ಮುಂಬೈ : ಉದ್ಯಮಿಯೊಬ್ಬರು ಆನ್ಲೈನ್ ಜೂಜಾಟದಲ್ಲಿ 5 ಕೋಟಿ ಗೆದ್ದು, ಬರೋಬ್ಬರಿ 58 ಕೋಟಿ ರೂ. ಕಳೆದುಕೊಂಡ ಅಚ್ಚರಿಯ ಘಟನೆಯೊಂದು ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ನಾಗ್ಪುರದ ಉದ್ಯಮಿಯೊಬ್ಬರು ಆನ್ಲೈನ್ ಜೂಜಾಟದಲ್ಲಿ 58 ಕೋಟಿ ಕಳೆದುಕೊಂಡರು. ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಶಂಕಿತ ವ್ಯಕ್ತಿಯೊಬ್ಬನ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆಗ 14 ಕೋಟಿ ರೂಪಾಯಿ ನಗದು, 4 ಕೆಜಿ ಚಿನ್ನ ಪತ್ತೆಯಾಗಿದ್ದು, ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ಅನಂತ್ ಅಲಿಯಾಸ್ ಸೊಂತು ನವರತನ್ ಜೈನ್ ಎಂದು ಗುರುತಿಸಲಾಗಿದೆ. ನಾಗ್ಪುರದಿಂದ 160 ಕಿಮೀ ದೂರದಲ್ಲಿರುವ ಗೊಂಡಿಯಾ ಸಿಟಿಯಲ್ಲಿರುವ ಈತನ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆದರೆ ಇದಕ್ಕೂ ಮುನ್ನವೇ ಜೈನ್ ದುಬೈಗೆ ಹಾರಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.
ಉದ್ಯಮಿಗೆ ಪರಿಚಯವಾದ ಜೈನ್ ಆನ್ಲೈನ್ ಜೂಜಾಟದಿಂದ ಹಣ ಗಳಿಸಬಹುದೆಂದು ಪ್ರೇರೇಪಿಸಿದ್ದಾರೆ. ಆರಂಭದಲ್ಲಿ ನಿರಾಕರಿಸಿದ ಉದ್ಯಮಿ ಅಂತಿಮವಾಗಿ ಜೈನ್ ಮನವೊಲಿಕೆಗೆ ಒಪ್ಪಿಕೊಂಡರು. ಅಲ್ಲದೆ ಹವಾಲಾ ವ್ಯಾಪಾರಿಯ ಮೂಲಕ 8 ಲಕ್ಷವನ್ನು ವರ್ಗಾಯಿಸಿದ್ದಾರೆ ಎಂದು ನಾಗ್ಪುರ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ಹೇಳಿದರು.
ಈ ಆಟವಾಡುತ್ತಾ ಉದ್ಯಮಿ ಬರೋಬ್ಬರಿ 58 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾನೆ. ಆದರೆ ಯಾವುದೇ ಹಣ ಬಂದಿಲ್ಲ. ಈ ವೇಳೆ ಈತನಿಗೆ ಕೇವಲ 5 ಕೋಟಿ ರೂ. ಮಾತ್ರ ಲಾಭದ ರೀತಿಯಲ್ಲಿ ಗೇಮ್ ಮೂಲಕ ವಾಪಸ್ ಬಂದಿದೆ. ಇದರಿಂದ ಅನುಮಾನಗೊಂಡ ಉದ್ಯಮಿ ಹಣ ವಾಪಸ್ ನೀಡುವಂತೆ ಆರೋಪಿಗೆ ಕೇಳಿದ್ದಾರೆ ಇದಕ್ಕೆ ಆತ ಒಪ್ಪಲಿಲ್ಲ. ಹೀಗಾಗಿ ಹಣ ಕಳೆದುಕೊಂಡ ಉದ್ಯಮಿ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…