BREAKING NEWS

ಪ್ಲಾಸ್ಟಿಕ್ ಗನ್ ಬಳಸಿ ಚಿನ್ನಾಭರಣಗಳನ್ನು ಲೂಟಿ ಮಾಡಿದ 16 ವರ್ಷದ ಬಾಲಕ

ಮುಂಬೈ : ಮಹಾರಾಷ್ಟ್ರದ ವಾಣಿಜ್ಯ ರಾಜಧಾನಿ ಮುಂಬೈನ ಭಾಯಂದರ್‌ ಪಶ್ಚಿಮದಲ್ಲಿರುವ ಆಭರಣ ಅಂಗಡಿಯೊಂದರಲ್ಲಿ ಪ್ಲಾಸ್ಟಿಕ್ ಗನ್ ಬಳಸಿ ದರೋಡೆಗೆ ಯತ್ನಿಸಿದ 16 ವರ್ಷದ ಬಾಲಕನ ಮೇಲೆ ಪ್ರಕರಣ ದಾಖಲಾಗಿದೆ. ಬಾಲಕ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದು, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಲು ಬಯಸಿದ್ದರಿಂದ ಈ ಅಪರಾಧ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ತಿಳಿದುಬಂದಿದೆ.

ಶನಿವಾರ ಸಂಜೆ 4.30 ರ ಸುಮಾರಿಗೆ ಭಾಯಂದರ್ ವೆಸ್ಟ್‌ನ 60 ಅಡಿ ರಸ್ತೆಯಲ್ಲಿರುವ ಶಕ್ತಿ ಜ್ಯುವೆಲರ್ಸ್ ಅಂಗಡಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. “ಬಾಲಕ ಅಂಗಡಿಗೆ ಪ್ರವೇಶಿಸಿ ಚಿನ್ನದ ಬಿಸ್ಕತ್ತುಗಳನ್ನು ಮಾರಾಟ ಮಾಡಲು ಬಯಸುವುದಾಗಿ ಆಭರಣ ವ್ಯಾಪಾರಿಗೆ ತಿಳಿಸಿದನು. ಆಭರಣ ವ್ಯಾಪಾರಿ ಅವುಗಳನ್ನು ಖರೀದಿಸಲು ನಿರಾಕರಿಸಿದನು ಮತ್ತು ಹುಡುಗನನ್ನು ಜ್ಯುವೆಲ್ಲರಿ ಅಂಗಡಿಯಿಂದ ಹೊರಗೆ ಹೋಗುವಂತೆ ಹೇಳಿದನು. ಕೆಲವು ನಿಮಿಷಗಳ ನಂತರ, ಹುಡುಗ ಮತ್ತೆ ಅಂಗಡಿಯನ್ನು ಪ್ರವೇಶಿಸಿದ್ದು, ಈ ಬಾರಿ ಪ್ಲಾಸ್ಟಿಕ್‌ ಗನ್‌ ಹಿಡಿದಿದ್ದನು ಎಂದು ಭಾಯಂದರ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಮುಕುಟರಾವ್ ಪಾಟೀಲ್ ಈ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ.

lokesh

Recent Posts

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

20 mins ago

ಫೆಬ್ರವರಿ.13ರಿಂದ ಹಂಪಿ ಉತ್ಸವ-2026

ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…

28 mins ago

ಹನೂರು ಕ್ಷೇತ್ರದಲ್ಲಿ 15 ವರ್ಷಗಳಿಂದ ಆಗದೇ ಇದ್ದ ಅಭಿವೃದ್ಧಿ ಕಾರ್ಯ ನಾನು ಮಾಡಿ ತೋರಿಸಿದ್ದೇನೆ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…

38 mins ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…

1 hour ago

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಮ್ಯಾಚ್‌ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಮ್ಯಾಚ್‌ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…

2 hours ago

ಹೋಗೇನಕಲ್‌ ಫಾಲ್ಸ್‌ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ 50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…

2 hours ago