ಬೀದರ್ : ಮದ್ಯದ ಅಮಲಿನಲ್ಲಿ ತೂರಾಡುತ್ತಿದ್ದ ವ್ಯಕ್ತಿಯೊಬ್ಬ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಪ್ರಯಾಣಿಕ ಬಸ್ ಅನ್ನೇ ಹೈಜಾಕ್ ಮಾಡಲು ಯತ್ನಿಸಿ ಪೊಲೀಸರ ಅತಿಥಿಯಾಗಿದ್ದಾನೆ. ಔರಾದ್ ಬಸ್ ನಿಲ್ದಾಣದಲ್ಲಿ ಸೋಮವಾರ ಈ ಘಟನೆ ನಡೆದಿದೆ. ಕರಂಜಿ ಗ್ರಾಮದ ಯಶಪ್ಪ ಸೂರ್ಯವಂಶಿ ಘಟನೆಯ ಸೂತ್ರಧಾರ.
ವಾರದ ಸಂತೆಗೆ ಬಂದಿದ್ದ ಈತ ಎಲ್ಲವನ್ನೂ ಮರೆತು ಕಂಠಮಟ್ಟ ಮದ್ಯ ಸೇವನೆ ಮಾಡಿದ್ದ. ಬಳಿಕ ಊರು ನೆನಪಾಗಿ ವಾಪಸಾಗಲು ಔರಾದ್ ಬಸ್ ನಿಲ್ದಾಣಕ್ಕೆ ಬಂದಿದ್ದ. ಬೀದರ್ ಕಡೆ ಹೊರಡಲು ಅಣಿಯಾಗಿದ್ದ ಬಸ್ ಹತ್ತಿ ಕುಳಿತುಕೊಂಡಿದ್ದ. ತುಂಬ ಹೊತ್ತು ಕಳೆದರೂ ಬಸ್ ಹೊರಡದೇ ಇದ್ದಾಗ ತಾಳ್ಮೆ ಕಳೆದುಕೊಂಡ ಯಶಪ್ಪ, ಸಿಬ್ಬಂದಿಗೆ ಬೈಯುತ್ತ ಹೋಗಿ ಚಾಲಕನ ಸೀಟಿನಲ್ಲಿಕುಳಿತು ಗಾಡಿ ಸ್ಟಾರ್ಟ್ ಮಾಡಿದ್ದ.
ಬಸ್ನಲ್ಲಿ ಇದ್ದ ಜನ ಗಾಬರಿಯಾಗಿ, ಇಳಿದು ಓಡುವ ಮೊದಲೇ ಚಾಲನೆ ಮಾಡಿ ರಸ್ತೆಯತ್ತ ತಿರುಗಿಸಿದ್ದ. ಸ್ವಲ್ಪ ಮುಂದೆ ಸಾಗುವಷ್ಟರಲ್ಲಿಯೇ ಅಡ್ಡ ಬಂದ ಕ್ರೂಸರ್ವೊಂದಕ್ಕೆ ಬಸ್ ಡಿಕ್ಕಿಯಾಗಿತ್ತು. ಇದರಿಂದ ದಿಗಿಲುಗೊಂಡ ಯಶಪ್ಪ, ಹಠಾತ್ತನೆ ಸ್ಟೀರಿಂಗ್ ಬದಿಗೆ ಎಳೆದಿದ್ದರಿಂದ ಮೊಣಕಾಲೆತ್ತರದ ಡಿವೈಡರ್ಗೆ ಬಸ್ ಡಿಕ್ಕಿಯಾಗಿ ಮೇಲಕ್ಕೆ ಹತ್ತಿ ನಿಂತುಕೊಂಡಿತು. ನೆರವಿಗೆ ಧಾವಿಸಿದ ಜನ ಯಶಪ್ಪನನ್ನು ಕೆಳಗೆ ಎಳೆದು ಪೊಲೀಸರಿಗೆ ಒಪ್ಪಿಸಿದರು.
ಅದೃಷ್ಟವಶಾತ್ ಈ ಘಟನೆಯಲ್ಲಿಯಾರಿಗೂ ಗಾಯಗಳಾಗಿಲ್ಲ. ಕ್ರೂಸರ್ ಸ್ವಲ್ಪಮಟ್ಟಿಗೆ ಜಖಂಗೊಂಡಿದೆ. ”ಸೋಮವಾರ ವಾರದ ಸಂತೆ ಇದ್ದದ್ದರಿಂದ ಬಸ್ ನಿಲ್ದಾಣದ ಸುತ್ತಮುತ್ತ ವಿಪರೀತ ಜನರಿದ್ದರು. ಆದರೆ, ಜನಸಂದಣಿ ಇರುವ ಕಡೆ ಬಸ್ ಬಂದಿಲ್ಲ. ಹಾಗೊಂದು ವೇಳೆ ಆಗಿದ್ದರೆ ಭಾರಿ ಅನಾಹುತ ಆಗುತ್ತಿತ್ತು,” ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಚಾಲಕನ ಮೈಮರೆವು! : ಕುಡುಕನ ಕೈಗೆ ಬಸ್ಸಿನ ಕೀ ಸಿಕ್ಕಿದ್ದು ಹೇಗೆ ಎಂದು ವಿಚಾರಿಸಿದಾಗ ಚಾಲಕನ ಮೈಮರೆವು ಬೆಳಕಿಗೆ ಬಂದಿದೆ. ರವಾನೆ ಅನುಮತಿ ಪಡೆಯಲು ಚಾಲಕ ಕಂಟ್ರೋಲ್ ರೂಮ್ಗೆ ಹೋಗಿದ್ದ ವೇಳೆ, ಈ ಕುಡುಕ ಪ್ರಯಾಣಿಕ ಬಸ್ ಓಡಿಸಿಕೊಂಡು ಹೋಗಲು ಯತ್ನಿಸಿದ್ದ. ”ಸಾಮಾನ್ಯವಾಗಿ ಬಸ್ನ ಕೀ ಜತೆಗೆ ತೆಗೆದುಕೊಂಡು ಹೋಗುತ್ತೇನೆ. ಆದರೆ, ಈ ದಿನ ಮೈಮರೆತು ಗಾಡಿಯಲ್ಲಿಯೇ ಬಿಟ್ಟಿದ್ದರಿಂದ ಎಡವಟ್ಟಾಯಿತು,” ಎಂದು ಚಾಲಕ ಒಪ್ಪಿಕೊಂಡಿದ್ದಾರೆ.
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…