BREAKING NEWS

ಪ್ಲಾಸ್ಟಿಕ್ ಗನ್ ಬಳಸಿ ಚಿನ್ನಾಭರಣಗಳನ್ನು ಲೂಟಿ ಮಾಡಿದ 16 ವರ್ಷದ ಬಾಲಕ

ಮುಂಬೈ : ಮಹಾರಾಷ್ಟ್ರದ ವಾಣಿಜ್ಯ ರಾಜಧಾನಿ ಮುಂಬೈನ ಭಾಯಂದರ್‌ ಪಶ್ಚಿಮದಲ್ಲಿರುವ ಆಭರಣ ಅಂಗಡಿಯೊಂದರಲ್ಲಿ ಪ್ಲಾಸ್ಟಿಕ್ ಗನ್ ಬಳಸಿ ದರೋಡೆಗೆ ಯತ್ನಿಸಿದ 16 ವರ್ಷದ ಬಾಲಕನ ಮೇಲೆ ಪ್ರಕರಣ ದಾಖಲಾಗಿದೆ. ಬಾಲಕ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದು, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಲು ಬಯಸಿದ್ದರಿಂದ ಈ ಅಪರಾಧ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ತಿಳಿದುಬಂದಿದೆ.

ಶನಿವಾರ ಸಂಜೆ 4.30 ರ ಸುಮಾರಿಗೆ ಭಾಯಂದರ್ ವೆಸ್ಟ್‌ನ 60 ಅಡಿ ರಸ್ತೆಯಲ್ಲಿರುವ ಶಕ್ತಿ ಜ್ಯುವೆಲರ್ಸ್ ಅಂಗಡಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. “ಬಾಲಕ ಅಂಗಡಿಗೆ ಪ್ರವೇಶಿಸಿ ಚಿನ್ನದ ಬಿಸ್ಕತ್ತುಗಳನ್ನು ಮಾರಾಟ ಮಾಡಲು ಬಯಸುವುದಾಗಿ ಆಭರಣ ವ್ಯಾಪಾರಿಗೆ ತಿಳಿಸಿದನು. ಆಭರಣ ವ್ಯಾಪಾರಿ ಅವುಗಳನ್ನು ಖರೀದಿಸಲು ನಿರಾಕರಿಸಿದನು ಮತ್ತು ಹುಡುಗನನ್ನು ಜ್ಯುವೆಲ್ಲರಿ ಅಂಗಡಿಯಿಂದ ಹೊರಗೆ ಹೋಗುವಂತೆ ಹೇಳಿದನು. ಕೆಲವು ನಿಮಿಷಗಳ ನಂತರ, ಹುಡುಗ ಮತ್ತೆ ಅಂಗಡಿಯನ್ನು ಪ್ರವೇಶಿಸಿದ್ದು, ಈ ಬಾರಿ ಪ್ಲಾಸ್ಟಿಕ್‌ ಗನ್‌ ಹಿಡಿದಿದ್ದನು ಎಂದು ಭಾಯಂದರ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಮುಕುಟರಾವ್ ಪಾಟೀಲ್ ಈ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ.

lokesh

Recent Posts

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

29 seconds ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

5 mins ago

ಜೆನ್ ಝೀಗಳಿಗೆ ಒಂದೆಡೆ ದೇಶಾಭಿಮಾನ; ಮತ್ತೊಂದೆಡೆ ಅಸಮಾಧಾನ

ಕೆ.ಎಸ್. ಚಂದ್ರಶೇಖರ ಮೂರ್ತಿ ಮೈಸೂರು: ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ, ದೇಶಭಕ್ತಿ ಗೀತೆಗಳು ಮತ್ತು ಸಿಹಿ ಹಂಚಿಕೆಯ ಸಂಭ್ರಮವಲ್ಲ. ಅದು ಸ್ವಾತಂತ್ರ್ಯದ…

10 mins ago

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

9 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

13 hours ago