BREAKING NEWS

ಬೀಡಾ ಮಾರಾಟಗಾರನ ಮಗಳು ಉತ್ತರ ಪ್ರದೇಶದಲ್ಲಿ ಮ್ಯಾಜಿಸ್ಪ್ರೇಟ್‌

ಲಖನೌ : ಉತ್ತರ ಪ್ರದೇಶ ಸಾರ್ವಜನಿಕ ಸೇವಾ ಆಯೋಗದ (ಯುಪಿಪಿಎಸ್‌ಸಿ) ಪರೀಕ್ಷೆಯಲ್ಲಿ ಬೀಡಾ ಮಾರಾಟಗಾರರೊಬ್ಬರ ಮಗಳು 21 ನೇ ರಾಂಕ್ ಪಡೆದು, ಗೊಂಡಾದಲ್ಲಿ ಉಪ ಉಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಗಿ ನೇಮಕಗೊಂಡಿದ್ದಾರೆ.ಜ್ಯೋತಿ ಚೌರಾಸಿಯಾ ಉತ್ತರ ಪ್ರದೇಶ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಅದ್ಭುತ ಸಾಧನೆ ಮಾಡಿ ಕುಟುಂಬಕ್ಕೆ ಹೆಮ್ಮೆ ತಂದಿದ್ದಾರೆ. ಅವರನ್ನು ಉತ್ತರ ಪ್ರದೇಶದ ಗೊಂಡಾದಲ್ಲಿ ಉಪವಿಭಾಗೀಯ ಮ್ಯಾಜಿಸ್ಪ್ರೇಟ್‌ ಆಗಿ ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಬಾರ್ ಅಸೋಸಿಯೇಷನ್‌ಗೆ ಅರ್ಹತೆ ಪಡೆದುಕೊಂಡಿದ್ದ ಜ್ಯೋತಿ ಅವರು ಗೊಂಡಾದ ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ. ರೋಷನ್ ಜಾಕೋಬ್ ಅವರಿಂದ ಸ್ಫೂರ್ತಿ ಪಡೆದಿದ್ದಾರೆ.

ಜ್ಯೋತಿ ಅವರ ಹಿರಿಯ ಸಹೋದರ ಕೂಡ ಯಶಸ್ವಿ ವೃತ್ತಿಜೀವನ ಬಯಸಿದ್ದರು. ಆದರೆ ಹಣಕಾಸಿನ ಸಮಸ್ಯೆಗಳ ಕಾರಣದಿಂದ ಅವರು ಬೀಡಾ ಮಾರಾಟ ಅಂಗಡಿ ಸೇರಿಕೊಂಡು ತಂದೆಗೆ ಜತೆಯಾದರು. ಜ್ಯೋತಿಯ ತಂದೆ ಹೇಮ್‌ ಚಂದ್‌ ಚೌರಾಸಿಯಾ ಮೂಲತಃ ಡಿಯೋರಿಯಾ ಜಿಲ್ಲೆಯವರಾಗಿದ್ದು, ಗೊಂಡಾದಲ್ಲಿ ಕೆಲಸ ಸಿಗದ ಕಾರಣ ತಮ್ಮ ಕುಟುಂಬವನ್ನು ಪೋಷಿಸಲು 1997ರ ಫೆಬ್ರವರಿಯಲ್ಲಿ ಬೀಡಾ ಅಂಗಡಿ ತೆರೆದಿದ್ದರು. ನಂತರ 2000ನೇ ಇಸವಿಯಲ್ಲಿ ತಮ್ಮ ಇಬ್ಬರೂ ಮಕ್ಕಳನ್ನು ಗೊಂಡಾಕ್ಕೆ ಕರೆತಂದಿದ್ದರು.

ಗೊಂಡಾದಲ್ಲಿ ಜ್ಯೋತಿ ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿದರು. ಬಳಿಕ ಲೋಕಸೇವಾ ಆಯೋಗದ ಪರೀಕ್ಷೆಗಳಿಗೆ ತಯಾರಿ ನಡೆಸಲು ಲಖನೌಗೆ ತೆರಳಿದರು. ಆರ್ಥಿಕ ಸಂಕಷ್ಟ ಮತ್ತು ಆರೋಗ್ಯ ಸಮಸ್ಯೆಗಳ ಹೊರತಾಗಿಯೂ, 6ನೇ ಪ್ರಯತ್ನದಲ್ಲಿ ಯಶಸ್ವಿಯಾದರು. ಪ್ರತಿಷ್ಠಿತ ಉದ್ಯೋಗವನ್ನು ಪಡೆಯುವುದು ಮತ್ತು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇವೆ ಸಲ್ಲಿಸುವುದು ಜ್ಯೋತಿಯ ಬಯಕೆಯಾಗಿದೆ. ಅವರ ಈ ಸಾಧನೆಯನ್ನು ಗೊಂಡಾದಲ್ಲಿನ ಜನರು, ಜ್ಯೋತಿ ಅವರ ಕುಟುಂಬಸ್ಥರು ಹಾಗೂ ಸ್ನೇಹಿತರು ಸಂಭ್ರಮಿಸುತ್ತಿದ್ದಾರೆ.

lokesh

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

6 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

6 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

7 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

8 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

8 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

9 hours ago