BREAKING NEWS

ಹೆಂಡತಿ ಜತೆ ಜಗಳವಾಡಿ ಹೈ ಟೆನ್ಷನ್ ವೈರ್ ಕಚ್ಚಿದ ಕುಡುಕ

ಚೆನ್ನೈ: ‘ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ’ ಎನ್ನುವುದು ಗಾದೆ ಮಾತು. ಆದರೆ ಕೆಲವೊಂದು ಯುದ್ಧಗಳು ಊಟದ ಬಳಿಕವೂ ಮುಂದುವರಿಯುತ್ತವೆ. ಇಲ್ಲೊಬ್ಬ ಕುಡುಕ ಮತ್ತು ಹೆಂಡತಿಯ ಜಗಳ, ಆತ ಕೋಪದ ಭರದಲ್ಲಿ ಹೈಟೆನ್ಷನ್ ವೈರ್ ಅನ್ನು ಕಡಿಯುವವರೆಗೂ ಹೋಗಿದೆ.
ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಟ್ರಾನ್ಸ್‌ಫಾರ್ಮರ್ ಮೇಲೆ ಹತ್ತಿ, ಹೈಟೆನ್ಷನ್ ವೈರ್ ಅನ್ನು ಕಚ್ಚಿದ್ದಾನೆ. ಇದರ ಪರಿಣಾಮ ಆತನ ಮುಖದಲ್ಲಿ ತೀವ್ರ ಸುಟ್ಟ ಗಾಯಗಳಾಗಿವೆ. ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಹೆಂಡತಿ ಜಗಳದ ನಂತರ ತನ್ನ ತವರು ಗ್ರಾಮ ರೆಡ್ಡಿಪಾಳಯಂಗೆ ತನ್ನನ್ನು ಬಿಟ್ಟು ಹೋಗಿದ್ದಾಳೆ ಎಂದು ಬೇಸರಗೊಂಡಿದ್ದ ಚಿನ್ನಮಂಗೋಡು ಗ್ರಾಮದ ನಿವಾಸಿ, 33 ವರ್ಷದ ಧರ್ಮದೊರೈ, ಹರಿಯುವ ಕರೆಂಟ್‌ಗೆ ಬಾಯಿಟ್ಟಿದ್ದಾನೆ. ಹೆಂಡತಿ ಜತೆಗಿನ ಜಗಳಕ್ಕಿಂತಲೂ ವಿದ್ಯುತ್ ಶಾಕ್ ಪ್ರಭಾವ ಕಡಿಮೆ ಇರಬಹುದು ಎಂದು ಆತ ಭಾವಿಸಿರಬಹುದು. ಜತೆಗೆ ಆತನೊಳಗಿದ್ದ ಎಣ್ಣೆಯ ಕಿಕ್ ಆತನಿಗೆ ಮತ್ತಷ್ಟು ಉತ್ತೇಜನ ನೀಡಿತ್ತು.
ತನ್ನ ಹೆಂಡತಿಯನ್ನು ತವರು ಮನೆಯಿಂದ ಮರಳಿ ಕರೆತರಲು ಸಹಾಯ ಮಾಡಬೇಕು ಎಂದು ಕೋರಿ ಧರ್ಮದೊರೈ, ಪತ್ನಿಯ ಸಹೋದರರ ವಿರುದ್ಧ ದೂರು ನೀಡಲು ಅರಂಬಕ್ಕಂ ಪೊಲೀಸ್ ಠಾಣೆಯನ್ನು ಹಲವು ಬಾರಿ ಸಂಪರ್ಕಿಸಿದ್ದ ಎಂದು ಮೂಲಗಳು ತಿಳಿಸಿವೆ.
ಕುಡಿತ ಅಮಲಿನಲ್ಲಿ ತೂರಾಡುತ್ತಿದ್ದ ಧರ್ಮದೊರೈ, ಬುಧವಾರ ಕೂಡ ಪೊಲೀಸ್ ಠಾಣೆಗೆ ಬಂದಿದ್ದ. ಆತನನ್ನು ಸ್ವಲ್ಪ ಕಾಲ ಕಾಯುವಂತೆ ಪೊಲೀಸರು ಸೂಚಿಸಿದ್ದರು. ಸ್ವಲ್ಪ ಹೊತ್ತು ಕುಳಿತಿದ್ದ ಧರ್ಮದೊರೈ, ಇದ್ದಕ್ಕಿದ್ದಂತೆ ಎದ್ದು ನಡೆದಿದ್ದಾನೆ. ಪೊಲೀಸ್ ಠಾಣೆ ಆವರಣದಿಂದ ಹೊರಗೆ ಎದುರಿನ ಕಟ್ಟಡದ ಸಮೀಪವಿದ್ದ ಟ್ರಾನ್ಸ್‌ಫಾರ್ಮರ್ ಕಂಬವನ್ನು ಏರಿದ್ದಾನೆ.
