BREAKING NEWS

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯ ಸಂಕ್ಷಿಪ್ತ ಪರಿಚಯ

ಹಾಸನ: ಶ್ರವಣಬೆಳಗೊಳದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (75) ಗುರುವಾರ ನಿಧನರಾದರು. ಅವರ ಕುರಿತಾದ ಸಂಕ್ಷಿಪ್ತ ಪರಿಚಯ ಇಲ್ಲಿದೆ…

03-05-1949ರಲ್ಲಿ ವರಂಗದಲ್ಲಿ ಜನಿಸಿದರು. ಪೂವಾ೯ಶ್ರಮದ ಹೆಸರು ರತ್ನಾಕರ. ತಂದೆಯ ಹೆಸರು ಕೀರ್ತಿಶೇಷ ಚಂದ್ರರಾಜ. ತಾಯಿಯ ಹೆಸರು ಮಾತೃಶ್ರೀ ಕಾಂತಮ್ಮ. ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಲ್ಲಿ ಪ್ರಾರಂಭಿಸಿ, ಹೊಂಬುಜ ಹಾಗೂ ವಿವಿಧ ಜೈನ ಮಠಗಳಲ್ಲಿ ಕನ್ನಡ, ಸಂಸ್ಕೃತ, ಪ್ರಾಕೃತ, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪ್ರಾವೀಣ್ಯತೆಯನ್ನು ಪಡೆದರು. ಸತತ ಜೈನ ಧರ್ಮದ ತತ್ವಶಾಸ್ತ್ರ ಅಧ್ಯಯನ ಕೈಗೊಂಡರು. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ.ಇತಿಹಾಸ, ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ.ತತ್ವಶಾಸ್ತ್ರಗಳ ಸ್ನಾತಕೋತ್ತರ ಪದವಿಗಳನ್ನು ಪಡೆದರು.

ಶ್ರೀಗಳು 12-12-1969ರಲ್ಲಿ ಕ್ಷುಲ್ಲಕ ದೀಕ್ಷೆ ಸ್ವೀಕರಿಸಿದರು.

1970ರಲ್ಲಿ ಶ್ರವಣಬೆಳಗೊಳದ ಮಠದ ಮಠಾಧೀಶರಾದರು. ಬಳಿಕ ಎಸ್.ಡಿ.ಜೆ.ಎಂ.ಐ ಟ್ರಸ್ಟ್ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಪ್ರಾಥಮಿಕ ಶಿಕ್ಷಣದಿಂದ ಎಂಜಿನಿಯರಿಂಗ್ ಕಾಲೇಜು ಶಿಕ್ಷಣದವರೆಗೆ ಅದನ್ನು ಕೊಂಡೊಯ್ಯದ ಕೀರ್ತಿ ಪೂಜ್ಯ ಶ್ರೀಗಳಿಗೆ ಸಲ್ಲುತ್ತದೆ.

ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನ ಸಂಸ್ಥೆಯನ್ನು ಸ್ಥಾಪಿಸುವ ಮೂಲಕ ಪ್ರಾಕೃತ ಭಾಷೆಗೆ ಮರುಜೀವ ತುಂಬಿದರು. ಪ್ರಾಕೃತ ವಿದ್ವಾಂಸರಿಗೆ- ಪ್ರಾಕೃತ ಜ್ಞಾನಭಾರತಿ ಪ್ರಶಸ್ತಿ, ಜೈನ ಸಾಹಿತ್ಯ ಸಂಸ್ಕೃತಿಗಳಿಗೆ- ಶ್ರೀ ಗೋಮಟೇಶ್ವರ ವಿದ್ಯಾಪೀಠ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿನಿಧಿ, ಕನ್ನಡ ಜೈನ ಸಾಹಿತ್ಯ ಸೇವೆಗೆ- ಚಾವುಂಡರಾಯ ಪ್ರಶಸ್ತಿಗಳನ್ನು ಸ್ಥಾಪಿಸಿ, ವಿಶೇಷ ಸಾಧಕರಿಗೆ ಅವುಗಳನ್ನು ನೀಡಿ ಗೌರವಿಸುತ್ತ ಬರುತ್ತಿದ್ದರು.

ಮಹಾಧವಲಾ ಗ್ರಂಥಗಳ 42 ಸಂಪುಟಗಳ ಕನ್ನಡ ಅನುವಾದ ಮಾಡಿಸಿ, ಅವುಗಳನ್ನು ಪ್ರಕಟಿಸಿ ಅವಿಸ್ಮರಣೀಯ ಕಾರ್ಯ ಕೈಗೊಂಡರು.

