BREAKING NEWS

76ನೇ ಸ್ವಾತಂತ್ರ್ಯ ದಿನಾಚರಣೆ: ವಿಶೇಷ ಆಹ್ವಾನಿತರಾಗಿ ಮಂಡ್ಯ ರೈತನಿಗೆ ಪಿಎಂಒ ಆಹ್ವಾನ

ಮಂಡ್ಯ : ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ 76ನೇ ಸ್ವಾತಂತ್ರ್ಯ ದಿನಾಚರಣೆ ವಿಶೇಷ ಆಹ್ವಾನಿತರನ್ನಾಗಿ ಮಂಡ್ಯ ರೈತ ಎನ್.ಹೆಚ್.ವಿರೂಪಾಕ್ಷಪ್ಪ ಅವರನ್ನು ಪ್ರಧಾನಮಂತ್ರಿಗಳ ಕಾರ್ಯಾಲಯವು ಆಹ್ವಾನಿಸಿದೆ. ವಿರೂಪಾಕ್ಷಪ್ಪ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಯಾಗಿದ್ದಾರೆ.

ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತರಾಗಿದ್ದಾರೆ. ಪಿಎಂಒ ಕಚೇರಿಯಿಂದ ಆಹ್ವಾನ ಬಂದ ಬಗ್ಗೆ ಸಂತಸ ವ್ಯಕ್ತಪಡಿಸಿದ ವಿರೂಪಾಕ್ಷಪ್ಪ, ಪ್ರಧಾನಮಂತ್ರಿಗಳ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಯಾಗಿರುವುದರಿಂದ ಅಧಿಕೃತವಾಗಿ ನನ್ನನ್ನು ವಿಶೇಷವಾಗಿ ಮಂಡ್ಯ ಜಿಲ್ಲೆಯಿಂದ ಆಹ್ವಾನಿಸಿದ್ದಾರೆ. ಇದಕ್ಕಾಗಿ ಕರ್ನಾಟಕದ ಹಾಗೂ ಜಿಲ್ಲೆಯ ರೈತರ ಪರವಾಗಿ ಪ್ರಧಾನಿ ಹಾಗೂ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಂಡ್ಯ ಜಿಲ್ಲೆಯ ರೈತ ವಿರೂಪಾಕ್ಷಪ್ಪ ಅವರನ್ನು ಆಯ್ಕೆ ಮಾಡಿದ್ದಾರೆ. ಇವರನ್ನು ಕಳುಹಿಸಿ ಕೊಡುವಂತೆ ಪ್ರಧಾನಮಂತ್ರಿಗಳ ಕಾರ್ಯಾಲಯದಿಂದ ಸೂಚನೆ ಬಂದಿದೆ. ಹೀಗಾಗಿ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ವಿರೂಪಾಕ್ಷಪ್ಪ ಅವರ ಜೊತೆ ಒಬ್ಬ ಅಧಿಕಾರಿಯನ್ನೂ ಕಳುಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ಹೇಳಿದರು.

ಎ.ನಾಗತಿಹಳ್ಳಿಯಲ್ಲಿ ಗ್ರಾಮದಲ್ಲಿ 4 ಎಕರೆ 10 ಗುಂಟೆ ಜಮೀನುವೊಂದಿರುವ ವಿರೂಪಾಕ್ಷಪ್ಪ, ಪೂರ್ಣ ಜಮೀನಿನಲ್ಲಿ ಸಾವಯವ ಕೃಷಿ ಹಾಗೂ ಉನ್ನತ ಸಾಂದ್ರ ಬೇಸಾಯ ಪದ್ದತಿಯನ್ನ ಅಳವಡಿಸಿಕೊಂಡಿದ್ದಾರೆ. ಜೊತೆಗೆ ಕೃಷಿ ಬೆಳೆ, ರಾಗಿ, ಜೋಳ ಹಾಗೂ ತೋಟಗಾರಿಕೆ ಬೆಳೆಯನ್ನು ಬೆಳೆಯುತ್ತಿದ್ದಾರೆ.

ಜೊತೆಗೆ ಮಾಡಾಗಲ ಮತ್ತು ಡ್ರಾಗನ್ ಫ್ರೂಟ್​​ ಗಿಡಗಳನ್ನ ಬೆಳೆದಿದ್ದು, ಏಲಕ್ಕಿ ಬೆಳೆಯನ್ನು ಬೆಳೆದಿದ್ದಾರೆ. ಇನ್ನು 2022ರಲ್ಲಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಹಯೋಗದಲ್ಲಿ ಜಮೀನಿನಲ್ಲಿಯೇ ಪ್ರಾತಕ್ಷಿತೆ ಕೂಡ ನಡೆದಿದೆ. ಸಾವಯವ ಕೃಷಿ ಬಗ್ಗೆ ಆಕಾಶವಾಣಿಯಲ್ಲಿ ಕಾರ್ಯಕ್ರಮ ಸಹಾ ನೀಡಿದ್ದಾರೆ. ಸಾವಿರಾರು ರೈತರು ಇವರ ಜಮೀನಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಇಷ್ಟೆಲ್ಲ ಸಾಧನೆ ಮಾಡಿರುವ ಇವರ ಬಗ್ಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮಾಹಿತಿ ಕಳುಹಿಸಿಕೊಟ್ಟಿತ್ತು.

ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಇವರನ್ನು ಗುರುತಿಸಿ 76 ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮಕ್ಕೆ ಆ್ವಹಾನ ನೀಡಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಾಮಮಂಗಲದ ಕೃಷಿ ಅಧಿಕಾರಿ ಯೋಗರಾಜ್ ಅವರಿಗೆ ಇವರನ್ನ ಸುರಕ್ಷಿತವಾಗಿ ಕರೆದುಕೊಂಡು ಹೋಗಿ ಕರೆದುಕೊಂಡು ಬರುವ ಜವಬ್ದಾರಿ ನೀಡಿದೆ.

andolanait

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

5 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

7 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

8 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

8 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

8 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

8 hours ago