BREAKING NEWS

ಖರ್ಗೆ ಮೈಬಣ್ಣದ ಕುರಿತು ಅವಹೇಳನಕಾರಿ ಹೇಳಿಕೆ; ಆರಗ ಜ್ಞಾನೇಂದ್ರ ಕ್ಷಮೆಗೆ ಕಾಂಗ್ರೆಸ್ ಆಗ್ರಹ

ಬೆಂಗಳೂರು : ʼʼಮಲ್ಲಿಕಾರ್ಜುನ್ ಖರ್ಗೆಯವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ ಆರಗ ಜ್ಞಾನೇಂದ್ರ ಅವರು ಬಿಜೆಪಿಯ ಕೀಳು ಮಟ್ಟದ ಮನಸ್ಥಿತಿಯನ್ನು ಪ್ರತಿನಿಧಿಸಿದ್ದಾರೆʼʼ ಎಂದು ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ʼʼಬಿಜೆಪಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಜ್ಞಾನೇಂದ್ರರನ್ನು ಉಚ್ಚಾಟನೆ ಮಾಡಬೇಕು, ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ್ ಖರ್ಗೆಯವರ ಹಾಗೂ ದಲಿತರ ಕ್ಷಮೆ ಕೇಳಬೇಕುʼʼ ಎಂದು ಒತ್ತಾಯಿಸಿದೆ.

ʼʼಬಿಜೆಪಿಯವರಲ್ಲಿ ದಲಿತರ ಬಗ್ಗೆ ಇರುವ ಅಸಹನೆ, ಅಸಡ್ಡೆಯನ್ನು ವ್ಯಕ್ತಪಡಿಸಿದ್ದಾರೆ.ಮೈಬಣ್ಣದ ಬಗೆಗಿನ ಈ ಅವಹೇಳನ ಕೇವಲ ಖರ್ಗೆಯವರನ್ನು ಅವಮಾನಿಸಿದ್ದಲ್ಲ, ಖರ್ಗೆಯವರ ಹೆಸರಲ್ಲಿ ಇಡೀ ಮೂಲನಿವಾಸಿ ದಲಿತರಿಗೆ ಮಾಡಿದ ಅವಮಾನʼʼ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ʼʼಬಣ್ಣದ ಬಗೆಗಿನ ಶೋಷಣೆ, ಅವಮಾನವನ್ನು ತೊಡೆದುಹಾಕಲು ಜಾಗತಿಕ ಮಟ್ಟದಲ್ಲಿ ಚಳವಳಿಗಳು ನಡೆದಿವೆ, ಪಾಶ್ಚಿಮತ್ಯ ದೇಶಗಳಲ್ಲಿ ಮೈಬಣ್ಣದ ಬಗ್ಗೆ, ದೈಹಿಕ ರೂಪದ ಬಗ್ಗೆ ಅವಮಾನಿಸಿದರೆ ಮಹಾ ಅಪರಾಧಿಯಂತೆ ಕಾಣಲಾಗುತ್ತದೆ, ಆದರೆ ಇಲ್ಲಿನ ಬಿಜೆಪಿಗರು ದಲಿತರನ್ನು, ದಲಿತರ ಮೈಬಣ್ಣವನ್ನು, ರೂಪವನ್ನು ಅವಮಾನಿಸುವುದು ಹೆಗ್ಗಳಿಕೆಯಾಗಿ ನೋಡುತ್ತದೆʼʼ ಎಂದು ಕಾಂಗ್ರೆಸ್‌ ದೂರಿದೆ.

ʼʼನಮ್ಮ ದುರಾದೃಷ್ಟ ಎಂದ್ರೇ ಆ ಭಾಗದವರು ಫಾರೆಸ್ಟ್ ಮಿನಿಸ್ಟರ್ ಅಗಿದ್ದಾರೆ. ಫಾರೆಸ್ಟ್ ಇಲ್ಲದವರು ಮಿನಿಸ್ಟರ್ ಅಗಿದ್ದಾರೆ. ಅವರಿಗೆ ಮರ- ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ, ಮರದ ನೆರಳು ಗೊತ್ತಿಲ್ಲ..ಸುಟ್ಟು ಕರಕಲಾಗಿರ್ತಾರೆ…, ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ, ಪಾಪ.., ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆʼʼ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

18 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

18 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

18 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

18 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

18 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

18 hours ago