BREAKING NEWS

ಬೀಡಾ ಮಾರಾಟಗಾರನ ಮಗಳು ಉತ್ತರ ಪ್ರದೇಶದಲ್ಲಿ ಮ್ಯಾಜಿಸ್ಪ್ರೇಟ್‌

ಲಖನೌ : ಉತ್ತರ ಪ್ರದೇಶ ಸಾರ್ವಜನಿಕ ಸೇವಾ ಆಯೋಗದ (ಯುಪಿಪಿಎಸ್‌ಸಿ) ಪರೀಕ್ಷೆಯಲ್ಲಿ ಬೀಡಾ ಮಾರಾಟಗಾರರೊಬ್ಬರ ಮಗಳು 21 ನೇ ರಾಂಕ್ ಪಡೆದು, ಗೊಂಡಾದಲ್ಲಿ ಉಪ ಉಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಗಿ ನೇಮಕಗೊಂಡಿದ್ದಾರೆ.ಜ್ಯೋತಿ ಚೌರಾಸಿಯಾ ಉತ್ತರ ಪ್ರದೇಶ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಅದ್ಭುತ ಸಾಧನೆ ಮಾಡಿ ಕುಟುಂಬಕ್ಕೆ ಹೆಮ್ಮೆ ತಂದಿದ್ದಾರೆ. ಅವರನ್ನು ಉತ್ತರ ಪ್ರದೇಶದ ಗೊಂಡಾದಲ್ಲಿ ಉಪವಿಭಾಗೀಯ ಮ್ಯಾಜಿಸ್ಪ್ರೇಟ್‌ ಆಗಿ ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಬಾರ್ ಅಸೋಸಿಯೇಷನ್‌ಗೆ ಅರ್ಹತೆ ಪಡೆದುಕೊಂಡಿದ್ದ ಜ್ಯೋತಿ ಅವರು ಗೊಂಡಾದ ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ. ರೋಷನ್ ಜಾಕೋಬ್ ಅವರಿಂದ ಸ್ಫೂರ್ತಿ ಪಡೆದಿದ್ದಾರೆ.

ಜ್ಯೋತಿ ಅವರ ಹಿರಿಯ ಸಹೋದರ ಕೂಡ ಯಶಸ್ವಿ ವೃತ್ತಿಜೀವನ ಬಯಸಿದ್ದರು. ಆದರೆ ಹಣಕಾಸಿನ ಸಮಸ್ಯೆಗಳ ಕಾರಣದಿಂದ ಅವರು ಬೀಡಾ ಮಾರಾಟ ಅಂಗಡಿ ಸೇರಿಕೊಂಡು ತಂದೆಗೆ ಜತೆಯಾದರು. ಜ್ಯೋತಿಯ ತಂದೆ ಹೇಮ್‌ ಚಂದ್‌ ಚೌರಾಸಿಯಾ ಮೂಲತಃ ಡಿಯೋರಿಯಾ ಜಿಲ್ಲೆಯವರಾಗಿದ್ದು, ಗೊಂಡಾದಲ್ಲಿ ಕೆಲಸ ಸಿಗದ ಕಾರಣ ತಮ್ಮ ಕುಟುಂಬವನ್ನು ಪೋಷಿಸಲು 1997ರ ಫೆಬ್ರವರಿಯಲ್ಲಿ ಬೀಡಾ ಅಂಗಡಿ ತೆರೆದಿದ್ದರು. ನಂತರ 2000ನೇ ಇಸವಿಯಲ್ಲಿ ತಮ್ಮ ಇಬ್ಬರೂ ಮಕ್ಕಳನ್ನು ಗೊಂಡಾಕ್ಕೆ ಕರೆತಂದಿದ್ದರು.

ಗೊಂಡಾದಲ್ಲಿ ಜ್ಯೋತಿ ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿದರು. ಬಳಿಕ ಲೋಕಸೇವಾ ಆಯೋಗದ ಪರೀಕ್ಷೆಗಳಿಗೆ ತಯಾರಿ ನಡೆಸಲು ಲಖನೌಗೆ ತೆರಳಿದರು. ಆರ್ಥಿಕ ಸಂಕಷ್ಟ ಮತ್ತು ಆರೋಗ್ಯ ಸಮಸ್ಯೆಗಳ ಹೊರತಾಗಿಯೂ, 6ನೇ ಪ್ರಯತ್ನದಲ್ಲಿ ಯಶಸ್ವಿಯಾದರು. ಪ್ರತಿಷ್ಠಿತ ಉದ್ಯೋಗವನ್ನು ಪಡೆಯುವುದು ಮತ್ತು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇವೆ ಸಲ್ಲಿಸುವುದು ಜ್ಯೋತಿಯ ಬಯಕೆಯಾಗಿದೆ. ಅವರ ಈ ಸಾಧನೆಯನ್ನು ಗೊಂಡಾದಲ್ಲಿನ ಜನರು, ಜ್ಯೋತಿ ಅವರ ಕುಟುಂಬಸ್ಥರು ಹಾಗೂ ಸ್ನೇಹಿತರು ಸಂಭ್ರಮಿಸುತ್ತಿದ್ದಾರೆ.

lokesh

Recent Posts

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

32 mins ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

1 hour ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

1 hour ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

2 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

2 hours ago

ದ್ವೇಷ ಭಾಷಣಕ್ಕೆ ಕಡಿವಾಣ | ಗರಿಷ್ಟ 10 ವರ್ಷ ಶಿಕ್ಷೆ, ವಿಧಾನಸಭೆಯಲ್ಲಿ ಮಸೂದೆ ಮಂಡನೆ, BJP ವಿರೋಧ

ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…

2 hours ago