BREAKING NEWS

ದಲಿತ ವ್ಯಕ್ತಿಯ ದೇಹಕ್ಕೆ ಮಲ ಮೆತ್ತಿಸಿ ವಿಕೃತಿ

ಭೋಪಾಲ್ : ಮೇಲ್ಜಾತಿ ವ್ಯಕ್ತಿಯೊಬ್ಬ ದಲಿತ ವ್ಯಕ್ತಿಯ ಮುಖ ಹಾಗೂ ದೇಹಕ್ಕೆ ಮಲ ಮೆತ್ತಿಸಿ ವಿಕೃತಿ ಮೆರೆದ ಆರೋಪವೊಂದು ಮಧ್ಯಪ್ರದೇಶದ ಛತ್ತರ್‍ಪುರ ಜಿಲ್ಲೆಯಲ್ಲಿ ಕೇಳಿಬಂದಿದೆ.

ಆರೋಪಿಯನ್ನು ರಾಮಕೃಪಾಲ್ ಪಟೇಲ್ ಹಾಗೂ ಸಂತ್ರಸ್ತನನ್ನು ದಶರತ್ ಅಹಿರ್ವಾರ್ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ಧ ದೂರು ದಾಖಲಾದ ಹಿನ್ನೆಲೆಯಲ್ಲಿ ಇದೀಗ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಡೆದಿದ್ದೇನು : ಶುಕ್ರವಾರ ಛತ್ತರ್‍ಪುರ ಜಿಲ್ಲಾ ಕೇಂದ್ರದಿಂದ ಸುಮಾರು 35 ಕಿಮೀ ದೂರದಲ್ಲಿರುವ ಬಿಕೌರಾ ಗ್ರಾಮದಲ್ಲಿ ಪಂಚಾಯತ್‍ಗೆ ಚರಂಡಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಅಹಿರ್ವಾರ್ ಹೇಳಿದ್ದಾರೆ.

ಘಟನೆ ಸಂಬಂಧ ಮಹಾರಾಜಪುರ ಪೊಲೀಸ್ ಠಾಣೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಹಿರ್ವಾರ್, ರಾಮಕೃಪಾಲ್ ಪಟೇಲ್ ಸಮೀಪದ ಹ್ಯಾಂಡ್ ಪಂಪ್‍ನಲ್ಲಿ ಸ್ನಾನ ಮಾಡುತ್ತಿದ್ದರು. ಈ ವೇಳೆ ನಿರ್ಮಾಣ ಕಾರ್ಯದಲ್ಲಿ ಬಳಸುತ್ತಿದ್ದ ಗ್ರೀಸ್ ಅನ್ನು ತಪ್ಪಿ ಅವರು ಸ್ಪರ್ಶಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ಪಟೇಲ್, ಮಲವನ್ನು ತಂದು ನನ್ನ ತಲೆ ಮತ್ತು ಮುಖ ಸೇರಿದಂತೆ ಮೈಮೇಲೆ ಬಳಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಅಲ್ಲದೆ ಪಟೇಲ್ ನನ್ನ ಜಾತಿಯನ್ನು ನಿಂದಿಸಿದ್ದಾರೆ. ಈ ವಿಚಾರವನ್ನು ಪಂಚಾಯತ್‍ನವರ ಗಮನಕ್ಕೆ ಶುಕ್ರವಾರವೇ ತಂದಿದ್ದೇನೆ. ಆದರೆ ಪಂಚಾಯತ್ ಸಿಬ್ಬಂದಿ ಕೂಡ ನನಗೆ 600 ರೂಪಾಯಿ ದಂಡವನ್ನು ವಿಧಿಸಿದ್ದಾರೆ ಎಂದು ಅಹಿರ್ವಾರ್ ಬೇಸರ ಹೊರಹಾಕಿದ್ದಾರೆ.

ಈ ಸಂಬಂಧ ಶುಕ್ರವಾರವೇ ಯಾಕೆ ಪೊಲೀಸರಿಗೆ ದೂರು ನೀಡಲಿಲ್ಲ ಎಂದು ಪ್ರಶ್ನಿಸಿದಾಗ, ಕೆಲಸವನ್ನು ಮಧ್ಯದಲ್ಲಿ ಬಿಡಲು ಸಾಧ್ಯವಿಲ್ಲ. ಹೀಗಾಗಿ ದೂರು ನೀಡಲು ಆಗಿಲ್ಲ ಎಂದು ಅಹಿರ್ವಾರ್ ತಿಳಿಸಿದ್ದಾರೆ.

ಸದ್ಯ ಆರೋಪಿ ರಾಮಕೃಪಾಲ್ ಪಟೇಲ್ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು ಅಥವಾ ಸಾರ್ವಜನಿಕ ಪದಗಳಿಗೆ ಶಿಕ್ಷೆ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಪೊಲೀಸ್ ಉಪವಿಭಾಗಾಧಿಕಾರಿ ಮನ್ಮೋಹನ್ ಸಿಂಗ್ ಬಘೇಲ್ ತಿಳಿಸಿದ್ದಾರೆ.

ಅಹಿರ್ವಾರ್ ಕೆಲಸ ಮಾಡುತ್ತಿದ್ದಾಗ ಸಮೀಪದಲ್ಲಿ ಸ್ನಾನ ಮಾಡುತ್ತಿದ್ದ ಪಟೇಲ್ ಅವರೊಂದಿಗೆ ತಮಾಷೆಯ ಮಾತುಗಳನ್ನಾಡುತ್ತಿದ್ದರು. ಪಟೇಲ್ ಅವರ ಕೈಗೆ ಗ್ರೀಸ್ ತಾಗಿದಾಗ ತಮಾಷೆಯಾಗಿ ಪರಸ್ಪರ ವಸ್ತುಗಳನ್ನು ಎಸೆದುಕೊಂಡರು. ನಂತರ ಪಟೇಲ್, ಮಲವನ್ನು ತಂದು ಅಹಿರ್ವಾರ್ ಅವರ ಬೆನ್ನಿನ ಮೇಲೆ ಎಸೆದರು ಎಂದು ಪೊಲೀಸ್ ಅಧಿಕಾರಿ ವಿವರಿಸಿದ್ದಾರೆ.

ಇತ್ತೀಚೆಗೆ ಸಿಧಿ ಜಿಲ್ಲೆಯಲ್ಲಿ ಬುಡಕಟ್ಟು ಯುವಕನ ಮೇಲೆ ವ್ಯಕ್ತಿಯೊಬ್ಬರು ಮೂತ್ರ ವಿಸರ್ಜನೆ ಮಾಡಿದ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಭಾರೀ ಆಕ್ರೋಶಕ್ಕೆ ಕಾರಣವಾಯಿತು.

lokesh

Recent Posts

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

30 mins ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

1 hour ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

1 hour ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

2 hours ago

ಇವಿ ಹಬ್ ಆಗಿ ಕರ್ನಾಟಕ ರೂಪಾಂತರ ; ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…

2 hours ago

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

2 hours ago