BREAKING NEWS

ಚಾಲಕ ಬರೋದು ಲೇಟ್‌ ಆಯ್ತು ಅಂತಾ ತಾನೇ ಬಸ್‌ ಕೊಂಡೊಯ್ದ ಕುಡುಕ : ಬೀದರ್‌ನಲ್ಲಿ ತಪ್ಪಿದ ದುರಂತ

ಬೀದರ್‌ : ಮದ್ಯದ ಅಮಲಿನಲ್ಲಿ ತೂರಾಡುತ್ತಿದ್ದ ವ್ಯಕ್ತಿಯೊಬ್ಬ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಪ್ರಯಾಣಿಕ ಬಸ್‌ ಅನ್ನೇ ಹೈಜಾಕ್‌ ಮಾಡಲು ಯತ್ನಿಸಿ ಪೊಲೀಸರ ಅತಿಥಿಯಾಗಿದ್ದಾನೆ. ಔರಾದ್‌ ಬಸ್‌ ನಿಲ್ದಾಣದಲ್ಲಿ ಸೋಮವಾರ ಈ ಘಟನೆ ನಡೆದಿದೆ. ಕರಂಜಿ ಗ್ರಾಮದ ಯಶಪ್ಪ ಸೂರ್ಯವಂಶಿ ಘಟನೆಯ ಸೂತ್ರಧಾರ.

ವಾರದ ಸಂತೆಗೆ ಬಂದಿದ್ದ ಈತ ಎಲ್ಲವನ್ನೂ ಮರೆತು ಕಂಠಮಟ್ಟ ಮದ್ಯ ಸೇವನೆ ಮಾಡಿದ್ದ. ಬಳಿಕ ಊರು ನೆನಪಾಗಿ ವಾಪಸಾಗಲು ಔರಾದ್‌ ಬಸ್‌ ನಿಲ್ದಾಣಕ್ಕೆ ಬಂದಿದ್ದ. ಬೀದರ್‌ ಕಡೆ ಹೊರಡಲು ಅಣಿಯಾಗಿದ್ದ ಬಸ್‌ ಹತ್ತಿ ಕುಳಿತುಕೊಂಡಿದ್ದ. ತುಂಬ ಹೊತ್ತು ಕಳೆದರೂ ಬಸ್‌ ಹೊರಡದೇ ಇದ್ದಾಗ ತಾಳ್ಮೆ ಕಳೆದುಕೊಂಡ ಯಶಪ್ಪ, ಸಿಬ್ಬಂದಿಗೆ ಬೈಯುತ್ತ ಹೋಗಿ ಚಾಲಕನ ಸೀಟಿನಲ್ಲಿಕುಳಿತು ಗಾಡಿ ಸ್ಟಾರ್ಟ್‌ ಮಾಡಿದ್ದ.

ಬಸ್‌ನಲ್ಲಿ ಇದ್ದ ಜನ ಗಾಬರಿಯಾಗಿ, ಇಳಿದು ಓಡುವ ಮೊದಲೇ ಚಾಲನೆ ಮಾಡಿ ರಸ್ತೆಯತ್ತ ತಿರುಗಿಸಿದ್ದ. ಸ್ವಲ್ಪ ಮುಂದೆ ಸಾಗುವಷ್ಟರಲ್ಲಿಯೇ ಅಡ್ಡ ಬಂದ ಕ್ರೂಸರ್‌ವೊಂದಕ್ಕೆ ಬಸ್‌ ಡಿಕ್ಕಿಯಾಗಿತ್ತು. ಇದರಿಂದ ದಿಗಿಲುಗೊಂಡ ಯಶಪ್ಪ, ಹಠಾತ್ತನೆ ಸ್ಟೀರಿಂಗ್‌ ಬದಿಗೆ ಎಳೆದಿದ್ದರಿಂದ ಮೊಣಕಾಲೆತ್ತರದ ಡಿವೈಡರ್‌ಗೆ ಬಸ್‌ ಡಿಕ್ಕಿಯಾಗಿ ಮೇಲಕ್ಕೆ ಹತ್ತಿ ನಿಂತುಕೊಂಡಿತು. ನೆರವಿಗೆ ಧಾವಿಸಿದ ಜನ ಯಶಪ್ಪನನ್ನು ಕೆಳಗೆ ಎಳೆದು ಪೊಲೀಸರಿಗೆ ಒಪ್ಪಿಸಿದರು.

ಅದೃಷ್ಟವಶಾತ್‌ ಈ ಘಟನೆಯಲ್ಲಿಯಾರಿಗೂ ಗಾಯಗಳಾಗಿಲ್ಲ. ಕ್ರೂಸರ್‌ ಸ್ವಲ್ಪಮಟ್ಟಿಗೆ ಜಖಂಗೊಂಡಿದೆ. ”ಸೋಮವಾರ ವಾರದ ಸಂತೆ ಇದ್ದದ್ದರಿಂದ ಬಸ್‌ ನಿಲ್ದಾಣದ ಸುತ್ತಮುತ್ತ ವಿಪರೀತ ಜನರಿದ್ದರು. ಆದರೆ, ಜನಸಂದಣಿ ಇರುವ ಕಡೆ ಬಸ್‌ ಬಂದಿಲ್ಲ. ಹಾಗೊಂದು ವೇಳೆ ಆಗಿದ್ದರೆ ಭಾರಿ ಅನಾಹುತ ಆಗುತ್ತಿತ್ತು,” ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಚಾಲಕನ ಮೈಮರೆವು! : ಕುಡುಕನ ಕೈಗೆ ಬಸ್ಸಿನ ಕೀ ಸಿಕ್ಕಿದ್ದು ಹೇಗೆ ಎಂದು ವಿಚಾರಿಸಿದಾಗ ಚಾಲಕನ ಮೈಮರೆವು ಬೆಳಕಿಗೆ ಬಂದಿದೆ. ರವಾನೆ ಅನುಮತಿ ಪಡೆಯಲು ಚಾಲಕ ಕಂಟ್ರೋಲ್‌ ರೂಮ್‌ಗೆ ಹೋಗಿದ್ದ ವೇಳೆ, ಈ ಕುಡುಕ ಪ್ರಯಾಣಿಕ ಬಸ್‌ ಓಡಿಸಿಕೊಂಡು ಹೋಗಲು ಯತ್ನಿಸಿದ್ದ. ”ಸಾಮಾನ್ಯವಾಗಿ ಬಸ್‌ನ ಕೀ ಜತೆಗೆ ತೆಗೆದುಕೊಂಡು ಹೋಗುತ್ತೇನೆ. ಆದರೆ, ಈ ದಿನ ಮೈಮರೆತು ಗಾಡಿಯಲ್ಲಿಯೇ ಬಿಟ್ಟಿದ್ದರಿಂದ ಎಡವಟ್ಟಾಯಿತು,” ಎಂದು ಚಾಲಕ ಒಪ್ಪಿಕೊಂಡಿದ್ದಾರೆ.

lokesh

Recent Posts

ಸಿಎಂ ರಾಜಕೀಯ ಕಾರ್ಯದರ್ಶಿ ವಜಾ : ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್‌ ಅಹಮ್ಮದ್‌ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ…

11 mins ago

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

2 hours ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

2 hours ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

3 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

4 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

4 hours ago