BREAKING NEWS

ಬೀಡಾ ಮಾರಾಟಗಾರನ ಮಗಳು ಉತ್ತರ ಪ್ರದೇಶದಲ್ಲಿ ಮ್ಯಾಜಿಸ್ಪ್ರೇಟ್‌

ಲಖನೌ : ಉತ್ತರ ಪ್ರದೇಶ ಸಾರ್ವಜನಿಕ ಸೇವಾ ಆಯೋಗದ (ಯುಪಿಪಿಎಸ್‌ಸಿ) ಪರೀಕ್ಷೆಯಲ್ಲಿ ಬೀಡಾ ಮಾರಾಟಗಾರರೊಬ್ಬರ ಮಗಳು 21 ನೇ ರಾಂಕ್ ಪಡೆದು, ಗೊಂಡಾದಲ್ಲಿ ಉಪ ಉಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಗಿ ನೇಮಕಗೊಂಡಿದ್ದಾರೆ.ಜ್ಯೋತಿ ಚೌರಾಸಿಯಾ ಉತ್ತರ ಪ್ರದೇಶ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಅದ್ಭುತ ಸಾಧನೆ ಮಾಡಿ ಕುಟುಂಬಕ್ಕೆ ಹೆಮ್ಮೆ ತಂದಿದ್ದಾರೆ. ಅವರನ್ನು ಉತ್ತರ ಪ್ರದೇಶದ ಗೊಂಡಾದಲ್ಲಿ ಉಪವಿಭಾಗೀಯ ಮ್ಯಾಜಿಸ್ಪ್ರೇಟ್‌ ಆಗಿ ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಬಾರ್ ಅಸೋಸಿಯೇಷನ್‌ಗೆ ಅರ್ಹತೆ ಪಡೆದುಕೊಂಡಿದ್ದ ಜ್ಯೋತಿ ಅವರು ಗೊಂಡಾದ ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ. ರೋಷನ್ ಜಾಕೋಬ್ ಅವರಿಂದ ಸ್ಫೂರ್ತಿ ಪಡೆದಿದ್ದಾರೆ.

ಜ್ಯೋತಿ ಅವರ ಹಿರಿಯ ಸಹೋದರ ಕೂಡ ಯಶಸ್ವಿ ವೃತ್ತಿಜೀವನ ಬಯಸಿದ್ದರು. ಆದರೆ ಹಣಕಾಸಿನ ಸಮಸ್ಯೆಗಳ ಕಾರಣದಿಂದ ಅವರು ಬೀಡಾ ಮಾರಾಟ ಅಂಗಡಿ ಸೇರಿಕೊಂಡು ತಂದೆಗೆ ಜತೆಯಾದರು. ಜ್ಯೋತಿಯ ತಂದೆ ಹೇಮ್‌ ಚಂದ್‌ ಚೌರಾಸಿಯಾ ಮೂಲತಃ ಡಿಯೋರಿಯಾ ಜಿಲ್ಲೆಯವರಾಗಿದ್ದು, ಗೊಂಡಾದಲ್ಲಿ ಕೆಲಸ ಸಿಗದ ಕಾರಣ ತಮ್ಮ ಕುಟುಂಬವನ್ನು ಪೋಷಿಸಲು 1997ರ ಫೆಬ್ರವರಿಯಲ್ಲಿ ಬೀಡಾ ಅಂಗಡಿ ತೆರೆದಿದ್ದರು. ನಂತರ 2000ನೇ ಇಸವಿಯಲ್ಲಿ ತಮ್ಮ ಇಬ್ಬರೂ ಮಕ್ಕಳನ್ನು ಗೊಂಡಾಕ್ಕೆ ಕರೆತಂದಿದ್ದರು.

ಗೊಂಡಾದಲ್ಲಿ ಜ್ಯೋತಿ ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿದರು. ಬಳಿಕ ಲೋಕಸೇವಾ ಆಯೋಗದ ಪರೀಕ್ಷೆಗಳಿಗೆ ತಯಾರಿ ನಡೆಸಲು ಲಖನೌಗೆ ತೆರಳಿದರು. ಆರ್ಥಿಕ ಸಂಕಷ್ಟ ಮತ್ತು ಆರೋಗ್ಯ ಸಮಸ್ಯೆಗಳ ಹೊರತಾಗಿಯೂ, 6ನೇ ಪ್ರಯತ್ನದಲ್ಲಿ ಯಶಸ್ವಿಯಾದರು. ಪ್ರತಿಷ್ಠಿತ ಉದ್ಯೋಗವನ್ನು ಪಡೆಯುವುದು ಮತ್ತು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇವೆ ಸಲ್ಲಿಸುವುದು ಜ್ಯೋತಿಯ ಬಯಕೆಯಾಗಿದೆ. ಅವರ ಈ ಸಾಧನೆಯನ್ನು ಗೊಂಡಾದಲ್ಲಿನ ಜನರು, ಜ್ಯೋತಿ ಅವರ ಕುಟುಂಬಸ್ಥರು ಹಾಗೂ ಸ್ನೇಹಿತರು ಸಂಭ್ರಮಿಸುತ್ತಿದ್ದಾರೆ.

lokesh

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

5 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

6 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

21 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago