ಮದ್ದೂರು : ಆಕಸ್ಮಿಕವಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಹಾಗೂ ಜಾನುವಾರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬುಳ್ಳನ ದೊಡ್ಡಿ ಗ್ರಾಮದಲ್ಲಿ ಸಂಭವಿಸಿದೆ.
ತಾಲ್ಲೂಕಿನ ಮಾಲಗಾರನಹಳ್ಳಿ ಗ್ರಾಮದ ಮುತ್ತುರಾಜ್ ಮೃತಪಟ್ಟ ರೈತನಾಗಿದ್ದು, ಮೃತನು ಬುಳ್ಳನದೊಡ್ಡಿ ಗ್ರಾಮದಲ್ಲಿ ತನ್ನ ಮಾವನ ಜಮೀನನ್ನು ಉಳುಮೆ ಮಾಡುತ್ತಿದ್ದ ವೇಳೆ ಕೃಷಿ ಪಂಪ್ಸೆಟ್ನ ವಿದ್ಯುತ್ ತಂತಿಯನ್ನು ತುಳಿದ ಕ್ಷಣವೇ ಎತ್ತು ಸ್ಥಳದಲ್ಲೇ ಮೃತಪಟ್ಟಿದ್ದು, ತೀರ್ವವಾಗಿ ಅಸ್ವಸ್ಥಗೊಂಡಿದ್ದ ಮುತ್ತುರಾಜ್ ಅವರನ್ನು ಚಿಕಿತ್ಸೆಗಾಗಿ ಕೆ.ಹೊನ್ನಲಗೆರೆ ಪ್ರಾಥಮಿಕ ಆಸ್ಪತ್ರೆಗೆ ಕರೆತಂದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ಮುತ್ತುರಾಜ್ಗೆ ಪತ್ನಿ ರುಕ್ಮಿಣಿ, ಓರ್ವ ಪುತ್ರ ಹಾಗೂ ಪುತ್ರಿಯಿದ್ದಾರೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೈಯಕ್ತಿಕ ಆರ್ಥಿಕ ಸಹಾಯ : ಕದಲೂರು ಉದಯ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೃತಪಟ್ಟ ಮುತ್ತುರಾಜ್ ಕುಟುಂಬಕ್ಕೆ ಕೆ.ಎಂ.ರವಿ ಸಾಂತ್ವನ ಹೇಳಿ ಧನ ಸಹಾಯ ನೀಡಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…