BREAKING NEWS

ಹೆಂಡತಿ ಜತೆ ಜಗಳವಾಡಿ ಹೈ ಟೆನ್ಷನ್ ವೈರ್ ಕಚ್ಚಿದ ಕುಡುಕ

ಚೆನ್ನೈ: ‘ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ’ ಎನ್ನುವುದು ಗಾದೆ ಮಾತು. ಆದರೆ ಕೆಲವೊಂದು ಯುದ್ಧಗಳು ಊಟದ ಬಳಿಕವೂ ಮುಂದುವರಿಯುತ್ತವೆ. ಇಲ್ಲೊಬ್ಬ ಕುಡುಕ ಮತ್ತು ಹೆಂಡತಿಯ ಜಗಳ, ಆತ ಕೋಪದ ಭರದಲ್ಲಿ ಹೈಟೆನ್ಷನ್ ವೈರ್ ಅನ್ನು ಕಡಿಯುವವರೆಗೂ ಹೋಗಿದೆ.
ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಟ್ರಾನ್ಸ್‌ಫಾರ್ಮರ್ ಮೇಲೆ ಹತ್ತಿ, ಹೈಟೆನ್ಷನ್ ವೈರ್ ಅನ್ನು ಕಚ್ಚಿದ್ದಾನೆ. ಇದರ ಪರಿಣಾಮ ಆತನ ಮುಖದಲ್ಲಿ ತೀವ್ರ ಸುಟ್ಟ ಗಾಯಗಳಾಗಿವೆ. ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಹೆಂಡತಿ ಜಗಳದ ನಂತರ ತನ್ನ ತವರು ಗ್ರಾಮ ರೆಡ್ಡಿಪಾಳಯಂಗೆ ತನ್ನನ್ನು ಬಿಟ್ಟು ಹೋಗಿದ್ದಾಳೆ ಎಂದು ಬೇಸರಗೊಂಡಿದ್ದ ಚಿನ್ನಮಂಗೋಡು ಗ್ರಾಮದ ನಿವಾಸಿ, 33 ವರ್ಷದ ಧರ್ಮದೊರೈ, ಹರಿಯುವ ಕರೆಂಟ್‌ಗೆ ಬಾಯಿಟ್ಟಿದ್ದಾನೆ. ಹೆಂಡತಿ ಜತೆಗಿನ ಜಗಳಕ್ಕಿಂತಲೂ ವಿದ್ಯುತ್ ಶಾಕ್ ಪ್ರಭಾವ ಕಡಿಮೆ ಇರಬಹುದು ಎಂದು ಆತ ಭಾವಿಸಿರಬಹುದು. ಜತೆಗೆ ಆತನೊಳಗಿದ್ದ ಎಣ್ಣೆಯ ಕಿಕ್ ಆತನಿಗೆ ಮತ್ತಷ್ಟು ಉತ್ತೇಜನ ನೀಡಿತ್ತು.
ತನ್ನ ಹೆಂಡತಿಯನ್ನು ತವರು ಮನೆಯಿಂದ ಮರಳಿ ಕರೆತರಲು ಸಹಾಯ ಮಾಡಬೇಕು ಎಂದು ಕೋರಿ ಧರ್ಮದೊರೈ, ಪತ್ನಿಯ ಸಹೋದರರ ವಿರುದ್ಧ ದೂರು ನೀಡಲು ಅರಂಬಕ್ಕಂ ಪೊಲೀಸ್ ಠಾಣೆಯನ್ನು ಹಲವು ಬಾರಿ ಸಂಪರ್ಕಿಸಿದ್ದ ಎಂದು ಮೂಲಗಳು ತಿಳಿಸಿವೆ.
ಕುಡಿತ ಅಮಲಿನಲ್ಲಿ ತೂರಾಡುತ್ತಿದ್ದ ಧರ್ಮದೊರೈ, ಬುಧವಾರ ಕೂಡ ಪೊಲೀಸ್ ಠಾಣೆಗೆ ಬಂದಿದ್ದ. ಆತನನ್ನು ಸ್ವಲ್ಪ ಕಾಲ ಕಾಯುವಂತೆ ಪೊಲೀಸರು ಸೂಚಿಸಿದ್ದರು. ಸ್ವಲ್ಪ ಹೊತ್ತು ಕುಳಿತಿದ್ದ ಧರ್ಮದೊರೈ, ಇದ್ದಕ್ಕಿದ್ದಂತೆ ಎದ್ದು ನಡೆದಿದ್ದಾನೆ. ಪೊಲೀಸ್ ಠಾಣೆ ಆವರಣದಿಂದ ಹೊರಗೆ ಎದುರಿನ ಕಟ್ಟಡದ ಸಮೀಪವಿದ್ದ ಟ್ರಾನ್ಸ್‌ಫಾರ್ಮರ್ ಕಂಬವನ್ನು ಏರಿದ್ದಾನೆ.
