BREAKING NEWS

ಭಾರಿ ಮಳೆಗೆ ಶೆಡ್ ಮೇಲೆ ಉರುಳಿದ ಶತಮಾನದಷ್ಟು ಹಳೇ ಮರ : 7 ಮಂದಿ ಸಾವು

ಮಹಾರಾಷ್ಟ್ರ : ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿನ ದೇವಾಲಯವೊಂದರ ಆವರಣದಲ್ಲಿದ್ದ ಟಿನ್‌ ಶೆಡ್‌ ಮೇಲೆ ಬೃಹತ್‌ ಮರವೊಂದು ಉರುಳಿ ಬಿದ್ದಿದ್ದು, ಅಲ್ಲಿ ಆಶ್ರಯ ಪಡೆದಿದ್ದ 7 ಮಂದಿ ಮೃತಪಟ್ಟಿದ್ದಾರೆ.
ಬಾಲಾಪುರ್‌ ತಾಲ್ಲೂಕಿನ ಪರಾಸ್‌ ಹಳ್ಳಿಯಲ್ಲಿರುವ ಬಾಬುಜಿ ಮಹಾರಾಜ್‌ ದೇವಾಲಯದಲ್ಲಿ ಭಾನುವಾರ ರಾತ್ರಿ 7.30ರ ಸುಮಾರಿಗೆ ದುರಂತ ಸಂಭವಿಸಿದ್ದು, ಈ ಬಗ್ಗೆ ಸ್ಥಳೀಯ ಆಡಳಿತ ಸೋಮವಾರ ಮಾಹಿತಿ ನೀಡಿದೆ.

ಪೂಜಾ ಕಾರ್ಯಕ್ರಮದ ಸಲುವಾಗಿ ಜನರು ದೇವಾಲಯಕ್ಕೆ ಆಗಮಿಸಿದ್ದರು. ಶತಮಾನದಷ್ಟು ಹಳೆಯ ಮರ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಟಿನ್‌ ಶೆಡ್‌ ಮೇಲೆ ಬಿದ್ದಿದೆ. 40 ಜನರು ಅಲ್ಲಿ ಆಶ್ರಯ ಪಡೆದಿದ್ದರು. ಈ ಪೈಕಿ 7 ಮಂದಿ ಮೃತಪಟ್ಟು, 23 ಜನರು ಗಾಯಗೊಂಡಿದ್ದಾರೆ. ಐವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಅಕೋಲಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

lokesh

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

16 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

9 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

22 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

23 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 day ago