ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 74 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 44 ಜನ ಡಿಸ್ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 464 ಇದೆ. ಕೊನೆಯ 24 ಗಂಟೆಗಳಲ್ಲಿ 6403 ಟೆಸ್ಟ್ಗಳು ನಡೆದಿವೆ, 4680 ಆರ್ಟಿಪಿಸಿಆರ್ ಟೆಸ್ಟ್ಗಳು ನಡೆದಿವೆ ಹಾಗೂ 1723 ರ್ಯಾಟ್ ಟೆಸ್ಟ್ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 1.15% ಇದೆ. ಕಳೆದ 24 ಗಂಟೆಗಳಲ್ಲಿ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಮೈಸೂರಿನಲ್ಲಿ 51 ವರ್ಷದ ಸೋಂಕಿತ ಸಾವನ್ನಪ್ಪಿದ್ದಾರೆ.
ಒಟ್ಟು 464 ಸಕ್ರಿಯ ಪ್ರಕರಣಗಳ ಪೈಕಿ 423 ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದ್ದು, 41 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 16 ಸೋಂಕಿತರು ಐಸಿಯುನಲ್ಲಿದ್ದು, 25 ಸೋಂಕಿತರು ಸಾಮಾನ್ಯ ವಾರ್ಡ್ನಲ್ಲಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 2, ಮಂಡ್ಯದಲ್ಲಿ 2 ಹಾಗೂ ಚಾಮರಾಜನಗರದಲ್ಲಿ 1 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 32, ಮಂಡ್ಯದಲ್ಲಿ 5 ಹಾಗೂ ಚಾಮರಾಜನಗರದಲ್ಲಿ 4 ಸಕ್ರಿಯ ಪ್ರಕರಣಗಳಿವೆ.
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…
ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…
ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಕಾರ್ಯಾಚರಣೆಯಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ. ಕಳೆದ ಒಂದು ವಾರದಿಂದ…
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು…
ಕೆ.ಆರ್.ಪೇಟೆ: ಗಾಂಜಾ ಮತ್ತು ಮಧ್ಯ ಸೇವಿಸಿದ ಅಮಲಿನಲ್ಲಿ ಶಾಲಾ ಬಸ್ ತಡೆದು, ಅಪ್ರಾಪ್ತ ಬಾಲಕಿಯನ್ನು ತಮ್ಮ ವಶಕ್ಕೆ ನೀಡುವಂತೆ ಕಿರಿಕ್…