ಇದನ್ನು ಕಂಡ ಪೊಲೀಸರು ಹಾಗೂ ಸ್ಥಳೀಯರು ಗಾಬರಿಗೊಂಡಿದ್ದಾರೆ. ನಿನ್ನ ಸಮಸ್ಯೆಯನ್ನು ಪರಿಹರಿಸುತ್ತೇವೆ, ಕೆಳಗೆ ಇಳಿದು ಬಾ ಎಂದು ಮನವೊಲಿಸಲು ಸಾಕಷ್ಟು ಪ್ರಯತ್ನಿಸಿದ್ದಾರೆ. ಆತ ಅನಾಹುತಕಾರಿ ಹೆಜ್ಜೆ ಇರಿಸುತ್ತಾನೆ ಎಂಬ ಭಯ ಉಂಟಾಗಿತ್ತು. ಕೆಳಗಿನಿಂದ ಎಷ್ಟೇ ಕೂಗಿ ಕರೆದರೂ ಆತ ಕೇಳಿಸಿಕೊಳ್ಳುವ ಸ್ಥಿತಿಯಲ್ಲಿ ಇರಲಿಲ್ಲ. ಎಲ್ಲರೂ ನೋಡ ನೋಡುತ್ತಿದ್ದಂತೆಯೇ ಒಂದು ಹೈ ಟೆನ್ಷನ್ ವೈರ್ ಅನ್ನು ಕಚ್ಚಿದ್ದಾನೆ. ಆಗ ಒಮ್ಮೆಲೆ ಬೆಂಕಿ ಹೊತ್ತಿಕೊಂಡು ಆರಿದೆ. ಆತ ಅಲ್ಲಿಯೇ ಪ್ರಜ್ಞೆ ತಪ್ಪಿ ನಿಂತಿದ್ದು, ಆಗ ಮತ್ತೊಮ್ಮೆ ತಂತಿಗೆ ಆತನ ದೇಹ ತಾಗಿದೆ. ಇದರಿಂದ ಜೋರಾಗಿ ಬೆಂಕಿ ಉರಿದಿದ್ದು, ವಿದ್ಯುತ್ ಆಘಾತಕ್ಕೆ ಆತ ಕೆಳಗೆ ಬಿದ್ದಿದ್ದಾನೆ. ಸುಮಾರು ಐದು- ಆರು ಅಡಿ ಎತ್ತರದಿಂದ ಆತ ನೆಲದ ಮೇಲೆ ಬಿದ್ದಿದ್ದಾನೆ.

ಕೂಡಲೇ ಪೊಲೀಸರು ಧರ್ಮದೊರೈನನ್ನು ಎಳವೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆ ಬಳಿಕ ಅಲ್ಲಿಂದ ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆತನ ಮುಖ ಹಾಗೂ ವಿವಿಧ ಭಾಗಗಳಲ್ಲಿ ತೀವ್ರ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಆತನಿಗೆ ಎಷ್ಟು ಪ್ರಮಾಣದ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿಲ್ಲ.

lokesh

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

1 hour ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

1 hour ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

2 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

2 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

2 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

2 hours ago