BREAKING NEWS

ಕೇಂದ್ರದಿಂದ ರಾಜ್ಯಗಳಿಗೆ 73 ಸಾವಿರ ಕೋಟಿ ಬಿಡುಗಡೆ: ಕರ್ನಾಟಕಕ್ಕೆ 2,660 ಕೋಟಿ

ನವದೆಹಲಿ : ಕೇಂದ್ರ ಸರಕಾರವು ರಾಜ್ಯಗಳಿಗೆ ತೆರಿಗೆ ಪಾಲನ್ನು ಮಂಗಳವಾರ ಬಿಡುಗಡೆ ಮಾಡಿದೆ. ಹೆಚ್ಚು ಮತ್ತು ತ್ವರಿತವಾಗಿ ತೆರಿಗೆ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದ ಕರ್ನಾಟಕಕ್ಕೆ 2,660 ಕೋಟಿ ರೂ. ವಿತರಿಸಲಾಗಿದೆ.

ಒಟ್ಟಾರೆ 72,961 ಕೋಟಿ ರೂ.ಗಳ ತೆರಿಗೆಯನ್ನು ರಾಜ್ಯಗಳಿಗೆ ಕೇಂದ್ರ ಸರಕಾರವು ಹಂಚಿಕೆ ಮಾಡಿದೆ. ಅತಿ ಹೆಚ್ಚು ತೆರಿಗೆ ಪಾಲು ಪಡೆದ ರಾಜ್ಯಗಳಲ್ಲಿ ಉತ್ತರ ಪ್ರದೇಶ, ಬಿಹಾರ ಮತ್ತು ಮಧ್ಯ ಪ್ರದೇಶ ಮೊದಲ ಮೂರು ಸ್ಥಾನಗಳನ್ನು ಗಳಿಸಿವೆ. ಅತಿ ಕಡಿಮೆ ಪಾಲು ಪಡೆದ ರಾಜ್ಯಗಳಲ್ಲಿ ಗೋವಾ ಮೊದಲ ಸ್ಥಾನದಲ್ಲಿದೆ. ಸಿಕ್ಕಿಂ, ಮಿಜೋರಾಂ ನಂತರ ಸ್ಥಾನದಲ್ಲಿವೆ.

ಸಾಮಾನ್ಯವಾಗಿ ನವೆಂಬರ್‌ 10ರಂದು ತೆರಿಗೆ ಪಾಲಿನ ಹಣವನ್ನು ರಾಜ್ಯಗಳಿಗೆ ವರ್ಗಾಯಿಸುವ ರೂಢಿ ಇತ್ತು. ದೀಪಾವಳಿ ಹಬ್ಬದ ಹಂಗಾಮಿನ ಹಿನ್ನೆಲೆಯಲ್ಲಿ ಅವಧಿಗಿಂತ ಮೂರು ದಿನಗಳಿಗೆ ಮುಂಚಿತವಾಗಿಯೇ ತೆರಿಗೆಯ ಪಾಲನ್ನು ಕೇಂದ್ರ ಸರಕಾರ ರಾಜ್ಯ ಸರಕಾರಗಳಿಗೆ ನೀಡಿದೆ.

ಕೇಂದ್ರ ಸರಕಾರದಿಂದ ಅತಿ ಹೆಚ್ಚು ತೆರಿಗೆ ಪಾಲು ಪಡೆದ ರಾಜ್ಯಗಳು

ಕ್ರ. ಸಂ. ರಾಜ್ಯ ಕೇಂದ್ರ ಸರಕಾರ ಬಿಡುಗಡೆ ಮಾಡಿದ ತೆರಿಗೆ ಮೊತ್ತ
1 ಉತ್ತರ ಪ್ರದೇಶ 13,088.51 ಕೋಟಿ ರೂ.
2 ಬಿಹಾರ 7,338.44 ಕೋಟಿ ರೂ.
3 ಮಧ್ಯ ಪ್ರದೇಶ 5,727.4 ಕೋಟಿ ರೂ.
4 ಪಶ್ಚಿಮ ಬಂಗಾಳ 5,488.88 ಕೋಟಿ ರೂ.
5 ಮಹಾರಾಷ್ಟ್ರ 4,608.96 ಕೋಟಿ ರೂ.

ಕೇಂದ್ರ ಸರಕಾರದಿಂದ ಅತಿ ಕಡಿಮೆ ತೆರಿಗೆ ಪಡೆದ ರಾಜ್ಯಗಳು

ಕ್ರ. ಸಂ. ರಾಜ್ಯ ಕೇಂದ್ರ ಸರಕಾರ ಬಿಡುಗಡೆ ಮಾಡಿದ ತೆರಿಗೆ ಮೊತ್ತ
1 ಗೋವಾ 281.63 ಕೋಟಿ ರೂ.
2 ಸಿಕ್ಕಿಂ 283.1 ಕೋಟಿ ರೂ.
3 ಮಿಜೋರಾಂ 364.8 ಕೋಟಿ ರೂ.
4 ನಾಗಾಲ್ಯಾಂಡ್‌ 415.15 ಕೋಟಿ ರೂ.
5 ಮಣಿಪುರ 522,41 ಕೋಟಿ ರೂ.

ಅಕ್ಟೋಬರ್‌ನಲ್ಲಿ ದಾಖಲೆಯ 1.72 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ : ಹಬ್ಬದ ಸೀಸನ್‌ನಲ್ಲಿ ಖರೀದಿ ಭರಾಟೆ ಜೋರಿದ್ದ ಹಿನ್ನೆಲೆಯಲ್ಲಿ ಅಕ್ಟೋಬರ್‌ ತಿಂಗಳಲ್ಲಿ ದಾಖಲೆಯ 1.72 ಲಕ್ಷ ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿತ್ತು. ಅಕ್ಟೋಬರ್ ತಿಂಗಳ ಸರಕು ಮತ್ತು ಸೇವಾ ತೆರಿಗೆ ಸಂಗ್ರಹವು ಏಪ್ರಿಲ್ 2023ರ ನಂತರ ಸಂಗ್ರಹವಾದ ಎರಡನೇ ಅತಿ ಹೆಚ್ಚಿನ ತೆರಿಗೆ ಸಂಗ್ರಹವಾಗಿದ್ದು, ಇದಾದ ಬೆನ್ನಿಗೆ ಇದೀಗ ಕೇಂದ್ರ ಸರಕಾರ ರಾಜ್ಯಗಳಿಗೆ ತೆರಿಗೆ ಪಾಲನ್ನು ಬಿಡುಗಡೆ ಮಾಡಿದೆ.

andolanait

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

4 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

4 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

4 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

4 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

4 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

4 hours ago