ಇದನ್ನು ಕಂಡ ಪೊಲೀಸರು ಹಾಗೂ ಸ್ಥಳೀಯರು ಗಾಬರಿಗೊಂಡಿದ್ದಾರೆ. ನಿನ್ನ ಸಮಸ್ಯೆಯನ್ನು ಪರಿಹರಿಸುತ್ತೇವೆ, ಕೆಳಗೆ ಇಳಿದು ಬಾ ಎಂದು ಮನವೊಲಿಸಲು ಸಾಕಷ್ಟು ಪ್ರಯತ್ನಿಸಿದ್ದಾರೆ. ಆತ ಅನಾಹುತಕಾರಿ ಹೆಜ್ಜೆ ಇರಿಸುತ್ತಾನೆ ಎಂಬ ಭಯ ಉಂಟಾಗಿತ್ತು. ಕೆಳಗಿನಿಂದ ಎಷ್ಟೇ ಕೂಗಿ ಕರೆದರೂ ಆತ ಕೇಳಿಸಿಕೊಳ್ಳುವ ಸ್ಥಿತಿಯಲ್ಲಿ ಇರಲಿಲ್ಲ. ಎಲ್ಲರೂ ನೋಡ ನೋಡುತ್ತಿದ್ದಂತೆಯೇ ಒಂದು ಹೈ ಟೆನ್ಷನ್ ವೈರ್ ಅನ್ನು ಕಚ್ಚಿದ್ದಾನೆ. ಆಗ ಒಮ್ಮೆಲೆ ಬೆಂಕಿ ಹೊತ್ತಿಕೊಂಡು ಆರಿದೆ. ಆತ ಅಲ್ಲಿಯೇ ಪ್ರಜ್ಞೆ ತಪ್ಪಿ ನಿಂತಿದ್ದು, ಆಗ ಮತ್ತೊಮ್ಮೆ ತಂತಿಗೆ ಆತನ ದೇಹ ತಾಗಿದೆ. ಇದರಿಂದ ಜೋರಾಗಿ ಬೆಂಕಿ ಉರಿದಿದ್ದು, ವಿದ್ಯುತ್ ಆಘಾತಕ್ಕೆ ಆತ ಕೆಳಗೆ ಬಿದ್ದಿದ್ದಾನೆ. ಸುಮಾರು ಐದು- ಆರು ಅಡಿ ಎತ್ತರದಿಂದ ಆತ ನೆಲದ ಮೇಲೆ ಬಿದ್ದಿದ್ದಾನೆ.

ಕೂಡಲೇ ಪೊಲೀಸರು ಧರ್ಮದೊರೈನನ್ನು ಎಳವೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆ ಬಳಿಕ ಅಲ್ಲಿಂದ ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆತನ ಮುಖ ಹಾಗೂ ವಿವಿಧ ಭಾಗಗಳಲ್ಲಿ ತೀವ್ರ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಆತನಿಗೆ ಎಷ್ಟು ಪ್ರಮಾಣದ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿಲ್ಲ.

lokesh

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

4 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

4 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

4 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

4 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

4 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

4 hours ago