ಪ್ರಶಸ್ತಿಗಳು: ಪೂಜ್ಯ ಶ್ರೀಗಳ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ, ಸಾಹಿತ್ಯಿಕ ಕ್ಷೇತ್ರದಲ್ಲಿನ ಸೇವೆಗಾಗಿ: ಕರ್ಮಯೋಗಿ, ಅಧ್ಯಾತ್ಮ ಯೋಗಿ, ಭಟ್ಟಾರಕ ಶಿರೋಮಣಿ ಮುಂತಾದ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ವಿದೇಶ ಪ್ರವಾಸ: ಪೂಜ್ಯ ಶ್ರೀಗಳು 16ಕ್ಕೂ ಹೆಚ್ಚು ದೇಶಗಳಲ್ಲಿ ಜರುಗಿದ ವಿಚಾರ ಸಂಕಿರಣ, ಧರ್ಮ ಸಭೆಗಳಲ್ಲಿ ಭಾಗವಹಿಸಿ ತಮ್ಮ ಸರಳಶೈಲಿ ಪ್ರವಚನಗಳಿಂದ ಶ್ರಾವಕರ ಮನ ಗೆದ್ದಿದ್ದಾರೆ. ಶ್ರೀಗಳು ಜೈನ ಧರ್ಮ ಇಂದಿಗೂ ತನ್ನತನ ಉಳಿಸಿಕೊಂಡು ಬರುವುದಕ್ಕೆ ಪ್ರಮುಖ ಕಾರಣ ಜೈನ ತತ್ವಶಾಸ್ತ್ರ ಗ್ರಂಥಗಳು ಹಾಗೂ ಜೈನ ವಾಸ್ತುಶಿಲ್ಪ ಕಲೆ ಎಂಬುದನ್ನು ಅರಿತು ಬಸದಿಗಳ ಜೀರ್ಣೋದ್ದಾರ, ಜೈನ ಸಾಹಿತ್ಯ ಪ್ರಕಟಣೆಗೆ ವಿಶೇಷವಾಗಿ ಒತ್ತು ನೀಡಿದ್ದಾರೆ. ಅವುಗಳ ಸಂರಕ್ಷಣೆಗಾಗಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಇಲ್ಲಿಯವರೆಗೆ ನಾಲ್ಕು ಮಹಾಮಸ್ತಕಾಭಿಷೇಕಗಳು ಶ್ರೀಗಳ ನೇತೃತ್ವದಲ್ಲಿ ನೆರವೇರಿವೆ.

ಶ್ರೀ ಬಾಹುಬಲಿ ಮಕ್ಕಳ ಆಸ್ಪತ್ರೆ, ವೃದ್ದಾಶ್ರಮಗಳಂಥ ಸಮಾಜಮುಖಿ ಹಾಗೂ ಇನ್ನೂ ಹತ್ತು ಹಲವು ಕ್ಷೇತ್ರದಲ್ಲಿ ತಮ್ಮ ಸೇವೆಯನ್ನು ನಿರ್ವಹಿಸುತ್ತಾ ಈ ನಾಡಿನಲ್ಲಿ ಶಾಂತಿ ನೆಲೆಸಲು ಸತತ 50 ವರ್ಷಗಳ ಸೇವೆಯನ್ನು ಸಮಾಜಕ್ಕೆ ಸಲ್ಲಿಸುತ್ತಾ ಬಂದಿದ್ದಾರೆ. ಇದನ್ನು ಅರಿತ ಕನಾ೯ಟಕ ಸರ್ಕಾರವು 2018ರ ರಾಷ್ಟ್ರೀಯ ಶ್ರೀ ಭ.ಮಹಾವೀರ ಶಾಂತಿ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದು ಹೆಮ್ಮೆಯ ವಿಷಯವಾಗಿದೆ. ಇದು ₹ 10 ಲಕ್ಷ ನಗದು ಹಾಗೂ ಫಲಕವನ್ನು ಹೊಂದಿದೆ.

ಅವರನ್ನು ಎಲ್ಲ ಜಾತಿ, ಮತ, ಪಂಥಗಳ ಭಕ್ತರೂ ಅತಿಯಾಗಿ ಗೌರವಿಸುವ, ಆದರಿಸುವ, ಪ್ರೀತಿಸುವ, ಅದೆಲ್ಲವೂಗಳಿಗಿಂತ ಅವರನ್ನು ಕಂಡರೆ ಹೆಚ್ಚು ಭಕ್ತಿ, ಅತಿ ಕಡಿಮೆ ಭಯ, ಇನ್ನೂ ಜಾಸ್ತಿ ಪ್ರೀತಿ, ಹೆಚ್ಚಿನ ಅಭಿಮಾನ ಇಟ್ಟುಕೊಳ್ಳುವುದಕ್ಕೆ ಕಾರಣ.

ತಾವಾಯಿತು ತಮ್ಮ ಕೆಲಸವಾಯಿತು. ಪೂಜೆ, ಧಾರ್ಮಿಕ ಕಾರ್ಯಗಳು ಜೊತೆಗೆ ಮಾತುಕತೆ, ಅಧ್ಯಯನ, ಧಾರ್ಮಿಕ ಆಚರಣೆಗಳಲ್ಲಿ ಸ್ವಾಮೀಜಿ ಸದಾ ನಿರತರು. ಮಹಾ ಮಸ್ತಕಾಭಿಷೇಕ ಸಂದರ್ಭಗಳಲ್ಲಿ ಮಾತ್ರ ಪತ್ರಿಕೆ, ದೂರದರ್ಶನಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು.

andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

6 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

7 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

8 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

8 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

9 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

10 hours ago