BREAKING NEWS

ದಲಿತ ವ್ಯಕ್ತಿಯ ದೇಹಕ್ಕೆ ಮಲ ಮೆತ್ತಿಸಿ ವಿಕೃತಿ

ಭೋಪಾಲ್ : ಮೇಲ್ಜಾತಿ ವ್ಯಕ್ತಿಯೊಬ್ಬ ದಲಿತ ವ್ಯಕ್ತಿಯ ಮುಖ ಹಾಗೂ ದೇಹಕ್ಕೆ ಮಲ ಮೆತ್ತಿಸಿ ವಿಕೃತಿ ಮೆರೆದ ಆರೋಪವೊಂದು ಮಧ್ಯಪ್ರದೇಶದ ಛತ್ತರ್‍ಪುರ ಜಿಲ್ಲೆಯಲ್ಲಿ ಕೇಳಿಬಂದಿದೆ.

ಆರೋಪಿಯನ್ನು ರಾಮಕೃಪಾಲ್ ಪಟೇಲ್ ಹಾಗೂ ಸಂತ್ರಸ್ತನನ್ನು ದಶರತ್ ಅಹಿರ್ವಾರ್ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ಧ ದೂರು ದಾಖಲಾದ ಹಿನ್ನೆಲೆಯಲ್ಲಿ ಇದೀಗ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಡೆದಿದ್ದೇನು : ಶುಕ್ರವಾರ ಛತ್ತರ್‍ಪುರ ಜಿಲ್ಲಾ ಕೇಂದ್ರದಿಂದ ಸುಮಾರು 35 ಕಿಮೀ ದೂರದಲ್ಲಿರುವ ಬಿಕೌರಾ ಗ್ರಾಮದಲ್ಲಿ ಪಂಚಾಯತ್‍ಗೆ ಚರಂಡಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಅಹಿರ್ವಾರ್ ಹೇಳಿದ್ದಾರೆ.

ಘಟನೆ ಸಂಬಂಧ ಮಹಾರಾಜಪುರ ಪೊಲೀಸ್ ಠಾಣೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಹಿರ್ವಾರ್, ರಾಮಕೃಪಾಲ್ ಪಟೇಲ್ ಸಮೀಪದ ಹ್ಯಾಂಡ್ ಪಂಪ್‍ನಲ್ಲಿ ಸ್ನಾನ ಮಾಡುತ್ತಿದ್ದರು. ಈ ವೇಳೆ ನಿರ್ಮಾಣ ಕಾರ್ಯದಲ್ಲಿ ಬಳಸುತ್ತಿದ್ದ ಗ್ರೀಸ್ ಅನ್ನು ತಪ್ಪಿ ಅವರು ಸ್ಪರ್ಶಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ಪಟೇಲ್, ಮಲವನ್ನು ತಂದು ನನ್ನ ತಲೆ ಮತ್ತು ಮುಖ ಸೇರಿದಂತೆ ಮೈಮೇಲೆ ಬಳಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಅಲ್ಲದೆ ಪಟೇಲ್ ನನ್ನ ಜಾತಿಯನ್ನು ನಿಂದಿಸಿದ್ದಾರೆ. ಈ ವಿಚಾರವನ್ನು ಪಂಚಾಯತ್‍ನವರ ಗಮನಕ್ಕೆ ಶುಕ್ರವಾರವೇ ತಂದಿದ್ದೇನೆ. ಆದರೆ ಪಂಚಾಯತ್ ಸಿಬ್ಬಂದಿ ಕೂಡ ನನಗೆ 600 ರೂಪಾಯಿ ದಂಡವನ್ನು ವಿಧಿಸಿದ್ದಾರೆ ಎಂದು ಅಹಿರ್ವಾರ್ ಬೇಸರ ಹೊರಹಾಕಿದ್ದಾರೆ.

ಈ ಸಂಬಂಧ ಶುಕ್ರವಾರವೇ ಯಾಕೆ ಪೊಲೀಸರಿಗೆ ದೂರು ನೀಡಲಿಲ್ಲ ಎಂದು ಪ್ರಶ್ನಿಸಿದಾಗ, ಕೆಲಸವನ್ನು ಮಧ್ಯದಲ್ಲಿ ಬಿಡಲು ಸಾಧ್ಯವಿಲ್ಲ. ಹೀಗಾಗಿ ದೂರು ನೀಡಲು ಆಗಿಲ್ಲ ಎಂದು ಅಹಿರ್ವಾರ್ ತಿಳಿಸಿದ್ದಾರೆ.

ಸದ್ಯ ಆರೋಪಿ ರಾಮಕೃಪಾಲ್ ಪಟೇಲ್ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು ಅಥವಾ ಸಾರ್ವಜನಿಕ ಪದಗಳಿಗೆ ಶಿಕ್ಷೆ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಪೊಲೀಸ್ ಉಪವಿಭಾಗಾಧಿಕಾರಿ ಮನ್ಮೋಹನ್ ಸಿಂಗ್ ಬಘೇಲ್ ತಿಳಿಸಿದ್ದಾರೆ.

ಅಹಿರ್ವಾರ್ ಕೆಲಸ ಮಾಡುತ್ತಿದ್ದಾಗ ಸಮೀಪದಲ್ಲಿ ಸ್ನಾನ ಮಾಡುತ್ತಿದ್ದ ಪಟೇಲ್ ಅವರೊಂದಿಗೆ ತಮಾಷೆಯ ಮಾತುಗಳನ್ನಾಡುತ್ತಿದ್ದರು. ಪಟೇಲ್ ಅವರ ಕೈಗೆ ಗ್ರೀಸ್ ತಾಗಿದಾಗ ತಮಾಷೆಯಾಗಿ ಪರಸ್ಪರ ವಸ್ತುಗಳನ್ನು ಎಸೆದುಕೊಂಡರು. ನಂತರ ಪಟೇಲ್, ಮಲವನ್ನು ತಂದು ಅಹಿರ್ವಾರ್ ಅವರ ಬೆನ್ನಿನ ಮೇಲೆ ಎಸೆದರು ಎಂದು ಪೊಲೀಸ್ ಅಧಿಕಾರಿ ವಿವರಿಸಿದ್ದಾರೆ.

ಇತ್ತೀಚೆಗೆ ಸಿಧಿ ಜಿಲ್ಲೆಯಲ್ಲಿ ಬುಡಕಟ್ಟು ಯುವಕನ ಮೇಲೆ ವ್ಯಕ್ತಿಯೊಬ್ಬರು ಮೂತ್ರ ವಿಸರ್ಜನೆ ಮಾಡಿದ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಭಾರೀ ಆಕ್ರೋಶಕ್ಕೆ ಕಾರಣವಾಯಿತು.

lokesh

Recent Posts

ಬಸ್ತೀಪುರ ಬಡ ಕುಟುಂಬಗಳಿಗೆ ಹಕ್ಕು ಪತ್ರ: ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯ ಬಸ್ತೀಪುರದ ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಬಗ್ಗೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕ್ರಮ…

8 mins ago

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

30 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

54 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

1 hour ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

2 hours ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

2 hours ago