BREAKING NEWS

ಖರ್ಗೆ ಮೈಬಣ್ಣದ ಕುರಿತು ಅವಹೇಳನಕಾರಿ ಹೇಳಿಕೆ; ಆರಗ ಜ್ಞಾನೇಂದ್ರ ಕ್ಷಮೆಗೆ ಕಾಂಗ್ರೆಸ್ ಆಗ್ರಹ

ಬೆಂಗಳೂರು : ʼʼಮಲ್ಲಿಕಾರ್ಜುನ್ ಖರ್ಗೆಯವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ ಆರಗ ಜ್ಞಾನೇಂದ್ರ ಅವರು ಬಿಜೆಪಿಯ ಕೀಳು ಮಟ್ಟದ ಮನಸ್ಥಿತಿಯನ್ನು ಪ್ರತಿನಿಧಿಸಿದ್ದಾರೆʼʼ ಎಂದು ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ʼʼಬಿಜೆಪಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಜ್ಞಾನೇಂದ್ರರನ್ನು ಉಚ್ಚಾಟನೆ ಮಾಡಬೇಕು, ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ್ ಖರ್ಗೆಯವರ ಹಾಗೂ ದಲಿತರ ಕ್ಷಮೆ ಕೇಳಬೇಕುʼʼ ಎಂದು ಒತ್ತಾಯಿಸಿದೆ.

ʼʼಬಿಜೆಪಿಯವರಲ್ಲಿ ದಲಿತರ ಬಗ್ಗೆ ಇರುವ ಅಸಹನೆ, ಅಸಡ್ಡೆಯನ್ನು ವ್ಯಕ್ತಪಡಿಸಿದ್ದಾರೆ.ಮೈಬಣ್ಣದ ಬಗೆಗಿನ ಈ ಅವಹೇಳನ ಕೇವಲ ಖರ್ಗೆಯವರನ್ನು ಅವಮಾನಿಸಿದ್ದಲ್ಲ, ಖರ್ಗೆಯವರ ಹೆಸರಲ್ಲಿ ಇಡೀ ಮೂಲನಿವಾಸಿ ದಲಿತರಿಗೆ ಮಾಡಿದ ಅವಮಾನʼʼ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ʼʼಬಣ್ಣದ ಬಗೆಗಿನ ಶೋಷಣೆ, ಅವಮಾನವನ್ನು ತೊಡೆದುಹಾಕಲು ಜಾಗತಿಕ ಮಟ್ಟದಲ್ಲಿ ಚಳವಳಿಗಳು ನಡೆದಿವೆ, ಪಾಶ್ಚಿಮತ್ಯ ದೇಶಗಳಲ್ಲಿ ಮೈಬಣ್ಣದ ಬಗ್ಗೆ, ದೈಹಿಕ ರೂಪದ ಬಗ್ಗೆ ಅವಮಾನಿಸಿದರೆ ಮಹಾ ಅಪರಾಧಿಯಂತೆ ಕಾಣಲಾಗುತ್ತದೆ, ಆದರೆ ಇಲ್ಲಿನ ಬಿಜೆಪಿಗರು ದಲಿತರನ್ನು, ದಲಿತರ ಮೈಬಣ್ಣವನ್ನು, ರೂಪವನ್ನು ಅವಮಾನಿಸುವುದು ಹೆಗ್ಗಳಿಕೆಯಾಗಿ ನೋಡುತ್ತದೆʼʼ ಎಂದು ಕಾಂಗ್ರೆಸ್‌ ದೂರಿದೆ.

ʼʼನಮ್ಮ ದುರಾದೃಷ್ಟ ಎಂದ್ರೇ ಆ ಭಾಗದವರು ಫಾರೆಸ್ಟ್ ಮಿನಿಸ್ಟರ್ ಅಗಿದ್ದಾರೆ. ಫಾರೆಸ್ಟ್ ಇಲ್ಲದವರು ಮಿನಿಸ್ಟರ್ ಅಗಿದ್ದಾರೆ. ಅವರಿಗೆ ಮರ- ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ, ಮರದ ನೆರಳು ಗೊತ್ತಿಲ್ಲ..ಸುಟ್ಟು ಕರಕಲಾಗಿರ್ತಾರೆ…, ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ, ಪಾಪ.., ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆʼʼ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

andolanait

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

26 mins ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

1 hour ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

3 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

4 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

8 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

11 hours ago