ಖರೀದಿ ಭರಾಟೆ ಜೋರಿದ್ದ ಹಿನ್ನೆಲೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ದಾಖಲೆಯ 1.72 ಲಕ್ಷ ಕೋಟಿ ರೂಪಾಯಿ ಜಿಎಸ್ಟಿ ಸಂಗ್ರಹವಾಗಿತ್ತು. ಅಕ್ಟೋಬರ್ ತಿಂಗಳ ಸರಕು ಮತ್ತು ಸೇವಾ ತೆರಿಗೆ ಸಂಗ್ರಹವು ಏಪ್ರಿಲ್ 2023ರ ನಂತರ ಸಂಗ್ರಹವಾದ ಎರಡನೇ ಅತಿ ಹೆಚ್ಚಿನ ತೆರಿಗೆ ಸಂಗ್ರಹವಾಗಿದ್ದು, ಇದಾದ ಬೆನ್ನಿಗೆ ಇದೀಗ ಕೇಂದ್ರ ಸರಕಾರ ರಾಜ್ಯಗಳಿಗೆ ತೆರಿಗೆ ಪಾಲನ್ನು ಬಿಡುಗಡೆ ಮಾಡಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…