BREAKING NEWS

ದಲಿತ ವ್ಯಕ್ತಿಯ ದೇಹಕ್ಕೆ ಮಲ ಮೆತ್ತಿಸಿ ವಿಕೃತಿ

ಭೋಪಾಲ್ : ಮೇಲ್ಜಾತಿ ವ್ಯಕ್ತಿಯೊಬ್ಬ ದಲಿತ ವ್ಯಕ್ತಿಯ ಮುಖ ಹಾಗೂ ದೇಹಕ್ಕೆ ಮಲ ಮೆತ್ತಿಸಿ ವಿಕೃತಿ ಮೆರೆದ ಆರೋಪವೊಂದು ಮಧ್ಯಪ್ರದೇಶದ ಛತ್ತರ್‍ಪುರ ಜಿಲ್ಲೆಯಲ್ಲಿ ಕೇಳಿಬಂದಿದೆ.

ಆರೋಪಿಯನ್ನು ರಾಮಕೃಪಾಲ್ ಪಟೇಲ್ ಹಾಗೂ ಸಂತ್ರಸ್ತನನ್ನು ದಶರತ್ ಅಹಿರ್ವಾರ್ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ಧ ದೂರು ದಾಖಲಾದ ಹಿನ್ನೆಲೆಯಲ್ಲಿ ಇದೀಗ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಡೆದಿದ್ದೇನು : ಶುಕ್ರವಾರ ಛತ್ತರ್‍ಪುರ ಜಿಲ್ಲಾ ಕೇಂದ್ರದಿಂದ ಸುಮಾರು 35 ಕಿಮೀ ದೂರದಲ್ಲಿರುವ ಬಿಕೌರಾ ಗ್ರಾಮದಲ್ಲಿ ಪಂಚಾಯತ್‍ಗೆ ಚರಂಡಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಅಹಿರ್ವಾರ್ ಹೇಳಿದ್ದಾರೆ.

ಘಟನೆ ಸಂಬಂಧ ಮಹಾರಾಜಪುರ ಪೊಲೀಸ್ ಠಾಣೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಹಿರ್ವಾರ್, ರಾಮಕೃಪಾಲ್ ಪಟೇಲ್ ಸಮೀಪದ ಹ್ಯಾಂಡ್ ಪಂಪ್‍ನಲ್ಲಿ ಸ್ನಾನ ಮಾಡುತ್ತಿದ್ದರು. ಈ ವೇಳೆ ನಿರ್ಮಾಣ ಕಾರ್ಯದಲ್ಲಿ ಬಳಸುತ್ತಿದ್ದ ಗ್ರೀಸ್ ಅನ್ನು ತಪ್ಪಿ ಅವರು ಸ್ಪರ್ಶಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ಪಟೇಲ್, ಮಲವನ್ನು ತಂದು ನನ್ನ ತಲೆ ಮತ್ತು ಮುಖ ಸೇರಿದಂತೆ ಮೈಮೇಲೆ ಬಳಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಅಲ್ಲದೆ ಪಟೇಲ್ ನನ್ನ ಜಾತಿಯನ್ನು ನಿಂದಿಸಿದ್ದಾರೆ. ಈ ವಿಚಾರವನ್ನು ಪಂಚಾಯತ್‍ನವರ ಗಮನಕ್ಕೆ ಶುಕ್ರವಾರವೇ ತಂದಿದ್ದೇನೆ. ಆದರೆ ಪಂಚಾಯತ್ ಸಿಬ್ಬಂದಿ ಕೂಡ ನನಗೆ 600 ರೂಪಾಯಿ ದಂಡವನ್ನು ವಿಧಿಸಿದ್ದಾರೆ ಎಂದು ಅಹಿರ್ವಾರ್ ಬೇಸರ ಹೊರಹಾಕಿದ್ದಾರೆ.

ಈ ಸಂಬಂಧ ಶುಕ್ರವಾರವೇ ಯಾಕೆ ಪೊಲೀಸರಿಗೆ ದೂರು ನೀಡಲಿಲ್ಲ ಎಂದು ಪ್ರಶ್ನಿಸಿದಾಗ, ಕೆಲಸವನ್ನು ಮಧ್ಯದಲ್ಲಿ ಬಿಡಲು ಸಾಧ್ಯವಿಲ್ಲ. ಹೀಗಾಗಿ ದೂರು ನೀಡಲು ಆಗಿಲ್ಲ ಎಂದು ಅಹಿರ್ವಾರ್ ತಿಳಿಸಿದ್ದಾರೆ.

ಸದ್ಯ ಆರೋಪಿ ರಾಮಕೃಪಾಲ್ ಪಟೇಲ್ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು ಅಥವಾ ಸಾರ್ವಜನಿಕ ಪದಗಳಿಗೆ ಶಿಕ್ಷೆ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಪೊಲೀಸ್ ಉಪವಿಭಾಗಾಧಿಕಾರಿ ಮನ್ಮೋಹನ್ ಸಿಂಗ್ ಬಘೇಲ್ ತಿಳಿಸಿದ್ದಾರೆ.

ಅಹಿರ್ವಾರ್ ಕೆಲಸ ಮಾಡುತ್ತಿದ್ದಾಗ ಸಮೀಪದಲ್ಲಿ ಸ್ನಾನ ಮಾಡುತ್ತಿದ್ದ ಪಟೇಲ್ ಅವರೊಂದಿಗೆ ತಮಾಷೆಯ ಮಾತುಗಳನ್ನಾಡುತ್ತಿದ್ದರು. ಪಟೇಲ್ ಅವರ ಕೈಗೆ ಗ್ರೀಸ್ ತಾಗಿದಾಗ ತಮಾಷೆಯಾಗಿ ಪರಸ್ಪರ ವಸ್ತುಗಳನ್ನು ಎಸೆದುಕೊಂಡರು. ನಂತರ ಪಟೇಲ್, ಮಲವನ್ನು ತಂದು ಅಹಿರ್ವಾರ್ ಅವರ ಬೆನ್ನಿನ ಮೇಲೆ ಎಸೆದರು ಎಂದು ಪೊಲೀಸ್ ಅಧಿಕಾರಿ ವಿವರಿಸಿದ್ದಾರೆ.

ಇತ್ತೀಚೆಗೆ ಸಿಧಿ ಜಿಲ್ಲೆಯಲ್ಲಿ ಬುಡಕಟ್ಟು ಯುವಕನ ಮೇಲೆ ವ್ಯಕ್ತಿಯೊಬ್ಬರು ಮೂತ್ರ ವಿಸರ್ಜನೆ ಮಾಡಿದ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಭಾರೀ ಆಕ್ರೋಶಕ್ಕೆ ಕಾರಣವಾಯಿತು.

lokesh

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

1 hour ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

1 hour ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

1 hour ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

2 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

2 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

2 hours ago