ಶ್ರೀನಗರ : ಜಾಮೀನಿನ ಮೇಲೆ ಬಿಡುಗಡೆಯಾದ ಶಂಕಿತ ಉಗ್ರರ ಮೇಲೆ ನಿಗಾ ಇಡಲು ಅವರ ಕಾಲಿಗೆ ಜಿಪಿಎಸ್ ಆಧಾರಿತ ಬಳೆಯನ್ನು ಜಮ್ಮು ಕಾಶ್ಮೀರ ಪೊಲೀಸರು ಪರಿಚಯಿಸಿದ್ದಾರೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿ ಬಂಧನಕ್ಕೆ ಒಳಗಾದ ಜಿಪಿಎಸ್ ಟ್ರ್ಯಾಕರ್ ಅಳವಡಿಸಿದ ದೇಶದ ಮೊದಲ ಪೊಲೀಸ್ ಪಡೆ ಎಂಬ ಹೆಗ್ಗಳಿಗೆ ಜಮ್ಮು ಕಾಶ್ಮೀರ ಪೊಲೀಸರು ಪಾತ್ರರಾಗಿದ್ದಾರೆ.
ಜಿಪಿಎಸ್ ಟ್ರ್ಯಾಕರ್ ಆಂಕ್ಲೆಟ್ ವ್ಯಕ್ತಿಯ ಪಾದದ ಸುತ್ತಲೂ ಧರಿಸಬಹುದಾದ ಸಾಧನವಾಗಿದ್ದು, ಮೇಲ್ವಿಚಾರಣೆ ಮಾಡಲು ಮತ್ತು ಅವರ ಚಲನೆಯನ್ನು ಟ್ರ್ಯಾಕ್ ಮಾಡುತ್ತದೆ. ಜಾಮೀನು, ಪೆರೋಲ್ ಮತ್ತು ಗೃಹಬಂಧನದಲ್ಲಿರುವ ಆರೋಪಿಗಳ ಚಲನವಲನವನ್ನು ಪತ್ತೆಹಚ್ಚಲು ಮತ್ತು ಜೈಲುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದಟ್ಟಣೆಯನ್ನು ಕಡಿಮೆ ಮಾಡಲು ಈ ಸಾಧನವನ್ನು ಈಗಾಗಲೇ ಅಮೆರಿಕ, ಯುನೈಟೆಡ್ ಕಿಂಗ್ಡಮ್, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ನಲ್ಲಿ ಬಳಸಲಾಗುತ್ತಿದೆ.
ಹಲವು ಉಗ್ರ ಸಂಘಟನೆಯ ಜೊತೆ ಸಂಪರ್ಕ ಹೊಂದಿದ್ದ ಗುಲಾಂ ಮೊಹಮ್ಮದ್ ಭಟ್ ಮೇಲೆ ದೇಶದ್ರೋಹದ ಪ್ರಕರಣ ದಾಖಲಾಗಿತ್ತು. ಈತನ ಜಾಮೀನು ಅರ್ಜಿಯನ್ನು ಆಲಿಸಿದ ಜಮ್ಮು ಕಾಶ್ಮೀರದಲ್ಲಿರುವ ರಾಷ್ಟ್ರೀಯ ತನಿಖಾ ದಳದ ನ್ಯಾಯಾಲಯ ಪೊಲೀಸರಿಗೆ ಜಿಪಿಎಸ್ ಆಧಾರಿತ ಸಾಧನ ಅಳವಡಿಸಲು ಸೂಚಿಸಿ ಜಾಮೀನು ಮಂಜೂರು ಮಾಡಿತು. ಪ್ರಸ್ತುತ ಈ ಸಾಧನವನ್ನು ದೇಶದ್ರೋಹ ಪ್ರಕರಣದಡಿ ಬಂಧಿತರಾಗುವ ಆರೋಪಿಗಳಿಗೆ ಮಾತ್ರ ಬಳಸಲು ನಿರ್ಧರಿಸಲಾಗಿದೆ.
ಆರೋಪಿ ಗುಲಾಂ ಮೊಹಮ್ಮದ್ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಹಿಜ್ಬುಲ್ ಮುಜಾಹಿದ್ದೀನ್ನ ಆಜ್ಞೆಯ ಮೇರೆಗೆ ಭಯೋತ್ಪಾದನಾ ಸಂಘಟನೆಗೆ ಹಣಕಾಸಿನ ನೆರವು ನೀಡುವಲ್ಲಿ ತೊಡಗಿಸಿಕೊಂಡಿದ್ದ. ಉಗ್ರರಿಗೆ 2.5 ಲಕ್ಷ ರೂ. ಹಣವನ್ನು ಸಾಗಿಸಲು ಪ್ರಯತ್ನಿಸುತ್ತಿದ್ದಾಗ ಆತನನ್ನು ಬಂಧಿಸಲಾಗಿತ್ತು.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…
ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…
ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…