BREAKING NEWS

ಕೇಂದ್ರದಿಂದ ರಾಜ್ಯಗಳಿಗೆ 73 ಸಾವಿರ ಕೋಟಿ ಬಿಡುಗಡೆ: ಕರ್ನಾಟಕಕ್ಕೆ 2,660 ಕೋಟಿ

ನವದೆಹಲಿ : ಕೇಂದ್ರ ಸರಕಾರವು ರಾಜ್ಯಗಳಿಗೆ ತೆರಿಗೆ ಪಾಲನ್ನು ಮಂಗಳವಾರ ಬಿಡುಗಡೆ ಮಾಡಿದೆ. ಹೆಚ್ಚು ಮತ್ತು ತ್ವರಿತವಾಗಿ ತೆರಿಗೆ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದ ಕರ್ನಾಟಕಕ್ಕೆ 2,660 ಕೋಟಿ ರೂ. ವಿತರಿಸಲಾಗಿದೆ.

ಒಟ್ಟಾರೆ 72,961 ಕೋಟಿ ರೂ.ಗಳ ತೆರಿಗೆಯನ್ನು ರಾಜ್ಯಗಳಿಗೆ ಕೇಂದ್ರ ಸರಕಾರವು ಹಂಚಿಕೆ ಮಾಡಿದೆ. ಅತಿ ಹೆಚ್ಚು ತೆರಿಗೆ ಪಾಲು ಪಡೆದ ರಾಜ್ಯಗಳಲ್ಲಿ ಉತ್ತರ ಪ್ರದೇಶ, ಬಿಹಾರ ಮತ್ತು ಮಧ್ಯ ಪ್ರದೇಶ ಮೊದಲ ಮೂರು ಸ್ಥಾನಗಳನ್ನು ಗಳಿಸಿವೆ. ಅತಿ ಕಡಿಮೆ ಪಾಲು ಪಡೆದ ರಾಜ್ಯಗಳಲ್ಲಿ ಗೋವಾ ಮೊದಲ ಸ್ಥಾನದಲ್ಲಿದೆ. ಸಿಕ್ಕಿಂ, ಮಿಜೋರಾಂ ನಂತರ ಸ್ಥಾನದಲ್ಲಿವೆ.

ಸಾಮಾನ್ಯವಾಗಿ ನವೆಂಬರ್‌ 10ರಂದು ತೆರಿಗೆ ಪಾಲಿನ ಹಣವನ್ನು ರಾಜ್ಯಗಳಿಗೆ ವರ್ಗಾಯಿಸುವ ರೂಢಿ ಇತ್ತು. ದೀಪಾವಳಿ ಹಬ್ಬದ ಹಂಗಾಮಿನ ಹಿನ್ನೆಲೆಯಲ್ಲಿ ಅವಧಿಗಿಂತ ಮೂರು ದಿನಗಳಿಗೆ ಮುಂಚಿತವಾಗಿಯೇ ತೆರಿಗೆಯ ಪಾಲನ್ನು ಕೇಂದ್ರ ಸರಕಾರ ರಾಜ್ಯ ಸರಕಾರಗಳಿಗೆ ನೀಡಿದೆ.

ಕೇಂದ್ರ ಸರಕಾರದಿಂದ ಅತಿ ಹೆಚ್ಚು ತೆರಿಗೆ ಪಾಲು ಪಡೆದ ರಾಜ್ಯಗಳು

ಕ್ರ. ಸಂ. ರಾಜ್ಯ ಕೇಂದ್ರ ಸರಕಾರ ಬಿಡುಗಡೆ ಮಾಡಿದ ತೆರಿಗೆ ಮೊತ್ತ
1 ಉತ್ತರ ಪ್ರದೇಶ 13,088.51 ಕೋಟಿ ರೂ.
2 ಬಿಹಾರ 7,338.44 ಕೋಟಿ ರೂ.
3 ಮಧ್ಯ ಪ್ರದೇಶ 5,727.4 ಕೋಟಿ ರೂ.
4 ಪಶ್ಚಿಮ ಬಂಗಾಳ 5,488.88 ಕೋಟಿ ರೂ.
5 ಮಹಾರಾಷ್ಟ್ರ 4,608.96 ಕೋಟಿ ರೂ.

ಕೇಂದ್ರ ಸರಕಾರದಿಂದ ಅತಿ ಕಡಿಮೆ ತೆರಿಗೆ ಪಡೆದ ರಾಜ್ಯಗಳು

ಕ್ರ. ಸಂ. ರಾಜ್ಯ ಕೇಂದ್ರ ಸರಕಾರ ಬಿಡುಗಡೆ ಮಾಡಿದ ತೆರಿಗೆ ಮೊತ್ತ
1 ಗೋವಾ 281.63 ಕೋಟಿ ರೂ.
2 ಸಿಕ್ಕಿಂ 283.1 ಕೋಟಿ ರೂ.
3 ಮಿಜೋರಾಂ 364.8 ಕೋಟಿ ರೂ.
4 ನಾಗಾಲ್ಯಾಂಡ್‌ 415.15 ಕೋಟಿ ರೂ.
5 ಮಣಿಪುರ 522,41 ಕೋಟಿ ರೂ.

ಅಕ್ಟೋಬರ್‌ನಲ್ಲಿ ದಾಖಲೆಯ 1.72 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ : ಹಬ್ಬದ ಸೀಸನ್‌ನಲ್ಲಿ ಖರೀದಿ ಭರಾಟೆ ಜೋರಿದ್ದ ಹಿನ್ನೆಲೆಯಲ್ಲಿ ಅಕ್ಟೋಬರ್‌ ತಿಂಗಳಲ್ಲಿ ದಾಖಲೆಯ 1.72 ಲಕ್ಷ ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿತ್ತು. ಅಕ್ಟೋಬರ್ ತಿಂಗಳ ಸರಕು ಮತ್ತು ಸೇವಾ ತೆರಿಗೆ ಸಂಗ್ರಹವು ಏಪ್ರಿಲ್ 2023ರ ನಂತರ ಸಂಗ್ರಹವಾದ ಎರಡನೇ ಅತಿ ಹೆಚ್ಚಿನ ತೆರಿಗೆ ಸಂಗ್ರಹವಾಗಿದ್ದು, ಇದಾದ ಬೆನ್ನಿಗೆ ಇದೀಗ ಕೇಂದ್ರ ಸರಕಾರ ರಾಜ್ಯಗಳಿಗೆ ತೆರಿಗೆ ಪಾಲನ್ನು ಬಿಡುಗಡೆ ಮಾಡಿದೆ.

andolanait

Recent Posts

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

2 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

2 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

2 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

2 hours ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

2 hours ago

ಕುತೂಹಲ ಮೂಡಿಸಿದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ

ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…

2 hours ago