ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಎಂಟು ಚೀತಾಗಳು ಸಾವನ್ನಪ್ಪಿವೆ. ಆದರೂ ನಮೀಬಿಯಾ ಚೀತಾಗಳನ್ನು ಸ್ಥಳಾಂತರಿಸುವುದಿಲ್ಲ ಮತ್ತು ಈ ಯೋಜನೆಯು ಯಶಸ್ವಿಯಾಗಲಿದೆ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರು ಶನಿವಾರ ಹೇಳಿದ್ದಾರೆ.
“ನಾವು ಅಂತಾರಾಷ್ಟ್ರೀಯ ತಜ್ಞರು ಸೇರಿದಂತೆ ಹಲವು ತಜ್ಞರೊಂದಿಗೆ ಸಂಪರ್ಕದಲ್ಲಿದ್ದೇವೆ. ನಮ್ಮ ತಂಡ ಅಲ್ಲಿಗೆ ಭೇಟಿ ನೀಡಲಿದೆ. ಚೀತಾಗಳನ್ನು ಸ್ಥಳಾಂತರಿಸುವುದಿಲ್ಲ. ಅವು ಕುನೋದಲ್ಲೇ ಇರಲಿವೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.
ಚೀತಾ ಯೋಜನೆಯ ಬಗ್ಗೆ ಕೆಲವು ತಜ್ಞರು ತೀವ್ರ ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ ಯಾದವ್ ಅವರು ಈ ಹೇಳಿಕೆ ನೀಡಿದ್ದು, ರೇಡಿಯೊ ಕಾಲರ್ಗಳಿಂದ ಉಂಟಾದ ಸೋಂಕಿನಿಂದ ಚೀತಾಗಳು ಮೃತಪಟ್ಟಿರಬಹುದು. ಆದರೆ ಇದು ಹೆಚ್ಚು ಅಸಾಮಾನ್ಯ ಮತ್ತು ಎರಡು ದಶಕಗಳಿಂದ ಭಾರತದಲ್ಲಿ ವನ್ಯಜೀವಿ ಸಂರಕ್ಷಣೆಯಲ್ಲಿ ಈ ಕಾಲರ್ಗಳನ್ನು ಬಳಸಲಾಗುತ್ತಿದೆ.
ಆದಾಗ್ಯೂ, ಮರಣೋತ್ತರ ಪರೀಕ್ಷೆಯ ವರದಿಯು ಚೀತಾಗಳ ಸಾವಿಗೆ ನಿಖರವಾದ ಕಾರಣವನ್ನು ನಿರ್ಧರಿಸುತ್ತದೆ ಎಂದು ಇತರ ತಜ್ಞರು ಹೇಳಿದ್ದಾರೆ.
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…
ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…