ಹೊಸದಿಲ್ಲಿ : ಖಾಸಗಿ ದೂರ ಸಂಪರ್ಕ ಸಂಸ್ಥೆಗಳ ಪೈಪೋಟಿಯಲ್ಲಿ ಮುಚ್ಚುವ ಭೀತಿಯಲ್ಲಿರುವ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆ ಬಿಎಸ್ ಎನ್ ಎಲ್ ಪುನಶ್ಚೇತನಕ್ಕೆ ಕೇಂದ್ರ ಸರಕಾರ 89,047 ಕೋಟಿ ರೂ. ಮೊತ್ತದ ಪ್ಯಾಕೇಜ್ ಘೋಷಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಸಭೆಯಲ್ಲಿ ಈ ಅನುಮೋದನೆ ನೀಡಲಾಗಿದೆ. ಇದರಲ್ಲಿ ಬಿಎಸ್ ಎನ್ ಎಲ್ ಗೆ 4ಜಿ/5ಜಿ ಸ್ಪೆಕ್ಟ್ರಂ ಹಂಚಿಕೆ ಕೂಡ ಸೇರಿದೆ. ಈ ಮೊತ್ತವು ಭಾರತ್ ಸಂಚಾರ್ ನಿಗಮ ಲಿ.( ಬಿಎಸ್ ಎನ್ ಎಲ್) ಪುನಶ್ಚೇತನಕ್ಕೆ ಕಳೆದ ವರ್ಷ ಘೋಷಣೆಯಾದ 1.64 ಲಕ್ಷ ಕೋಟಿ ರೂ. ಪ್ಯಾಕೇಜ್ ಭಾಗವಾಗಿದೆ. ಇದೀಗ ಬಿಎಸ್ ಎನ್ ಎಲ್ ಅಧಿಕೃತ ಬಂಡವಾಳ 1,50,000ಕೋಟಿ ರೂ.ನಿಂದ 2,10,000 ಕೋಟಿ ರೂ.ಗೆ ಏರಿಕೆಯಾಗಿದೆ. ಈ ಪುನಶ್ಚೇತನ ಪ್ಯಾಕೇಜ್ ನಿಂದ ಬಿಎಸ್ ಎನ್ ಎಲ್ ಸುಭದ್ರವಾದ ದೂರಸಂಪರ್ಕ ಸೇವಾ ಪೂರೈಕೆದಾರ ಸಂಸ್ಥೆಯಾಗಿ ರೂಪುಗೊಳ್ಳಲಿದ್ದು, ಭಾರತದ ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸಲು ಗಮನ ಕೇಂದ್ರೀಕರಿಸಲಿದೆ ಎಂದು ಸರ್ಕಾರ ಹೇಳಿಕೆಯೊಂದರಲ್ಲಿ ತಿಳಿಸಿದೆ.
2023-24ನೇ ಹಣಕಾಸು ಸಾಲಿನಲ್ಲಿ ಸರ್ಕಾರ 52,937 ಕೋಟಿ ರೂ. ಬಂಡವಾಳ ನೆರವನ್ನು ಘೋಷಿಸಿತ್ತು. ಇದಕ್ಕಿಂತ ಹಿಂದಿನ ಸಾಲಿನಲ್ಲಿ 44,720 ಕೋಟಿ ರೂ. ಬಂಡವಾಳ ನೆರವು ಘೋಷಿಸಲಾಗಿತ್ತು. ಇತ್ತೀಚಿನ ಸ್ಪೆಕ್ಟ್ರಂ ಹಂಚಿಕೆಯಿಂದ ಬಿಎಸ್ ಎನ್ ಎಲ್ ಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ 4ಜಿ ಹಾಗೂ 5ಜಿ ಸೇವೆಗಳನ್ನು ನೀಡಲು ಸಾಧ್ಯವಾಗಲಿದೆ. ವಿವಿಧ ಸಂಪರ್ಕ ಯೋಜನೆಗಳ ಅಡಿಯಲ್ಲಿ ಗ್ರಾಮೀಣ ಹಾಗೂ ಸಂಪರ್ಕ ಹೊಂದಿರದ ಹಳ್ಳಿಗಳಿಗೆ 4ಜಿ ಕವರೇಜ್ ಅನ್ನು ಬಿಎಸ್ ಎನ್ ಎಲ್ ನೀಡಬಹುದು.
ಬಿಎಸ್ಎನ್ಎಲ್ / ಎಂಟಿಎನ್ ಎಲ್ ಗೆ 2019ರಲ್ಲಿ ಮೊದಲ ಪುನಶ್ಚೇತನ ಪ್ಯಾಕೇಜ್ ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿತ್ತು. ಇದು 69,000 ಕೋಟಿ ರೂ. ಪ್ಯಾಕೇಜ್ ಆಗಿದ್ದು, ಬಿಎಸ್ ಎನ್ ಎಲ್ /ಎಂಟಿಎನ್ ಎಲ್ ನಲ್ಲಿ ಸ್ಥಿರತೆ ತಂದಿತ್ತು. 2022ರಲ್ಲಿ ಸರ್ಕಾರ ಬಿಎಸ್ ಎನ್ ಎಲ್/ ಎಂಟಿಎನ್ ಎಲ್ ಗೆ 1.64 ಲಕ್ಷ ಕೋಟಿ ರೂ. ಮೊತ್ತದ ಎರಡನೇ ಪುನಶ್ಚೇತನ ಪ್ಯಾಕೇಜ್ ಗೆ ಅನುಮೋದನೆ ನೀಡಿತ್ತು. ಈ ಎರಡು ಪ್ಯಾಕೇಜ್ ಗಳ ಕಾರಣದಿಂದ 2021-22ನೇ ಹಣಕಾಸು ಸಾಲಿನಿಂದ ಬಿಎಸ್ ಎನ್ ಎಲ್ ಲಾಭ ಗಳಿಸಲು ಪ್ರಾರಂಭಿಸಿತ್ತು. ಬಿಎಸ್ ಎನ್ ಎಲ್ ಮೇಲಿನ ಒಟ್ಟು ಸಾಲದ ಹೊರೆ 32,944 ಕೋಟಿ ರೂ.ನಿಂದ 22,289 ಕೋಟಿ ರೂ.ಗೆ ತಗ್ಗಿತ್ತು. ಹೋಮ್ ಫೈಬರ್ ವಲಯದಲ್ಲಿ ಬಿಎಸ್ ಎನ್ ಎಲ್ ಉತ್ತಮ ಬೆಳವಣಿಗೆ ದಾಖಲಿಸಿದೆ.
ಬಿಎಸ್ ಎನ್ ಎಲ್ ಈ ಹಿಂದೆ ನಿರಂತರ ನಷ್ಟಕ್ಕೆ ತುತ್ತಾಗಿತ್ತು. 2019-20ನೇ ಸಾಲಿನಲ್ಲಿ ಬಿಎಸ್ ಎನ್ ಎಲ್ ಗೆ 15,500 ಕೋಟಿ ರೂ. ನಷ್ಟವಾಗಿತ್ತು. 2019ರಲ್ಲಿ ಪುನಶ್ಚೇತನ ಪ್ಯಾಕೇಜ್ ನೀಡಿದ ಬಳಿಕ 2020-21 ನೇ ಸಾಲಿನಲ್ಲಿ 7,441 ಕೋಟಿ ರೂ.ಗೆ ಇಳಿಕೆಯಾಗಿತ್ತು.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…