BREAKING NEWS

76ನೇ ಸ್ವಾತಂತ್ರ್ಯ ದಿನಾಚರಣೆ: ವಿಶೇಷ ಆಹ್ವಾನಿತರಾಗಿ ಮಂಡ್ಯ ರೈತನಿಗೆ ಪಿಎಂಒ ಆಹ್ವಾನ

ಮಂಡ್ಯ : ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ 76ನೇ ಸ್ವಾತಂತ್ರ್ಯ ದಿನಾಚರಣೆ ವಿಶೇಷ ಆಹ್ವಾನಿತರನ್ನಾಗಿ ಮಂಡ್ಯ ರೈತ ಎನ್.ಹೆಚ್.ವಿರೂಪಾಕ್ಷಪ್ಪ ಅವರನ್ನು ಪ್ರಧಾನಮಂತ್ರಿಗಳ ಕಾರ್ಯಾಲಯವು ಆಹ್ವಾನಿಸಿದೆ. ವಿರೂಪಾಕ್ಷಪ್ಪ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಯಾಗಿದ್ದಾರೆ.

ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತರಾಗಿದ್ದಾರೆ. ಪಿಎಂಒ ಕಚೇರಿಯಿಂದ ಆಹ್ವಾನ ಬಂದ ಬಗ್ಗೆ ಸಂತಸ ವ್ಯಕ್ತಪಡಿಸಿದ ವಿರೂಪಾಕ್ಷಪ್ಪ, ಪ್ರಧಾನಮಂತ್ರಿಗಳ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಯಾಗಿರುವುದರಿಂದ ಅಧಿಕೃತವಾಗಿ ನನ್ನನ್ನು ವಿಶೇಷವಾಗಿ ಮಂಡ್ಯ ಜಿಲ್ಲೆಯಿಂದ ಆಹ್ವಾನಿಸಿದ್ದಾರೆ. ಇದಕ್ಕಾಗಿ ಕರ್ನಾಟಕದ ಹಾಗೂ ಜಿಲ್ಲೆಯ ರೈತರ ಪರವಾಗಿ ಪ್ರಧಾನಿ ಹಾಗೂ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಂಡ್ಯ ಜಿಲ್ಲೆಯ ರೈತ ವಿರೂಪಾಕ್ಷಪ್ಪ ಅವರನ್ನು ಆಯ್ಕೆ ಮಾಡಿದ್ದಾರೆ. ಇವರನ್ನು ಕಳುಹಿಸಿ ಕೊಡುವಂತೆ ಪ್ರಧಾನಮಂತ್ರಿಗಳ ಕಾರ್ಯಾಲಯದಿಂದ ಸೂಚನೆ ಬಂದಿದೆ. ಹೀಗಾಗಿ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ವಿರೂಪಾಕ್ಷಪ್ಪ ಅವರ ಜೊತೆ ಒಬ್ಬ ಅಧಿಕಾರಿಯನ್ನೂ ಕಳುಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ಹೇಳಿದರು.

ಎ.ನಾಗತಿಹಳ್ಳಿಯಲ್ಲಿ ಗ್ರಾಮದಲ್ಲಿ 4 ಎಕರೆ 10 ಗುಂಟೆ ಜಮೀನುವೊಂದಿರುವ ವಿರೂಪಾಕ್ಷಪ್ಪ, ಪೂರ್ಣ ಜಮೀನಿನಲ್ಲಿ ಸಾವಯವ ಕೃಷಿ ಹಾಗೂ ಉನ್ನತ ಸಾಂದ್ರ ಬೇಸಾಯ ಪದ್ದತಿಯನ್ನ ಅಳವಡಿಸಿಕೊಂಡಿದ್ದಾರೆ. ಜೊತೆಗೆ ಕೃಷಿ ಬೆಳೆ, ರಾಗಿ, ಜೋಳ ಹಾಗೂ ತೋಟಗಾರಿಕೆ ಬೆಳೆಯನ್ನು ಬೆಳೆಯುತ್ತಿದ್ದಾರೆ.

ಜೊತೆಗೆ ಮಾಡಾಗಲ ಮತ್ತು ಡ್ರಾಗನ್ ಫ್ರೂಟ್​​ ಗಿಡಗಳನ್ನ ಬೆಳೆದಿದ್ದು, ಏಲಕ್ಕಿ ಬೆಳೆಯನ್ನು ಬೆಳೆದಿದ್ದಾರೆ. ಇನ್ನು 2022ರಲ್ಲಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಹಯೋಗದಲ್ಲಿ ಜಮೀನಿನಲ್ಲಿಯೇ ಪ್ರಾತಕ್ಷಿತೆ ಕೂಡ ನಡೆದಿದೆ. ಸಾವಯವ ಕೃಷಿ ಬಗ್ಗೆ ಆಕಾಶವಾಣಿಯಲ್ಲಿ ಕಾರ್ಯಕ್ರಮ ಸಹಾ ನೀಡಿದ್ದಾರೆ. ಸಾವಿರಾರು ರೈತರು ಇವರ ಜಮೀನಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಇಷ್ಟೆಲ್ಲ ಸಾಧನೆ ಮಾಡಿರುವ ಇವರ ಬಗ್ಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮಾಹಿತಿ ಕಳುಹಿಸಿಕೊಟ್ಟಿತ್ತು.

ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಇವರನ್ನು ಗುರುತಿಸಿ 76 ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮಕ್ಕೆ ಆ್ವಹಾನ ನೀಡಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಾಮಮಂಗಲದ ಕೃಷಿ ಅಧಿಕಾರಿ ಯೋಗರಾಜ್ ಅವರಿಗೆ ಇವರನ್ನ ಸುರಕ್ಷಿತವಾಗಿ ಕರೆದುಕೊಂಡು ಹೋಗಿ ಕರೆದುಕೊಂಡು ಬರುವ ಜವಬ್ದಾರಿ ನೀಡಿದೆ.

andolanait

Recent Posts

ಕರ್ನಾಟಕ ರಾಜ್ಯ ಹೈಕೋರ್ಟ್‌ನ ನ್ಯಾಯಾಧೀಶರ ಹುದ್ದೆಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಕರ್ನಾಟಕ ರಾಜ್ಯದ ಹೈಕೋರ್ಟ್‌ನಲ್ಲಿ 158 ಸಿವಿಲ್‌ ನ್ಯಾಯಾಧೀಶರ ಹುದ್ದೆಗಳ ನೇರ ನೇಮಕಾತಿಯ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ. ಈ…

13 mins ago

ಅವೈಜ್ಞಾನಿಕ ಘನತ್ಯಾಜ್ಯ ಘಟಕ ತೆರವಿಗೆ ಸಂಸದ ಯದುವೀರ್‌ ಆಗ್ರಹ

ನವದೆಹಲಿ: ಮೈಸೂರಿನ ಹಳೆ ಕೆಸರೆ ಗ್ರಾಮದ ಸಮೀಪ ನಿರ್ಮಾಣ ಮಾಡಿರುವ ಘನತ್ಯಾಜ್ಯ ಘಟಕಗಳು ಅವೈಜ್ಞಾನಿಕವಾಗಿದ್ದು ಕೂಡಲೇ ತೆರವುಗೊಳಿಸಬೇಕು ಎಂದು ಮೈಸೂರು-ಕೊಡಗು…

19 mins ago

ಹನೂರು : ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 2.85 ಕೋಟಿ ರೂ. ಸಂಗ್ರಹ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಕೇವಲ ದಿನಗಳ ಅವಧಿಯಲ್ಲಿ 2.85 ಕೋಟಿ ರೂ. ಸಂಗ್ರಹವಾಗಿದೆ.…

41 mins ago

ಚಾಮರಾಜನಗರ: ವರ್ಷದ ಮೊದಲ ಮಳೆಯಿಂದ ಬಾಳೆ ಬೆಳೆಗೆ ಸಂಕಷ್ಟ

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರದಂದು ಹಲವು ಕಡೆ ವರ್ಷದ ಮೊದಲ ಮಳೆಯಾಗಿದ್ದು, ಆ ಮಳೆ ಬಾಳೆಗೆ ಸಂಕಷ್ಟ ತಂದಿದೆ. ಜಿಲ್ಲೆಯಲ್ಲಿ ನಿನ್ನೆ…

1 hour ago

ಮಂಡ್ಯ: ಮದ್ದೂರಿನಲ್ಲಿ ಆಟೋ- ಕಾರು ಡಿಕ್ಕಿ, ಆಟೋ ಸಂಪೂರ್ಣ ಜಖಂ

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗುಡಿಗೆರೆ ಬಳಿಯ ಮಳವಳ್ಳಿ-ಮದ್ದೂರು ಹೆದ್ದಾರಿಯಲ್ಲಿ ಆಟೋ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಆಟೋ ಸಂಪೂರ್ಣ…

2 hours ago

ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಕೆ: ಶಾಸಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಡಿನ್ನರ್‌ ಪಾರ್ಟಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಕೆ ಮಾಡಿದ್ದು, ಕಾಂಗ್ರೆಸ್‌ ಪಕ್ಷದ  ಶಾಸಕರಿಗೆ ಡಿನ್ನರ್‌ ಪಾರ್ಟಿ…

2 hours ago