ಮಹಾರಾಷ್ಟ್ರ : ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿನ ದೇವಾಲಯವೊಂದರ ಆವರಣದಲ್ಲಿದ್ದ ಟಿನ್ ಶೆಡ್ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದಿದ್ದು, ಅಲ್ಲಿ ಆಶ್ರಯ ಪಡೆದಿದ್ದ 7 ಮಂದಿ ಮೃತಪಟ್ಟಿದ್ದಾರೆ.
ಬಾಲಾಪುರ್ ತಾಲ್ಲೂಕಿನ ಪರಾಸ್ ಹಳ್ಳಿಯಲ್ಲಿರುವ ಬಾಬುಜಿ ಮಹಾರಾಜ್ ದೇವಾಲಯದಲ್ಲಿ ಭಾನುವಾರ ರಾತ್ರಿ 7.30ರ ಸುಮಾರಿಗೆ ದುರಂತ ಸಂಭವಿಸಿದ್ದು, ಈ ಬಗ್ಗೆ ಸ್ಥಳೀಯ ಆಡಳಿತ ಸೋಮವಾರ ಮಾಹಿತಿ ನೀಡಿದೆ.
ಪೂಜಾ ಕಾರ್ಯಕ್ರಮದ ಸಲುವಾಗಿ ಜನರು ದೇವಾಲಯಕ್ಕೆ ಆಗಮಿಸಿದ್ದರು. ಶತಮಾನದಷ್ಟು ಹಳೆಯ ಮರ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಟಿನ್ ಶೆಡ್ ಮೇಲೆ ಬಿದ್ದಿದೆ. 40 ಜನರು ಅಲ್ಲಿ ಆಶ್ರಯ ಪಡೆದಿದ್ದರು. ಈ ಪೈಕಿ 7 ಮಂದಿ ಮೃತಪಟ್ಟು, 23 ಜನರು ಗಾಯಗೊಂಡಿದ್ದಾರೆ. ಐವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಅಕೋಲಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…
ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…